ಉತ್ತರಾಖಂಡದ ಹಿಮಾಲಯ ಪ್ರದೇಶದ ಕೇದಾರನಾಥ ಹಿಂದೆ ಶನಿವಾರ ಭಾರೀ ಹಿಮಕುಸಿತ (avalanche) ಸಂಭವಿಸಿದೆ. ದೇವಾಲಯಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ಬದರಿನಾಥ್-ಕೇದಾರನಾಥ ದೇವಾಲಯ ಸಮಿತಿ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ.
ಮಾಹಿತಿಯ ಪ್ರಕಾರ, ಕೇದಾರನಾಥದ ಹಿಂದಿನ ಹಿಮನದಿಯು ಕಳೆದ ತಿಂಗಳಿನಿಂದ ಎರಡನೇ ಬಾರಿಗೆ ಹಿಮದಿಂದ ಮುಳುಗಿದೆ.ಶನಿವಾರ ಬೆಳಗ್ಗೆ ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಕೇದಾರನಾಥ ದೇಗುಲದಿಂದ ಸುಮಾರು 6-7 ಕಿಲೋಮೀಟರ್ ದೂರದಲ್ಲಿರುವ ಚೋರಬರಿ ಗ್ಲೇಶಿಯಲ್ ಸರೋವರ ಪ್ರದೇಶದ ಕೇದಾರ್ ಶಿಖರ ಪ್ರದೇಶದಲ್ಲಿ ಭಾರಿ ಹಿಮಕುಸಿತ ಸಂಭವಿಸಿತ್ತು. ಕೇದಾರನಾಥ ದೇಗುಲದ ಮೂಲಕ ಹರಿಯುವ ಮಂದಾಕಿನಿ ನದಿಯ ಉಪನದಿಯಾದ ಸರಸ್ವತಿ ನದಿಯಲ್ಲಿ ಯಾವುದೇ ಜೀವಹಾನಿ, ಆಸ್ತಿಪಾಸ್ತಿ ಅಥವಾ ನೀರಿನ ಮಟ್ಟದಲ್ಲಿ ಹೆಚ್ಚಳದ ಬಗ್ಗೆ ವರದಿಯಾಗಿಲ್ಲ ಮತ್ತು ಎಂದಿನಂತೆ ಯಾತ್ರೆ ನಡೆಯುತ್ತಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.ಕಳೆದ ತಿಂಗಳು ಸೆಪ್ಟೆಂಬರ್ 22 ರಂದು ಇದೇ ಪ್ರದೇಶದಲ್ಲಿ ಹಿಮಕುಸಿತ ವರದಿಯಾಗಿತ್ತು.ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…
ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…
ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…