ಜೈವಿಕ ಕೃಷಿಯ ಮಹತ್ವದ ಬಗ್ಗೆ ವಿಶ್ವದೆಲ್ಲೆಡೆ ಇಂದು ಜಾಗೃತಿ ಮೂಡಿದೆ. ರಾಸಾಯನಿಕ ಕೃಷಿಯಿಂದಾಗುವ ಪರಿಣಾಮಗಳ ಬಗ್ಗೆ ಭಾರತದ ರೈತರಲ್ಲೂ ಅರಿವು ಹೆಚ್ಚುತ್ತಿದೆ. ಭೂಮಿಯ ರಕ್ಷಣೆಯಲ್ಲಿ ಜೈವಿಕ ಕೃಷಿ ಮಹತ್ವದ ಪಾತ್ರ ವಹಿಸುತ್ತಿದ್ದು, ಇದನ್ನು ಇನ್ನಷ್ಟು ವಿಸ್ತರಿಸುವ ಕೆಲಸ ಮಾಡಲಾಗುತ್ತಿದೆ ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯೆಲ್ ಹೇಳಿದರು.…..ಮುಂದೆ ಓದಿ….
ದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಭಾರತದಲ್ಲಿ ಪ್ರಸ್ತುತ, ಬಹುದೊಡ್ಡ ಪ್ರಮಾಣದಲ್ಲಿ ನೈಸರ್ಗಿಕ ವಿಧಾನದಲ್ಲಿ ಕೃಷಿ ಬೆಳೆಗಳ ಉತ್ಪಾದನೆ ಮಾಡಲಾಗುತ್ತಿದೆ. ಭಾರತದ ವಿಶಿಷ್ಟ ನೈಸರ್ಗಿಕ ಉತ್ಪನ್ನಗಳನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಬೇಕಾಗಿದೆ. ಇದರಿಂದ ರಫ್ತು ಹೆಚ್ಚಳಕ್ಕೆ ಅನುಕೂಲವಾಗುತ್ತದೆ ಎಂದು ಹೇಳಿದರು. ಸಹಕಾರಿ ಸಂಸ್ಥೆಗಳ ಮೂಲಕ ದೇಶದ ರೈತರು ಜೈವಿಕ ಕೃಷಿಯಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ದೇಶದ ರೈತರು ಅಪಾರ ಸಾಮರ್ಥ್ಯ ಹೊಂದಿದ್ದು, ಆಹಾರ ಸುರಕ್ಷತೆಯನ್ನು ಖಾತ್ರಿಪಡಿಸಿದ್ದಾರೆ. ನೈಸರ್ಗಿಕ ಕೃಷಿ ವಿಧಾನ ಇಂದು ರಾಷ್ಟ್ರೀಯ ಆದ್ಯತೆಯಾಗಿ ಮಹತ್ವ ಪಡೆದುಕೊಂಡಿದೆ. ಮಣ್ಣು, ನೀರು ಸಂರಕ್ಷಣೆಗೆ ನೈಸರ್ಗಿಕ ಕೃಷಿ ವಿಧಾನವೊಂದೇ ಪರ್ಯಾಯ ಮಾರ್ಗವಾಗಿದೆ ಎಂದು ತಿಳಿಸಿದರು.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…