ಜೈವಿಕ ಕೃಷಿಯ ಮಹತ್ವದ ಬಗ್ಗೆ ವಿಶ್ವದೆಲ್ಲೆಡೆ ಇಂದು ಜಾಗೃತಿ ಮೂಡಿದೆ. ರಾಸಾಯನಿಕ ಕೃಷಿಯಿಂದಾಗುವ ಪರಿಣಾಮಗಳ ಬಗ್ಗೆ ಭಾರತದ ರೈತರಲ್ಲೂ ಅರಿವು ಹೆಚ್ಚುತ್ತಿದೆ. ಭೂಮಿಯ ರಕ್ಷಣೆಯಲ್ಲಿ ಜೈವಿಕ ಕೃಷಿ ಮಹತ್ವದ ಪಾತ್ರ ವಹಿಸುತ್ತಿದ್ದು, ಇದನ್ನು ಇನ್ನಷ್ಟು ವಿಸ್ತರಿಸುವ ಕೆಲಸ ಮಾಡಲಾಗುತ್ತಿದೆ ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯೆಲ್ ಹೇಳಿದರು.…..ಮುಂದೆ ಓದಿ….
ದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಭಾರತದಲ್ಲಿ ಪ್ರಸ್ತುತ, ಬಹುದೊಡ್ಡ ಪ್ರಮಾಣದಲ್ಲಿ ನೈಸರ್ಗಿಕ ವಿಧಾನದಲ್ಲಿ ಕೃಷಿ ಬೆಳೆಗಳ ಉತ್ಪಾದನೆ ಮಾಡಲಾಗುತ್ತಿದೆ. ಭಾರತದ ವಿಶಿಷ್ಟ ನೈಸರ್ಗಿಕ ಉತ್ಪನ್ನಗಳನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಬೇಕಾಗಿದೆ. ಇದರಿಂದ ರಫ್ತು ಹೆಚ್ಚಳಕ್ಕೆ ಅನುಕೂಲವಾಗುತ್ತದೆ ಎಂದು ಹೇಳಿದರು. ಸಹಕಾರಿ ಸಂಸ್ಥೆಗಳ ಮೂಲಕ ದೇಶದ ರೈತರು ಜೈವಿಕ ಕೃಷಿಯಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ದೇಶದ ರೈತರು ಅಪಾರ ಸಾಮರ್ಥ್ಯ ಹೊಂದಿದ್ದು, ಆಹಾರ ಸುರಕ್ಷತೆಯನ್ನು ಖಾತ್ರಿಪಡಿಸಿದ್ದಾರೆ. ನೈಸರ್ಗಿಕ ಕೃಷಿ ವಿಧಾನ ಇಂದು ರಾಷ್ಟ್ರೀಯ ಆದ್ಯತೆಯಾಗಿ ಮಹತ್ವ ಪಡೆದುಕೊಂಡಿದೆ. ಮಣ್ಣು, ನೀರು ಸಂರಕ್ಷಣೆಗೆ ನೈಸರ್ಗಿಕ ಕೃಷಿ ವಿಧಾನವೊಂದೇ ಪರ್ಯಾಯ ಮಾರ್ಗವಾಗಿದೆ ಎಂದು ತಿಳಿಸಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…