Advertisement
MIRROR FOCUS

ಆರುಷಿ ಮೈ ಡಾಟರ್ ಯೋಜನೆ ಜಾರಿಗಾಗಿ ಜಾಗೃತಿ | ಹೆಣ್ಣು ಭ್ರೂಣ ಹತ್ಯೆ ತಡೆಗೆ ಸಮಾಜ ಸೇವಕನ ಪಾದಯಾತ್ರೆ

Share

ಜಗತ್ತು, ದೇಶ, ತಂತ್ರಜ್ಞಾನ ಎಷ್ಟೇ ಮುಂದುವರೆದರು ಹೆಣ್ಣು, ಗಂಡು ಎಂಬ ಕೀಳು ಭಾವನೆ ಇನ್ನು ಸಂಪೂರ್ಣವಾಗಿ ಹೋದಂತಿಲ್ಲ. ಈಷ್ಟೆಲ್ಲಾ ಶಿಕ್ಷಣ ಇದ್ರೂ ಜನ ಬದಲಾಗಿಲ್ಲ. ಹೆಣ್ಣು-ಗಂಡು ಮಕ್ಕಳು ಒಂದೇ. ಹೆಣ್ಣು (Girl Child)ಕೂಡ ಗಂಡು ಮಕ್ಕಳಷ್ಟೇ ಸಮರ್ಥಳು ಅನ್ನೋದನ್ನು ಅದೆಷ್ಟೋ ಮಂದಿ ಇವಾಗಲೂ ಒಪ್ಪಿಕೊಳ್ಳಲು ತಯಾರಿಲ್ಲ. ಈ ನಿಟ್ಟಿನಲ್ಲಿ ಹೆಣ್ಣು ಭ್ರೂಣ ಹತ್ಯೆ (Fetusicide) ತಡೆಯಲು ಸಮಾಜ ಸೇವಕ ಹೊನ್ನಾಳಿ ನಗರದ ಚನ್ನೇಶ್.ಸಿ.ಎಂ ಜಕ್ಕಾಳಿ ಕನ್ಯಾಕುಮಾರಿಯಿಂದ ಸೆ 23 ರಿಂದ ದೆಹಲಿಯವರೆಗೂ ಪಾದಯಾತ್ರೆ ಮೂಲಕ ಜನ ಜಾಗೃತಿ(Public awareness) ಮೂಡಿಸಿ ದೇಶದ ಗಮನ ಸೆಳೆಯಲು ಮುಂದಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ದೇಶದ ಗಮನ ಸೆಳೆಯಲು ಆರುಷಿ ಮೈ ಡಾಟರ್ ಅನುಷ್ಠಾನ ಕನ್ಯಾಕುಮಾರಿಯಿಂದ ಪಾದಯಾತ್ರೆ ಹೊರಟಿದ್ದು, ಅ.19ಕ್ಕೆ ದಾವಣಗೆರೆಗೆ ಆಗಮಿಸಲಿದೆ. ಯಶಸ್ವಿ ಇಪ್ಪತ್ತೊಂದನೆ ದಿನದ ಪಾದಯಾತ್ರೆ ಇದಾಗಿದೆ. ಹೆಣ್ಣು ಭ್ರೂಣ ಹತ್ಯೆ ಖಂಡಿಸಿ ಹಲವಾರು ವರ್ಷಗಳಿಂದ ಒಂದಿಲ್ಲೊಂದು ರೀತಿಯ ಹೊರಾಟ ನಡೆಯುತ್ತಿದ್ದರೂ ಅದಕ್ಕೆ ಬೇಕಾದ ಕಾನೂನು ನೆರಳು ಇದ್ದರೂ ಸಹಿತ ಅನುಷ್ಠಾನ ಮಾಡುವಲ್ಲಿ ಜನಪ್ರತಿನಿಧಿಗಳು ಅಧಿಕಾರಿಗಳು, ವಿಫಲವಾಗಿದ್ದಾರೆ. ಹೆಣ್ಣು ಭ್ರೂಣ ಹತ್ಯೆ ನಿಂತಿದೆಯೇ ಎಂಬ ಪ್ರಶ್ನೆಗೆ ಇಂದಿಗೂ ಉತ್ತರ ದೊರಕಿಲ್ಲ.

ಪ್ರಸ್ತುತ ದಿನಮಾನಗಳಲ್ಲಿ ಯುವಕರಿಗೆ ವಿವಾಹವಾಗಲು ಹೆಣ್ಣು ಸಿಗುತ್ತಿಲ್ಲ ಎಂಬ ಬಲವಾದ ಕೂಗು ಕೇಳಿ ಬರುತ್ತಿದ್ದು ಇದೆ ರೀತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಸಮಸ್ಯೆ ಉಲ್ಬಣ ಆಗಬಹುದೆಂಬ ಆತಂಕ ಇದ್ದೆ ಇದೆ. ಇದಕ್ಕೆಲ್ಲ ಉತ್ತರ ನೀಡಬೇಕಾದ ಇಲಾಖೆ ಜನಪ್ರತಿನಿಧಿಗಳು ಅಧಿಕಾರಿಗಳು ಜಾಣ ಕುರುಡುತನ ಪ್ರದರ್ಶಿಸುತ್ತಿದ್ದಾರೆ ಎನ್ನುವ ಕೂಗು ಸಾರ್ವಜನಿಕರ ವಲಯದಿಂದ ಕೇಳಿಬರುತ್ತಿದೆ. ಇದಕ್ಕೆಲ್ಲ ನವೀನ ಮಾದರಿಯ ಮೂಲಕ ತಾಯಿಯ ಗರ್ಭಾವಸ್ಥೆಯಿಂದಲೇ ಭ್ರೂಣವನ್ನು ಡಿಜಿಟಲ್ ಕೋಡ್ ನೀಡುವ ಮೂಲಕ ಹೆಣ್ಣು ಭ್ರೂಣ ತಡೆಗಟ್ಟುವ ಹಾಗೂ ಹೆಣ್ಣು ಸಂತತಿ ಉಳಿಸುವ ಪಣ ತೊಟ್ಟು ರಾಜ್ಯ ಮತ್ತು ಕೇಂದ್ರ ಸಚಿವರುಗಳ ಗಮನ ಸೆಳೆದು ಚರ್ಚಿಸಿದ್ದಾದರೂ ಅನುಷ್ಠಾನ ಆಗದಿರುವ ಬಗ್ಗೆ ಚನ್ನೇಶ್.ಸಿ.ಬೇಸರ ವ್ಯಕ್ತಪಡಿಸುತ್ತಾರೆ.

ಭ್ರೂಣ ಹತ್ಯೆ ತಡೆಗೆ ನವೀನ ಗುರುತಿನ ಮಾದರಿ ಬೇಕಾಗಿದೆ. ಬಹುತೇಕ ಸೌಲಭ್ಯಕ್ಕಾಗಿ ಪ್ರಸ್ತುತ ಗುರುತಿನ ಚೀಟಿಯಂತೆ ಇರುವ ಆಧಾರ್ ಕಾರ್ಡ್ನಂತೆ ತಾಯಿಯ (ಗರ್ಭಿಣಿಯಾದ ಮಹಿಳೆ) ಭ್ರೂಣದಿಂದಲೆ ಹೆರಿಗೆ ನಂತರದ ಆರೈಕೆಯ ಹಂತದವರೆಗೂ ಈ ನಂಬರ್ ಬಳಕೆ ಮಾಡಬೇಕು. ಆದ್ದರಿಂದ ಆರುಷಿ (ಮೈ ಡಾಟರ್) ನಡಿ ಪ್ರಸ್ತುತ ಸರ್ಕಾರದಲ್ಲಿ ಇರುವ ಆರುಷಿ ಯೋಜನೆಯ ಮೂಲಕ ಆರೋಗ್ಯ ಸಹಾಯಕಿಯರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರ ಸೇವೆಯ ಮೂಲಕ ಈ ಯೋಜನೆಯನ್ನು  ಸುಲಭವಾಗಿ ಅನುಷ್ಠಾನಗೊಳಿಸಬಹುದು ಎನ್ನುತ್ತಾರೆ ಚನ್ನೇಶ್.

To prevent female foeticide, social worker Channesh CM Jakkali of Honnali Nagar has started a walk from Kanyakumari to Delhi from September 23 to raise public awareness and attract the attention of the country. Aarushi My Daughter’s implementation of Padayatra started from Kanyakumari and will arrive at Davangere on 19th. This was a successful twenty-first day trek.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

13 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

18 hours ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

1 day ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

1 day ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

2 days ago