ವಿಶ್ವ ಜಲ ದಿನ | ನೀರಿನ ಸುಸ್ಥಿರ ನಿರ್ವಹಣೆಗಾಗಿ ಜಾಗೃತಿ

March 22, 2025
10:59 PM
ಅರಣ್ಯನಾಶ, ಹವಾಮಾನ ಬದಲಾವಣೆ, ತಾಪಮಾನ ಏರಿಕೆ ಪರಿಣಾಮ ಅಂತರ್ಜಲ ಮಟ್ಟ ಕುಸಿಯುತ್ತಿದೆ. ಈ ನಿಟ್ಟಿನಲ್ಲಿ ನೀರಿನ ಮಹತ್ವವನ್ನು ಅರಿತು ಮುಂದಿನ ಪೀಳಿಗೆಗೂ ಜಲಸಂಪನ್ಮೂಲವನ್ನು ಉಳಿಸುವ ಕಾರ್ಯ ನಾವು ಮಾಡಬೇಕಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. (Photo: File)

ಇಂದು ವಿಶ್ವ ಜಲ ದಿನ. ಇಂದು ನೀರಿನ ಮಹತ್ವವನ್ನು ಹಲವು ಕಡೆ, ಹಲವು ಸಂದರ್ಭಗಳು ಎತ್ತಿ ತೋರಿಸುತ್ತದೆ. ನೀರಿನ ಸಂಪನ್ಮೂಲಗಳ  ಸುಸ್ಥಿರ ನಿರ್ವಹಣೆಗಾಗಿ ಈ ದಿನವನ್ನು ಆಚರಿಸಲಾಗುತ್ತಿದೆ.ಈ  ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದ ತಮ್ಮ ಪೋಸ್ಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಕಲ ಜೀವರಾಶಿಗಳಿಗೂ ಅಗತ್ಯವಿರುವ ನೀರನ್ನು ಸಂರಕ್ಷಿಸುವ, ಮಿತವಾಗಿ ಬಳಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ.

ಅರಣ್ಯನಾಶ, ಹವಾಮಾನ ಬದಲಾವಣೆ, ತಾಪಮಾನ ಏರಿಕೆ ಪರಿಣಾಮ ಅಂತರ್ಜಲ ಮಟ್ಟ ಕುಸಿಯುತ್ತಿದೆ. ಈ ನಿಟ್ಟಿನಲ್ಲಿ ನೀರಿನ ಮಹತ್ವವನ್ನು ಅರಿತು ಮುಂದಿನ ಪೀಳಿಗೆಗೂ ಜಲಸಂಪನ್ಮೂಲವನ್ನು ಉಳಿಸುವ ಕಾರ್ಯ ನಾವು ಮಾಡಬೇಕಿದೆ ಎಂದು ಹೇಳಿದ್ದಾರೆ. ಹಿಮನದಿಗಳ ಸಂರಕ್ಷಣೆ ಈ ವರ್ಷದ ವಿಶ್ವ ಜಲದಿನದ ಘೋಷ ವಾಕ್ಯವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧೆಡೆಗಳಲ್ಲಿ  ವಿಶ್ವ ಜಲ ದಿನಾಚರಣೆ ಆಚರಿಸಲಾಯಿತು. ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಗರಸಭೆ ವತಿಯಿಂದ, ಸಾರ್ವಜನಿಕರ ಸಹಕಾರದೊಂದಿಗೆ ನಡೆದ ವಿಶ್ವ ಜಲ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ  ಗಗನಾರ್ಯ ಅಯ್ಯ ಪಂತರ ಕಲ್ಯಾಣಿಯ ಸ್ವಚ್ಛತಾ ಕಾರ್ಯ ನಡೆಯಿತು.

ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿದ್ದ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಮಾತನಾಡಿ, ಯಾವುದೇ ನದಿ ಮೂಲಗಳಿಲ್ಲದೇ ಇರುವ ಬಯಲು ಸೀಮೆಯ ಪ್ರದೇಶಗಳಲ್ಲಿ, ಕೆರೆ, ಕುಂಟೆ ಮೊದಲಾದ ನೀರಿನ ಮೂಲಗಳನ್ನು ಕಾಪಾಡಿಕೊಳ್ಳಬೇಕಿರುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಹೇಳಿದರು. ಇತ್ತೀಚಿನ ದಿನಗಳಲ್ಲಿ ನೀರಿನ ಸಂಗ್ರಹಣ ವ್ಯವಸ್ಥೆಗಳು ವಿವಿಧ ಕಾರಣಗಳಿಂದಾಗಿ ಕ್ಷೀಣಿಸುತ್ತಿರುವುದರಿಂದ ಜಿಲ್ಲೆಯಲ್ಲಿ ತಾಪಮಾನ ಹೆಚ್ಚುತ್ತಿರುವುದು ಕಂಡು ಬಂದಿದೆ. ಈ ದಿಸೆಯಲ್ಲಿ ಜಲ ಮೂಲಗಳನ್ನು ಸಂರಕ್ಷಿಸುವ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಶಾಸಕ ಧೀರಜ್ ಮುನಿರಾಜು, ತಹಸೀಲ್ದಾರ್ ವಿಭಾ ವಿದ್ಯಾ ರಾಥೋಡ್, ನಗರಸಭೆ ಪೌರಾಯುಕ್ತ ಕಾರ್ತಿಕೇಶ್ವರ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror