ಇಂದು ವಿಶ್ವ ಜಲ ದಿನ. ಇಂದು ನೀರಿನ ಮಹತ್ವವನ್ನು ಹಲವು ಕಡೆ, ಹಲವು ಸಂದರ್ಭಗಳು ಎತ್ತಿ ತೋರಿಸುತ್ತದೆ. ನೀರಿನ ಸಂಪನ್ಮೂಲಗಳ ಸುಸ್ಥಿರ ನಿರ್ವಹಣೆಗಾಗಿ ಈ ದಿನವನ್ನು ಆಚರಿಸಲಾಗುತ್ತಿದೆ.ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದ ತಮ್ಮ ಪೋಸ್ಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಕಲ ಜೀವರಾಶಿಗಳಿಗೂ ಅಗತ್ಯವಿರುವ ನೀರನ್ನು ಸಂರಕ್ಷಿಸುವ, ಮಿತವಾಗಿ ಬಳಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ.
ಅರಣ್ಯನಾಶ, ಹವಾಮಾನ ಬದಲಾವಣೆ, ತಾಪಮಾನ ಏರಿಕೆ ಪರಿಣಾಮ ಅಂತರ್ಜಲ ಮಟ್ಟ ಕುಸಿಯುತ್ತಿದೆ. ಈ ನಿಟ್ಟಿನಲ್ಲಿ ನೀರಿನ ಮಹತ್ವವನ್ನು ಅರಿತು ಮುಂದಿನ ಪೀಳಿಗೆಗೂ ಜಲಸಂಪನ್ಮೂಲವನ್ನು ಉಳಿಸುವ ಕಾರ್ಯ ನಾವು ಮಾಡಬೇಕಿದೆ ಎಂದು ಹೇಳಿದ್ದಾರೆ. ಹಿಮನದಿಗಳ ಸಂರಕ್ಷಣೆ ಈ ವರ್ಷದ ವಿಶ್ವ ಜಲದಿನದ ಘೋಷ ವಾಕ್ಯವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧೆಡೆಗಳಲ್ಲಿ ವಿಶ್ವ ಜಲ ದಿನಾಚರಣೆ ಆಚರಿಸಲಾಯಿತು. ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಗರಸಭೆ ವತಿಯಿಂದ, ಸಾರ್ವಜನಿಕರ ಸಹಕಾರದೊಂದಿಗೆ ನಡೆದ ವಿಶ್ವ ಜಲ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಗಗನಾರ್ಯ ಅಯ್ಯ ಪಂತರ ಕಲ್ಯಾಣಿಯ ಸ್ವಚ್ಛತಾ ಕಾರ್ಯ ನಡೆಯಿತು.
ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿದ್ದ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಮಾತನಾಡಿ, ಯಾವುದೇ ನದಿ ಮೂಲಗಳಿಲ್ಲದೇ ಇರುವ ಬಯಲು ಸೀಮೆಯ ಪ್ರದೇಶಗಳಲ್ಲಿ, ಕೆರೆ, ಕುಂಟೆ ಮೊದಲಾದ ನೀರಿನ ಮೂಲಗಳನ್ನು ಕಾಪಾಡಿಕೊಳ್ಳಬೇಕಿರುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಹೇಳಿದರು. ಇತ್ತೀಚಿನ ದಿನಗಳಲ್ಲಿ ನೀರಿನ ಸಂಗ್ರಹಣ ವ್ಯವಸ್ಥೆಗಳು ವಿವಿಧ ಕಾರಣಗಳಿಂದಾಗಿ ಕ್ಷೀಣಿಸುತ್ತಿರುವುದರಿಂದ ಜಿಲ್ಲೆಯಲ್ಲಿ ತಾಪಮಾನ ಹೆಚ್ಚುತ್ತಿರುವುದು ಕಂಡು ಬಂದಿದೆ. ಈ ದಿಸೆಯಲ್ಲಿ ಜಲ ಮೂಲಗಳನ್ನು ಸಂರಕ್ಷಿಸುವ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಶಾಸಕ ಧೀರಜ್ ಮುನಿರಾಜು, ತಹಸೀಲ್ದಾರ್ ವಿಭಾ ವಿದ್ಯಾ ರಾಥೋಡ್, ನಗರಸಭೆ ಪೌರಾಯುಕ್ತ ಕಾರ್ತಿಕೇಶ್ವರ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿದ್ದರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…