Advertisement
MIRROR FOCUS

ವಿಶ್ವ ಜಲ ದಿನ | ನೀರಿನ ಸುಸ್ಥಿರ ನಿರ್ವಹಣೆಗಾಗಿ ಜಾಗೃತಿ

Share

ಇಂದು ವಿಶ್ವ ಜಲ ದಿನ. ಇಂದು ನೀರಿನ ಮಹತ್ವವನ್ನು ಹಲವು ಕಡೆ, ಹಲವು ಸಂದರ್ಭಗಳು ಎತ್ತಿ ತೋರಿಸುತ್ತದೆ. ನೀರಿನ ಸಂಪನ್ಮೂಲಗಳ  ಸುಸ್ಥಿರ ನಿರ್ವಹಣೆಗಾಗಿ ಈ ದಿನವನ್ನು ಆಚರಿಸಲಾಗುತ್ತಿದೆ.ಈ  ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದ ತಮ್ಮ ಪೋಸ್ಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಕಲ ಜೀವರಾಶಿಗಳಿಗೂ ಅಗತ್ಯವಿರುವ ನೀರನ್ನು ಸಂರಕ್ಷಿಸುವ, ಮಿತವಾಗಿ ಬಳಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ.

ಅರಣ್ಯನಾಶ, ಹವಾಮಾನ ಬದಲಾವಣೆ, ತಾಪಮಾನ ಏರಿಕೆ ಪರಿಣಾಮ ಅಂತರ್ಜಲ ಮಟ್ಟ ಕುಸಿಯುತ್ತಿದೆ. ಈ ನಿಟ್ಟಿನಲ್ಲಿ ನೀರಿನ ಮಹತ್ವವನ್ನು ಅರಿತು ಮುಂದಿನ ಪೀಳಿಗೆಗೂ ಜಲಸಂಪನ್ಮೂಲವನ್ನು ಉಳಿಸುವ ಕಾರ್ಯ ನಾವು ಮಾಡಬೇಕಿದೆ ಎಂದು ಹೇಳಿದ್ದಾರೆ. ಹಿಮನದಿಗಳ ಸಂರಕ್ಷಣೆ ಈ ವರ್ಷದ ವಿಶ್ವ ಜಲದಿನದ ಘೋಷ ವಾಕ್ಯವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧೆಡೆಗಳಲ್ಲಿ  ವಿಶ್ವ ಜಲ ದಿನಾಚರಣೆ ಆಚರಿಸಲಾಯಿತು. ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಗರಸಭೆ ವತಿಯಿಂದ, ಸಾರ್ವಜನಿಕರ ಸಹಕಾರದೊಂದಿಗೆ ನಡೆದ ವಿಶ್ವ ಜಲ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ  ಗಗನಾರ್ಯ ಅಯ್ಯ ಪಂತರ ಕಲ್ಯಾಣಿಯ ಸ್ವಚ್ಛತಾ ಕಾರ್ಯ ನಡೆಯಿತು.

ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿದ್ದ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಮಾತನಾಡಿ, ಯಾವುದೇ ನದಿ ಮೂಲಗಳಿಲ್ಲದೇ ಇರುವ ಬಯಲು ಸೀಮೆಯ ಪ್ರದೇಶಗಳಲ್ಲಿ, ಕೆರೆ, ಕುಂಟೆ ಮೊದಲಾದ ನೀರಿನ ಮೂಲಗಳನ್ನು ಕಾಪಾಡಿಕೊಳ್ಳಬೇಕಿರುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಹೇಳಿದರು. ಇತ್ತೀಚಿನ ದಿನಗಳಲ್ಲಿ ನೀರಿನ ಸಂಗ್ರಹಣ ವ್ಯವಸ್ಥೆಗಳು ವಿವಿಧ ಕಾರಣಗಳಿಂದಾಗಿ ಕ್ಷೀಣಿಸುತ್ತಿರುವುದರಿಂದ ಜಿಲ್ಲೆಯಲ್ಲಿ ತಾಪಮಾನ ಹೆಚ್ಚುತ್ತಿರುವುದು ಕಂಡು ಬಂದಿದೆ. ಈ ದಿಸೆಯಲ್ಲಿ ಜಲ ಮೂಲಗಳನ್ನು ಸಂರಕ್ಷಿಸುವ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಶಾಸಕ ಧೀರಜ್ ಮುನಿರಾಜು, ತಹಸೀಲ್ದಾರ್ ವಿಭಾ ವಿದ್ಯಾ ರಾಥೋಡ್, ನಗರಸಭೆ ಪೌರಾಯುಕ್ತ ಕಾರ್ತಿಕೇಶ್ವರ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರತದ ಕೃಷಿ ರಫ್ತಿನಲ್ಲಿ ದೊಡ್ಡ ಬದಲಾವಣೆ – ಎಮ್ಮೆ ಮಾಂಸ ರಫ್ತು 5 ಬಿಲಿಯನ್ ಡಾಲರ್ ಗುರಿಯತ್ತ..!

ಭಾರತದ ಎಮ್ಮೆ ಮಾಂಸ ರಫ್ತು 2025-26ರಲ್ಲಿ 5.1 ಬಿಲಿಯನ್ ಡಾಲರ್ ತಲುಪಿದ್ದು, 2026-27ರಲ್ಲಿ…

7 hours ago

ಹಬ್ಬದ ಬೇಡಿಕೆಯನ್ನೇ ಕೃಷಿ ಅವಕಾಶವನ್ನಾಗಿ ಮಾಡಿದ ಕೇರಳ : 2.52 ಲಕ್ಷ ಟನ್ ತರಕಾರಿ ಉತ್ಪಾದನೆ

ಓಣಂ ಹಬ್ಬದ ಸಂದರ್ಭದ ಹೆಚ್ಚಿದ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಕೇರಳ ಕೃಷಿ ಇಲಾಖೆ ನಡೆಸಿದ…

14 hours ago

ಹವಾಮಾನ ವರದಿ | 20-08-2026 | ಕರಾವಳಿಗೆ ಇನ್ನೂ ಮಳೆ ವಿರಾಮವಿಲ್ಲ…! ಆ.23–25 ಕ್ಕೆ ಮತ್ತೆ ಮಳೆ ಹೆಚ್ಚಾಗುವ ಸೂಚನೆ

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನವೂ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು,…

16 hours ago

ಅಡಿಕೆ ತೋಟಗಳು ಹೆಚ್ಚುತ್ತಿವೆ… ಹಾಗಿದ್ದರೆ ಕರ್ನಾಟಕದಲ್ಲಿ ಇಳುವರಿ ಏಕೆ ಕುಸಿಯುತ್ತಿದೆ?

ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶ ಕಳೆದ ಐದು ವರ್ಷಗಳಲ್ಲಿ ಶೇ.32.42ರಷ್ಟು ಹೆಚ್ಚಾದರೂ, ಉತ್ಪಾದನೆ…

17 hours ago

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

1 day ago