ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಖ್ಯಾತಿ ಪಡೆದಿರುವ ಕಪ್ಪತ ಗುಡ್ಡ ಬೆಂಕಿಗೆ ಆಹುತಿ ಆಗುವುದನ್ನು ತಪ್ಪಿಸುವ ಕುರಿತು ಜನಜಾಗೃತಿ ಮೂಡಿಸಲಾಗುತ್ತಿದೆ. ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್ ಪ್ರದೇಶದಲ್ಲಿರುವ ಕಪ್ಪತಗುಡ್ಡ ಸಾಕಷ್ಟು ಸಸ್ಯ ವೈವಿಧ್ಯತೆ ಮತ್ತು ವನ್ಯಜೀವಿಯಿಂದ ಕೂಡಿದೆ. ಬೇಸಿಗೆ ಆರಂಭದಲ್ಲೇ ಗುಡ್ಡಕ್ಕೆ ಬೆಂಕಿ ತಗುಲಿ ಹೆಚ್ಚಿನ ಪ್ರದೇಶ ಹಾನಿಗೊಳಗಾಗಿದೆ. ಈ ಹಿನ್ನೆಲೆಯಲ್ಲಿ ಮುಂದೆ ಕಾಡ್ಗಿಚ್ಚು ತಪ್ಪಿಸುವ ದೃಷ್ಠಿಯಿಂದ ಕಪ್ಪತಗುಡ್ಡ ತಪ್ಪಲಿನ ಗ್ರಾಮಗಳಲ್ಲಿ ಅರಿವು ಮೂಡಿಸಲಾಗುತ್ತಿದೆ. ಗ್ರಾಮಗಳಲ್ಲಿ ಭಿತ್ತಿ ಪತ್ರಗಳ ಪ್ರದರ್ಶನ, ಬೀದಿ ನಾಟಕದ ಮೂಲಕ ಜನಜಾಗೃತಿ ಮೂಡಿಸಲಾಗುತ್ತಿದೆ. ಗುಡ್ಡದ ತಪ್ಪಲಿನಲ್ಲಿರುವ ಜಮೀನುಗಳು ಹಾಗೂ ಕಪ್ಪತಗುಡ್ಡದಲ್ಲಿ ಯಾರೂ ಬೆಂಕಿ ಹಚ್ಚದಂತೆ ಎಚ್ಚರಿಕೆ ನೀಡಲಾಗುತ್ತಿದೆ.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…