ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಖ್ಯಾತಿ ಪಡೆದಿರುವ ಕಪ್ಪತ ಗುಡ್ಡ ಬೆಂಕಿಗೆ ಆಹುತಿ ಆಗುವುದನ್ನು ತಪ್ಪಿಸುವ ಕುರಿತು ಜನಜಾಗೃತಿ ಮೂಡಿಸಲಾಗುತ್ತಿದೆ. ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್ ಪ್ರದೇಶದಲ್ಲಿರುವ ಕಪ್ಪತಗುಡ್ಡ ಸಾಕಷ್ಟು ಸಸ್ಯ ವೈವಿಧ್ಯತೆ ಮತ್ತು ವನ್ಯಜೀವಿಯಿಂದ ಕೂಡಿದೆ. ಬೇಸಿಗೆ ಆರಂಭದಲ್ಲೇ ಗುಡ್ಡಕ್ಕೆ ಬೆಂಕಿ ತಗುಲಿ ಹೆಚ್ಚಿನ ಪ್ರದೇಶ ಹಾನಿಗೊಳಗಾಗಿದೆ. ಈ ಹಿನ್ನೆಲೆಯಲ್ಲಿ ಮುಂದೆ ಕಾಡ್ಗಿಚ್ಚು ತಪ್ಪಿಸುವ ದೃಷ್ಠಿಯಿಂದ ಕಪ್ಪತಗುಡ್ಡ ತಪ್ಪಲಿನ ಗ್ರಾಮಗಳಲ್ಲಿ ಅರಿವು ಮೂಡಿಸಲಾಗುತ್ತಿದೆ. ಗ್ರಾಮಗಳಲ್ಲಿ ಭಿತ್ತಿ ಪತ್ರಗಳ ಪ್ರದರ್ಶನ, ಬೀದಿ ನಾಟಕದ ಮೂಲಕ ಜನಜಾಗೃತಿ ಮೂಡಿಸಲಾಗುತ್ತಿದೆ. ಗುಡ್ಡದ ತಪ್ಪಲಿನಲ್ಲಿರುವ ಜಮೀನುಗಳು ಹಾಗೂ ಕಪ್ಪತಗುಡ್ಡದಲ್ಲಿ ಯಾರೂ ಬೆಂಕಿ ಹಚ್ಚದಂತೆ ಎಚ್ಚರಿಕೆ ನೀಡಲಾಗುತ್ತಿದೆ.
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…
ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…
ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…
ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ…