ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ (Ayodhya) ದೀಪಾವಳಿ ಹಬ್ಬದ (Deepavali Featival) ಸಂಭ್ರಮ ಮುಗಿಲು ಮುಟ್ಟಿದೆ. ಎಲ್ಲೆಲ್ಲೂ ದೀಪಗಳ ಬೆಳಕಿನಲ್ಲಿ ರಾಮನಾಮದ ಘೋಷಣೆ ಮೊಳಗಿದೆ.
ಉತ್ತರ ಪ್ರದೇಶ (Uttar Pradesh) ಸರ್ಕಾರದಿಂದ ಸರಯೂ ನದಿ ದಂಡೆಯಲ್ಲಿ ದೀಪೋತ್ಸವ ಆಯೋಜಿಸಲಾಗಿತ್ತು. ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಸೇರಿದಂತೆ 50ಕ್ಕೂ ಹೆಚ್ಚು ದೇಶಗಳ ರಾಯಭಾರಿಗಳು ಸಂಭ್ರಮದಲ್ಲಿ ಭಾಗಿಯಾಗಿದ್ದರು. ಬರೋಬ್ಬರಿ 24 ಲಕ್ಷ ಹಣತೆಗಳು ಅಯೋಧ್ಯೆಯನ್ನು ಬೆಳಗಿದ್ದು, ಗಿನ್ನಿಸ್ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ದಾಖಲಾಯಿತು.
2017ರಿಂದ ರಾಮಮಂದಿರ (RamaMandir) ಪ್ರದೇಶದಲ್ಲಿ ದೀಪೋತ್ಸವ ಆಯೋಜಿಸಲಾಗುತ್ತಿದೆ ಮತ್ತು ಪ್ರತಿ ವರ್ಷ ಹೊಸ ದಾಖಲೆ ಸೃಷ್ಟಿಸುತ್ತಿದೆ. 2022ರಲ್ಲಿ ಅಯೋಧ್ಯೆಯ ಸರಯೂ ನದಿ ತೀರದಲ್ಲಿ 16 ಲಕ್ಷ ಹಣತೆ ಬೆಳಕಿಸಲಾಗಿತ್ತು. ಈ ಬಾರಿ 25,000 ಸ್ವಯಂಸೇವಕರು ಒಟ್ಟು 51 ಘಾಟ್ಗಳಲ್ಲಿ 24 ಲಕ್ಷ ಹಣತೆ ಅಯೋಧ್ಯೆಯಲ್ಲಿ ಬೆಳಗಿಸಿದ್ದಾರೆ.
2017ರಲ್ಲಿ 51,000 ಹಣತೆಗಳನ್ನು ಹಚ್ಚಲಾಗಿತ್ತು. 2019ರಲ್ಲಿ 4.10 ಲಕ್ಷ ಹಣತೆಗಳನ್ನು ಬೆಳಗಿದ್ದು, 2020ರಲ್ಲಿ 6 ಲಕ್ಷಕ್ಕೂ ಹೆಚ್ಚು, 2021ರಲ್ಲಿ 9 ಲಕ್ಷಕ್ಕೂ ಅಧಿಕ, 2022ರಲ್ಲಿ ಸುಮಾರು 15 ಲಕ್ಷ ದೀಪಗಳನ್ನು ಹಚ್ಚಲಾಗಿತ್ತು. ಇದು ವಿಶ್ವ ದಾಖಲೆಗೆ ಸಾಕ್ಷಿಯಾಗಿತ್ತು. ಈ ವರ್ಷ 2023ರಲ್ಲಿ 24 ಲಕ್ಷ ದೀಪ ಹಚ್ಚುವ ಮೂಲಕ ಹೊಸ ಗಿನ್ನಿಸ್ ದಾಖಲೆ ಬರೆಯಲಾಗಿದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…