ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ (Ayodhya) ದೀಪಾವಳಿ ಹಬ್ಬದ (Deepavali Featival) ಸಂಭ್ರಮ ಮುಗಿಲು ಮುಟ್ಟಿದೆ. ಎಲ್ಲೆಲ್ಲೂ ದೀಪಗಳ ಬೆಳಕಿನಲ್ಲಿ ರಾಮನಾಮದ ಘೋಷಣೆ ಮೊಳಗಿದೆ.
ಉತ್ತರ ಪ್ರದೇಶ (Uttar Pradesh) ಸರ್ಕಾರದಿಂದ ಸರಯೂ ನದಿ ದಂಡೆಯಲ್ಲಿ ದೀಪೋತ್ಸವ ಆಯೋಜಿಸಲಾಗಿತ್ತು. ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಸೇರಿದಂತೆ 50ಕ್ಕೂ ಹೆಚ್ಚು ದೇಶಗಳ ರಾಯಭಾರಿಗಳು ಸಂಭ್ರಮದಲ್ಲಿ ಭಾಗಿಯಾಗಿದ್ದರು. ಬರೋಬ್ಬರಿ 24 ಲಕ್ಷ ಹಣತೆಗಳು ಅಯೋಧ್ಯೆಯನ್ನು ಬೆಳಗಿದ್ದು, ಗಿನ್ನಿಸ್ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ದಾಖಲಾಯಿತು.
2017ರಿಂದ ರಾಮಮಂದಿರ (RamaMandir) ಪ್ರದೇಶದಲ್ಲಿ ದೀಪೋತ್ಸವ ಆಯೋಜಿಸಲಾಗುತ್ತಿದೆ ಮತ್ತು ಪ್ರತಿ ವರ್ಷ ಹೊಸ ದಾಖಲೆ ಸೃಷ್ಟಿಸುತ್ತಿದೆ. 2022ರಲ್ಲಿ ಅಯೋಧ್ಯೆಯ ಸರಯೂ ನದಿ ತೀರದಲ್ಲಿ 16 ಲಕ್ಷ ಹಣತೆ ಬೆಳಕಿಸಲಾಗಿತ್ತು. ಈ ಬಾರಿ 25,000 ಸ್ವಯಂಸೇವಕರು ಒಟ್ಟು 51 ಘಾಟ್ಗಳಲ್ಲಿ 24 ಲಕ್ಷ ಹಣತೆ ಅಯೋಧ್ಯೆಯಲ್ಲಿ ಬೆಳಗಿಸಿದ್ದಾರೆ.
2017ರಲ್ಲಿ 51,000 ಹಣತೆಗಳನ್ನು ಹಚ್ಚಲಾಗಿತ್ತು. 2019ರಲ್ಲಿ 4.10 ಲಕ್ಷ ಹಣತೆಗಳನ್ನು ಬೆಳಗಿದ್ದು, 2020ರಲ್ಲಿ 6 ಲಕ್ಷಕ್ಕೂ ಹೆಚ್ಚು, 2021ರಲ್ಲಿ 9 ಲಕ್ಷಕ್ಕೂ ಅಧಿಕ, 2022ರಲ್ಲಿ ಸುಮಾರು 15 ಲಕ್ಷ ದೀಪಗಳನ್ನು ಹಚ್ಚಲಾಗಿತ್ತು. ಇದು ವಿಶ್ವ ದಾಖಲೆಗೆ ಸಾಕ್ಷಿಯಾಗಿತ್ತು. ಈ ವರ್ಷ 2023ರಲ್ಲಿ 24 ಲಕ್ಷ ದೀಪ ಹಚ್ಚುವ ಮೂಲಕ ಹೊಸ ಗಿನ್ನಿಸ್ ದಾಖಲೆ ಬರೆಯಲಾಗಿದೆ.
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…