ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ (Ayodhya) ದೀಪಾವಳಿ ಹಬ್ಬದ (Deepavali Featival) ಸಂಭ್ರಮ ಮುಗಿಲು ಮುಟ್ಟಿದೆ. ಎಲ್ಲೆಲ್ಲೂ ದೀಪಗಳ ಬೆಳಕಿನಲ್ಲಿ ರಾಮನಾಮದ ಘೋಷಣೆ ಮೊಳಗಿದೆ.
ಉತ್ತರ ಪ್ರದೇಶ (Uttar Pradesh) ಸರ್ಕಾರದಿಂದ ಸರಯೂ ನದಿ ದಂಡೆಯಲ್ಲಿ ದೀಪೋತ್ಸವ ಆಯೋಜಿಸಲಾಗಿತ್ತು. ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಸೇರಿದಂತೆ 50ಕ್ಕೂ ಹೆಚ್ಚು ದೇಶಗಳ ರಾಯಭಾರಿಗಳು ಸಂಭ್ರಮದಲ್ಲಿ ಭಾಗಿಯಾಗಿದ್ದರು. ಬರೋಬ್ಬರಿ 24 ಲಕ್ಷ ಹಣತೆಗಳು ಅಯೋಧ್ಯೆಯನ್ನು ಬೆಳಗಿದ್ದು, ಗಿನ್ನಿಸ್ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ದಾಖಲಾಯಿತು.
2017ರಿಂದ ರಾಮಮಂದಿರ (RamaMandir) ಪ್ರದೇಶದಲ್ಲಿ ದೀಪೋತ್ಸವ ಆಯೋಜಿಸಲಾಗುತ್ತಿದೆ ಮತ್ತು ಪ್ರತಿ ವರ್ಷ ಹೊಸ ದಾಖಲೆ ಸೃಷ್ಟಿಸುತ್ತಿದೆ. 2022ರಲ್ಲಿ ಅಯೋಧ್ಯೆಯ ಸರಯೂ ನದಿ ತೀರದಲ್ಲಿ 16 ಲಕ್ಷ ಹಣತೆ ಬೆಳಕಿಸಲಾಗಿತ್ತು. ಈ ಬಾರಿ 25,000 ಸ್ವಯಂಸೇವಕರು ಒಟ್ಟು 51 ಘಾಟ್ಗಳಲ್ಲಿ 24 ಲಕ್ಷ ಹಣತೆ ಅಯೋಧ್ಯೆಯಲ್ಲಿ ಬೆಳಗಿಸಿದ್ದಾರೆ.
2017ರಲ್ಲಿ 51,000 ಹಣತೆಗಳನ್ನು ಹಚ್ಚಲಾಗಿತ್ತು. 2019ರಲ್ಲಿ 4.10 ಲಕ್ಷ ಹಣತೆಗಳನ್ನು ಬೆಳಗಿದ್ದು, 2020ರಲ್ಲಿ 6 ಲಕ್ಷಕ್ಕೂ ಹೆಚ್ಚು, 2021ರಲ್ಲಿ 9 ಲಕ್ಷಕ್ಕೂ ಅಧಿಕ, 2022ರಲ್ಲಿ ಸುಮಾರು 15 ಲಕ್ಷ ದೀಪಗಳನ್ನು ಹಚ್ಚಲಾಗಿತ್ತು. ಇದು ವಿಶ್ವ ದಾಖಲೆಗೆ ಸಾಕ್ಷಿಯಾಗಿತ್ತು. ಈ ವರ್ಷ 2023ರಲ್ಲಿ 24 ಲಕ್ಷ ದೀಪ ಹಚ್ಚುವ ಮೂಲಕ ಹೊಸ ಗಿನ್ನಿಸ್ ದಾಖಲೆ ಬರೆಯಲಾಗಿದೆ.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…