ಅಯೋಧ್ಯೆ ಸಂಭ್ರಮ | ಮನೆ ಮನೆಗಳಲ್ಲಿ ರಾಮ ಸಂಭ್ರಮ | ಜೈ ಶ್ರೀರಾಮ್‌ ಘೋಷಣೆ | ಇಡೀ ದಿನ ರಾಮಾರ್ಪಣ |

January 22, 2024
7:00 PM
ದೇಶದಲ್ಲಿ ಇಂದು ಇಡೀ ದಿನ ರಾಮಾರ್ಪಣ.

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಪ್ರತಿಷ್ಟಾಪನೆಯ ಸಂಭ್ರಮ ದೇಶದೆಲ್ಲೆಡೆ ಮನೆ ಮಾಡಿತ್ತು. ಎಲ್ಲೆಡೆಯೂ ಘೋಷಣೆ, ರಾಮತಾರಕ ಮಂತ್ರ  ಜಪಿಸುತ್ತಿದ್ದಂತೆಯೇ ರಾಮಲಲ್ಲಾ ಪ್ರತಿಷ್ಟಾಪನೆ ನಡೆದಿತ್ತು. ಇದೇ ವೇಳೆ ಇಂದು ಇಡೀ ದೇಶದಲ್ಲಿ ರಾಮಜಪ. ಶುಭ ಕಾರ್ಯಕ್ರಮಗಳಲ್ಲಿ ಪರದೆಯ ಮೂಲಕ ರಾಮ ವೈಭವ ವೀಕ್ಷಿಸಿದರೆ, ದೇವಸ್ಥಾನಗಳಲ್ಲಿ ಬೃಹತ್‌ ಪರದೆಯ ಮೂಲಕ ನೇರ ಪ್ರಸಾರ ವೀಕ್ಷಣೆ. ಇಷ್ಟೇ ಅಲ್ಲ ಮನೆ ಮನೆಗಳಲ್ಲೂ ರಾಮನ ಪೂಜೆ ನಡೆಯಿತು. ಸೋಮವಾರ….

Advertisement
Advertisement

ಸೋಮವಾರ ಹಮ್ಮಿಕೊಂಡಿದ್ದ ಮದುವೆ, ಉಪನಯನ ಸೇರಿದಂತೆ ಸಣ್ಣ ಪುಟ್ಟ ಕಾರ್ಯಕ್ರಮಗಳಲ್ಲೂ ಅಯೋಧ್ಯೆಯ ನೇರ ಪ್ರಸಾರ ವೀಕ್ಷಣೆಗೆ ಟಿ ವಿ ಅಳವಡಿಕೆ ಮಾಡಲಾಗಿತ್ತು. ರಾಮಲಲ್ಲಾ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ಜೈ ಶ್ರೀ ರಾಮ್‌ ಘೋಷಣೆ ಮೊಳಗಿತ್ತು .ಪ್ರತೀ ಮನೆಯಲ್ಲೂ ಸಂಭ್ರಮ ಮನೆಮಾಡಿತ್ತು. ಇದೇ ವೇಳೆ…

ಇದೇ ವೇಳೆ ಮನೆಗಳಲ್ಲಿ ರಾಮತಾರಕ ಹವನ, ರಾಮ ತಾರಕ ಮಂತ್ರ ಪಠಣ ನಡೆಯಿತು. ಸುಳ್ಯ ತಾಲೂಕಿನ ವಳಲಂಬೆಯ ಮುರಳಿಕೃಷ್ಣ ಭಟ್‌ ಅವರ ಮನೆಯಲ್ಲಿ ಇಡೀ ದಿನ ರಾಮಾರ್ಪಣಂ ಕಾರ್ಯಕ್ರಮವೇ ನಡೆಯಿತು. ಬೆಳಗ್ಗೆ ಶ್ರೀ ರಾಮತಾರಕ ಹವನ, ಲೋಕಕಲ್ಯಾಣಾರ್ಥವಾಗಿ ರಾಮತಾರಕ ಮಂತ್ರ ಜಪ,  ನಡೆಯಿತು. ಸಂಜೆ ರಾಮಗೀತಾ ಕಾರ್ಯಕ್ರಮದ ಮೂಲಕ ಅಕ್ಷತಾ ಮುರಳಿಕೃಷ್ಣ ಭಟ್‌ ಅವರಿಂದ ರಾಮ ಗೀತೆ ನಡೆಯಿತು. ಈ ಹಾಡುಗಳನ್ನು ಯೂಟ್ಯೂಬ್‌ ಮೂಲಕ ನೇರಪ್ರಸಾರವನ್ನೂ ಮಾಡಿದರು.

 

Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜಾನುವಾರುಗಳನ್ನು ಅರಣ್ಯದಲ್ಲಿ ಮೇವು | ಆದೇಶವನ್ನು ಹಿಂಪಡೆಯುವಂತೆ ರೈತರು ಒತ್ತಾಯ
July 28, 2025
10:30 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ಅರಣ್ಯ ಇಲಾಖೆಯಿಂದ 11.50 ಕೋಟಿ ಸಸಿ ನೆಡುವ ಗುರಿ
July 28, 2025
10:23 PM
by: ದ ರೂರಲ್ ಮಿರರ್.ಕಾಂ
ರಾಮನ ಆದರ್ಶ ಸರ್ವಕಾಲಿಕ : ರಾಘವೇಶ್ವರ ಶ್ರೀ
July 28, 2025
8:34 PM
by: The Rural Mirror ಸುದ್ದಿಜಾಲ
ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು
July 28, 2025
8:24 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group