ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಪ್ರತಿಷ್ಟಾಪನೆಯ ಸಂಭ್ರಮ ದೇಶದೆಲ್ಲೆಡೆ ಮನೆ ಮಾಡಿತ್ತು. ಎಲ್ಲೆಡೆಯೂ ಘೋಷಣೆ, ರಾಮತಾರಕ ಮಂತ್ರ ಜಪಿಸುತ್ತಿದ್ದಂತೆಯೇ ರಾಮಲಲ್ಲಾ ಪ್ರತಿಷ್ಟಾಪನೆ ನಡೆದಿತ್ತು. ಇದೇ ವೇಳೆ ಇಂದು ಇಡೀ ದೇಶದಲ್ಲಿ ರಾಮಜಪ. ಶುಭ ಕಾರ್ಯಕ್ರಮಗಳಲ್ಲಿ ಪರದೆಯ ಮೂಲಕ ರಾಮ ವೈಭವ ವೀಕ್ಷಿಸಿದರೆ, ದೇವಸ್ಥಾನಗಳಲ್ಲಿ ಬೃಹತ್ ಪರದೆಯ ಮೂಲಕ ನೇರ ಪ್ರಸಾರ ವೀಕ್ಷಣೆ. ಇಷ್ಟೇ ಅಲ್ಲ ಮನೆ ಮನೆಗಳಲ್ಲೂ ರಾಮನ ಪೂಜೆ ನಡೆಯಿತು. ಸೋಮವಾರ….
ಸೋಮವಾರ ಹಮ್ಮಿಕೊಂಡಿದ್ದ ಮದುವೆ, ಉಪನಯನ ಸೇರಿದಂತೆ ಸಣ್ಣ ಪುಟ್ಟ ಕಾರ್ಯಕ್ರಮಗಳಲ್ಲೂ ಅಯೋಧ್ಯೆಯ ನೇರ ಪ್ರಸಾರ ವೀಕ್ಷಣೆಗೆ ಟಿ ವಿ ಅಳವಡಿಕೆ ಮಾಡಲಾಗಿತ್ತು. ರಾಮಲಲ್ಲಾ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ಜೈ ಶ್ರೀ ರಾಮ್ ಘೋಷಣೆ ಮೊಳಗಿತ್ತು .ಪ್ರತೀ ಮನೆಯಲ್ಲೂ ಸಂಭ್ರಮ ಮನೆಮಾಡಿತ್ತು. ಇದೇ ವೇಳೆ…
ಇದೇ ವೇಳೆ ಮನೆಗಳಲ್ಲಿ ರಾಮತಾರಕ ಹವನ, ರಾಮ ತಾರಕ ಮಂತ್ರ ಪಠಣ ನಡೆಯಿತು. ಸುಳ್ಯ ತಾಲೂಕಿನ ವಳಲಂಬೆಯ ಮುರಳಿಕೃಷ್ಣ ಭಟ್ ಅವರ ಮನೆಯಲ್ಲಿ ಇಡೀ ದಿನ ರಾಮಾರ್ಪಣಂ ಕಾರ್ಯಕ್ರಮವೇ ನಡೆಯಿತು. ಬೆಳಗ್ಗೆ ಶ್ರೀ ರಾಮತಾರಕ ಹವನ, ಲೋಕಕಲ್ಯಾಣಾರ್ಥವಾಗಿ ರಾಮತಾರಕ ಮಂತ್ರ ಜಪ, ನಡೆಯಿತು. ಸಂಜೆ ರಾಮಗೀತಾ ಕಾರ್ಯಕ್ರಮದ ಮೂಲಕ ಅಕ್ಷತಾ ಮುರಳಿಕೃಷ್ಣ ಭಟ್ ಅವರಿಂದ ರಾಮ ಗೀತೆ ನಡೆಯಿತು. ಈ ಹಾಡುಗಳನ್ನು ಯೂಟ್ಯೂಬ್ ಮೂಲಕ ನೇರಪ್ರಸಾರವನ್ನೂ ಮಾಡಿದರು.
ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಆಧುನಿಕ ಮೂಲಭೂತ…
ದಾವಣಗೆರೆ ನಗರ ಸೇರಿದಂತೆ ಜಿಲ್ಲಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು…
ಇತ್ತೀಚಿನ ದಿನಗಳಲ್ಲಿ ಯುವಕರು ಹೃದಯಾಘಾತಕ್ಕೆ ಒಳಗಾಗುತ್ತಿರುವುದರಿಂದ ಜನರಲ್ಲಿ ಹೃದಯದ ವಿಷಯದಲ್ಲಿ ಭಯದ ವಾತಾವರಣ…
ಸುಳ್ಳು ಸುದ್ದಿ ಹರಡುವವರು ಮತ್ತು ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ದ ಸೂಕ್ತ ಕಾನೂನು…
ಬಾಹ್ಯಕಾಶದಲ್ಲಿ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಹೆಸರುಕಾಳು ಹಾಗೂ ಮೆಂತ್ಯ ಕಾಳುಗಳ ಮೊಳಕೆಯೊಡೆಯುವ ಪ್ರಯೋಗಗಳನ್ನು…
ಸಣ್ಣ ಹಿಡುವಳಿದಾರರಿಗೆ ಈಗ ಕಾಳುಮೆಣಸು ಕೃಷಿಯ ಬಗ್ಗೆ ಸಾಕಷ್ಟು ಗೊಂದಲ. ಇಂತಹ ಸಮಯದಲ್ಲಿ…