Advertisement
ಸುದ್ದಿಗಳು

ಅಯೋಧ್ಯೆ ಸಂಭ್ರಮ | ಮನೆ ಮನೆಗಳಲ್ಲಿ ರಾಮ ಸಂಭ್ರಮ | ಜೈ ಶ್ರೀರಾಮ್‌ ಘೋಷಣೆ | ಇಡೀ ದಿನ ರಾಮಾರ್ಪಣ |

Share

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಪ್ರತಿಷ್ಟಾಪನೆಯ ಸಂಭ್ರಮ ದೇಶದೆಲ್ಲೆಡೆ ಮನೆ ಮಾಡಿತ್ತು. ಎಲ್ಲೆಡೆಯೂ ಘೋಷಣೆ, ರಾಮತಾರಕ ಮಂತ್ರ  ಜಪಿಸುತ್ತಿದ್ದಂತೆಯೇ ರಾಮಲಲ್ಲಾ ಪ್ರತಿಷ್ಟಾಪನೆ ನಡೆದಿತ್ತು. ಇದೇ ವೇಳೆ ಇಂದು ಇಡೀ ದೇಶದಲ್ಲಿ ರಾಮಜಪ. ಶುಭ ಕಾರ್ಯಕ್ರಮಗಳಲ್ಲಿ ಪರದೆಯ ಮೂಲಕ ರಾಮ ವೈಭವ ವೀಕ್ಷಿಸಿದರೆ, ದೇವಸ್ಥಾನಗಳಲ್ಲಿ ಬೃಹತ್‌ ಪರದೆಯ ಮೂಲಕ ನೇರ ಪ್ರಸಾರ ವೀಕ್ಷಣೆ. ಇಷ್ಟೇ ಅಲ್ಲ ಮನೆ ಮನೆಗಳಲ್ಲೂ ರಾಮನ ಪೂಜೆ ನಡೆಯಿತು. ಸೋಮವಾರ….

ಸೋಮವಾರ ಹಮ್ಮಿಕೊಂಡಿದ್ದ ಮದುವೆ, ಉಪನಯನ ಸೇರಿದಂತೆ ಸಣ್ಣ ಪುಟ್ಟ ಕಾರ್ಯಕ್ರಮಗಳಲ್ಲೂ ಅಯೋಧ್ಯೆಯ ನೇರ ಪ್ರಸಾರ ವೀಕ್ಷಣೆಗೆ ಟಿ ವಿ ಅಳವಡಿಕೆ ಮಾಡಲಾಗಿತ್ತು. ರಾಮಲಲ್ಲಾ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ಜೈ ಶ್ರೀ ರಾಮ್‌ ಘೋಷಣೆ ಮೊಳಗಿತ್ತು .ಪ್ರತೀ ಮನೆಯಲ್ಲೂ ಸಂಭ್ರಮ ಮನೆಮಾಡಿತ್ತು. ಇದೇ ವೇಳೆ…

ಇದೇ ವೇಳೆ ಮನೆಗಳಲ್ಲಿ ರಾಮತಾರಕ ಹವನ, ರಾಮ ತಾರಕ ಮಂತ್ರ ಪಠಣ ನಡೆಯಿತು. ಸುಳ್ಯ ತಾಲೂಕಿನ ವಳಲಂಬೆಯ ಮುರಳಿಕೃಷ್ಣ ಭಟ್‌ ಅವರ ಮನೆಯಲ್ಲಿ ಇಡೀ ದಿನ ರಾಮಾರ್ಪಣಂ ಕಾರ್ಯಕ್ರಮವೇ ನಡೆಯಿತು. ಬೆಳಗ್ಗೆ ಶ್ರೀ ರಾಮತಾರಕ ಹವನ, ಲೋಕಕಲ್ಯಾಣಾರ್ಥವಾಗಿ ರಾಮತಾರಕ ಮಂತ್ರ ಜಪ,  ನಡೆಯಿತು. ಸಂಜೆ ರಾಮಗೀತಾ ಕಾರ್ಯಕ್ರಮದ ಮೂಲಕ ಅಕ್ಷತಾ ಮುರಳಿಕೃಷ್ಣ ಭಟ್‌ ಅವರಿಂದ ರಾಮ ಗೀತೆ ನಡೆಯಿತು. ಈ ಹಾಡುಗಳನ್ನು ಯೂಟ್ಯೂಬ್‌ ಮೂಲಕ ನೇರಪ್ರಸಾರವನ್ನೂ ಮಾಡಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

5 hours ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

1 day ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

1 day ago

ಹವಾಮಾನ ವರದಿ | 21-05-2026 | ಮೇ ಅಂತ್ಯದವರೆಗೂ ಜೋರು ಮಳೆಯ ಲಕ್ಷಣವಿಲ್ಲ..! ಕರ್ನಾಟಕದಲ್ಲಿ ಮುಂಗಾರು ಮತ್ತಷ್ಟು ವಿಳಂಬ ಸಾಧ್ಯತೆ

ರಾಜ್ಯದಲ್ಲಿ ಮಳೆಯ ಚಟುವಟಿಕೆ ಕಡಿಮೆಯಾಗಿದ್ದು, ಮೇ ಅಂತ್ಯದವರೆಗೂ ಜೋರು ಮಳೆಯ ಸಾಧ್ಯತೆ ಕಡಿಮೆ…

1 day ago

“ಕಾಕ್ರೋಚ್‌ ಜನತಾ ಪಾರ್ಟಿ” ಸದ್ದು | 60 ಲಕ್ಷ ಫಾಲೋವರ್ಸ್‌ ದಾಟಿದ ರಾಜಕೀಯ ಚಳವಳಿ..!

ಕಾಕ್ರೋಚ್‌ ಜನತಾ ಪಾರ್ಟಿ ಎಂಬ ವ್ಯಂಗ್ಯಾತ್ಮಕ ಸಾಮಾಜಿಕ ಜಾಲತಾಣ ಚಳವಳಿ 60 ಲಕ್ಷಕ್ಕೂ…

2 days ago