ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಪ್ರತಿಷ್ಟಾಪನೆಯ ಸಂಭ್ರಮ ದೇಶದೆಲ್ಲೆಡೆ ಮನೆ ಮಾಡಿತ್ತು. ಎಲ್ಲೆಡೆಯೂ ಘೋಷಣೆ, ರಾಮತಾರಕ ಮಂತ್ರ ಜಪಿಸುತ್ತಿದ್ದಂತೆಯೇ ರಾಮಲಲ್ಲಾ ಪ್ರತಿಷ್ಟಾಪನೆ ನಡೆದಿತ್ತು. ಇದೇ ವೇಳೆ ಇಂದು ಇಡೀ ದೇಶದಲ್ಲಿ ರಾಮಜಪ. ಶುಭ ಕಾರ್ಯಕ್ರಮಗಳಲ್ಲಿ ಪರದೆಯ ಮೂಲಕ ರಾಮ ವೈಭವ ವೀಕ್ಷಿಸಿದರೆ, ದೇವಸ್ಥಾನಗಳಲ್ಲಿ ಬೃಹತ್ ಪರದೆಯ ಮೂಲಕ ನೇರ ಪ್ರಸಾರ ವೀಕ್ಷಣೆ. ಇಷ್ಟೇ ಅಲ್ಲ ಮನೆ ಮನೆಗಳಲ್ಲೂ ರಾಮನ ಪೂಜೆ ನಡೆಯಿತು. ಸೋಮವಾರ….
ಸೋಮವಾರ ಹಮ್ಮಿಕೊಂಡಿದ್ದ ಮದುವೆ, ಉಪನಯನ ಸೇರಿದಂತೆ ಸಣ್ಣ ಪುಟ್ಟ ಕಾರ್ಯಕ್ರಮಗಳಲ್ಲೂ ಅಯೋಧ್ಯೆಯ ನೇರ ಪ್ರಸಾರ ವೀಕ್ಷಣೆಗೆ ಟಿ ವಿ ಅಳವಡಿಕೆ ಮಾಡಲಾಗಿತ್ತು. ರಾಮಲಲ್ಲಾ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ಜೈ ಶ್ರೀ ರಾಮ್ ಘೋಷಣೆ ಮೊಳಗಿತ್ತು .ಪ್ರತೀ ಮನೆಯಲ್ಲೂ ಸಂಭ್ರಮ ಮನೆಮಾಡಿತ್ತು. ಇದೇ ವೇಳೆ…
ಇದೇ ವೇಳೆ ಮನೆಗಳಲ್ಲಿ ರಾಮತಾರಕ ಹವನ, ರಾಮ ತಾರಕ ಮಂತ್ರ ಪಠಣ ನಡೆಯಿತು. ಸುಳ್ಯ ತಾಲೂಕಿನ ವಳಲಂಬೆಯ ಮುರಳಿಕೃಷ್ಣ ಭಟ್ ಅವರ ಮನೆಯಲ್ಲಿ ಇಡೀ ದಿನ ರಾಮಾರ್ಪಣಂ ಕಾರ್ಯಕ್ರಮವೇ ನಡೆಯಿತು. ಬೆಳಗ್ಗೆ ಶ್ರೀ ರಾಮತಾರಕ ಹವನ, ಲೋಕಕಲ್ಯಾಣಾರ್ಥವಾಗಿ ರಾಮತಾರಕ ಮಂತ್ರ ಜಪ, ನಡೆಯಿತು. ಸಂಜೆ ರಾಮಗೀತಾ ಕಾರ್ಯಕ್ರಮದ ಮೂಲಕ ಅಕ್ಷತಾ ಮುರಳಿಕೃಷ್ಣ ಭಟ್ ಅವರಿಂದ ರಾಮ ಗೀತೆ ನಡೆಯಿತು. ಈ ಹಾಡುಗಳನ್ನು ಯೂಟ್ಯೂಬ್ ಮೂಲಕ ನೇರಪ್ರಸಾರವನ್ನೂ ಮಾಡಿದರು.
NEET ಪರೀಕ್ಷೆಯ ಒತ್ತಡದಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚುತ್ತಿವೆ. ಒತ್ತಡರಹಿತ, ಅನುಭವಾಧಾರಿತ ಶಿಕ್ಷಣ…
ಮೇ ತಿಂಗಳಲ್ಲಿ ಅಡಿಕೆ ಮಾರುಕಟ್ಟೆ ಚೇತರಿಕೆ ಕಂಡುಬಂದಿದ್ದು, ಹಳೆ ಚಾಲಿಗೆ ಭಾರೀ ಬೇಡಿಕೆ…
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…