ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಪ್ರತಿಷ್ಟಾಪನೆಯ ಸಂಭ್ರಮ ದೇಶದೆಲ್ಲೆಡೆ ಮನೆ ಮಾಡಿತ್ತು. ಎಲ್ಲೆಡೆಯೂ ಘೋಷಣೆ, ರಾಮತಾರಕ ಮಂತ್ರ ಜಪಿಸುತ್ತಿದ್ದಂತೆಯೇ ರಾಮಲಲ್ಲಾ ಪ್ರತಿಷ್ಟಾಪನೆ ನಡೆದಿತ್ತು. ಇದೇ ವೇಳೆ ಇಂದು ಇಡೀ ದೇಶದಲ್ಲಿ ರಾಮಜಪ. ಶುಭ ಕಾರ್ಯಕ್ರಮಗಳಲ್ಲಿ ಪರದೆಯ ಮೂಲಕ ರಾಮ ವೈಭವ ವೀಕ್ಷಿಸಿದರೆ, ದೇವಸ್ಥಾನಗಳಲ್ಲಿ ಬೃಹತ್ ಪರದೆಯ ಮೂಲಕ ನೇರ ಪ್ರಸಾರ ವೀಕ್ಷಣೆ. ಇಷ್ಟೇ ಅಲ್ಲ ಮನೆ ಮನೆಗಳಲ್ಲೂ ರಾಮನ ಪೂಜೆ ನಡೆಯಿತು. ಸೋಮವಾರ….
ಸೋಮವಾರ ಹಮ್ಮಿಕೊಂಡಿದ್ದ ಮದುವೆ, ಉಪನಯನ ಸೇರಿದಂತೆ ಸಣ್ಣ ಪುಟ್ಟ ಕಾರ್ಯಕ್ರಮಗಳಲ್ಲೂ ಅಯೋಧ್ಯೆಯ ನೇರ ಪ್ರಸಾರ ವೀಕ್ಷಣೆಗೆ ಟಿ ವಿ ಅಳವಡಿಕೆ ಮಾಡಲಾಗಿತ್ತು. ರಾಮಲಲ್ಲಾ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ಜೈ ಶ್ರೀ ರಾಮ್ ಘೋಷಣೆ ಮೊಳಗಿತ್ತು .ಪ್ರತೀ ಮನೆಯಲ್ಲೂ ಸಂಭ್ರಮ ಮನೆಮಾಡಿತ್ತು. ಇದೇ ವೇಳೆ…
ಇದೇ ವೇಳೆ ಮನೆಗಳಲ್ಲಿ ರಾಮತಾರಕ ಹವನ, ರಾಮ ತಾರಕ ಮಂತ್ರ ಪಠಣ ನಡೆಯಿತು. ಸುಳ್ಯ ತಾಲೂಕಿನ ವಳಲಂಬೆಯ ಮುರಳಿಕೃಷ್ಣ ಭಟ್ ಅವರ ಮನೆಯಲ್ಲಿ ಇಡೀ ದಿನ ರಾಮಾರ್ಪಣಂ ಕಾರ್ಯಕ್ರಮವೇ ನಡೆಯಿತು. ಬೆಳಗ್ಗೆ ಶ್ರೀ ರಾಮತಾರಕ ಹವನ, ಲೋಕಕಲ್ಯಾಣಾರ್ಥವಾಗಿ ರಾಮತಾರಕ ಮಂತ್ರ ಜಪ, ನಡೆಯಿತು. ಸಂಜೆ ರಾಮಗೀತಾ ಕಾರ್ಯಕ್ರಮದ ಮೂಲಕ ಅಕ್ಷತಾ ಮುರಳಿಕೃಷ್ಣ ಭಟ್ ಅವರಿಂದ ರಾಮ ಗೀತೆ ನಡೆಯಿತು. ಈ ಹಾಡುಗಳನ್ನು ಯೂಟ್ಯೂಬ್ ಮೂಲಕ ನೇರಪ್ರಸಾರವನ್ನೂ ಮಾಡಿದರು.
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…