ಅಯೋಧ್ಯೆ ರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮ | ರಾಮ ಪ್ರತಿಷ್ಠಾಪನೆ ಲೈವ್‌ ವೀಕ್ಷಣೆಗೆ ಮಾರಿಷಸ್ ಉದ್ಯೋಗಿಗಳಿಗೆ 2 ಗಂಟೆ ವಿಶೇಷ ಬ್ರೇಕ್ |

January 13, 2024
11:22 AM

ಕೇವಲ ಭಾರತ(India) ಮಾತ್ರವಲ್ಲ. ಇಡೀ ವಿಶ್ವವೇ(World) ರಾಮನ ಪ್ರಾಣ ಪ್ರತಿಷ್ಠಾಪನೆಯಲ್ಲಿ(Ram Prana Prathista) ಪಾಲ್ಗೊಳ್ಳಲು ಕಾತುರವಾಗಿದೆ. ಅಯೋಧ್ಯೆಯಲ್ಲಿ (Ayodhya) ರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ವೀಕ್ಷಿಸಲು ಮಾರಿಷಸ್ (Mauritius) ಸರ್ಕಾರವು(Govt) ಜ.22 ರಂದು ಹಿಂದೂ (Hindu) ಧರ್ಮೀಯ ಉದ್ಯೋಗಿಗಳಿಗೆ 2 ಗಂಟೆಗಳ ವಿಶೇಷ ಸಮಯಾವಕಾಶ ನೀಡುವುದಾಗಿ ಪ್ರಕಟಿಸಿದೆ. ಜ.22 ರಂದು ಎರಡು ಗಂಟೆಗಳ ವಿರಾಮ ನೀಡಬೇಕೆಂದು ಹಿಂದೂ ಸಾಮಾಜಿಕ-ಸಾಂಸ್ಕೃತಿಕ ಸಂಸ್ಥೆಗಳ ಮನವಿಗೆ ಮಾರಿಷಸ್ ಸರ್ಕಾರ ಒಪ್ಪಿಗೆ ನೀಡಿದೆ.

Advertisement
Advertisement

ಪ್ರಧಾನ ಮಂತ್ರಿ ಪ್ರವಿಂದ್ ಜುಗ್ನಾಥ್ ನೇತೃತ್ವದ ಮಂತ್ರಿ ಮಂಡಳಿಯು ಶುಕ್ರವಾರ ಸಭೆ ಸೇರಿ ರಾಮಮಂದಿರ ಧಾರ್ಮಿಕ ಕಾರ್ಯಕ್ರಮವು ಸಾಂಸ್ಕೃತಿಕ ಮಹತ್ವವನ್ನು ಗುರುತಿಸಿದೆ ಮತ್ತು ಆಚರಣೆಯಲ್ಲಿ ಭಕ್ತರು ಭಾಗವಹಿಸಲು ಅನುಕೂಲ ಮಾಡಿಕೊಡಲು 2 ಗಂಟೆಗಳ ವಿರಾಮ ನೀಡುವುದಾಗಿ ಪ್ರಕಟಿಸಿತು. ಮಾರಿಷಸ್‌ನನಲ್ಲಿ ಹಿಂದೂ ಧರ್ಮವು ಪ್ರಮುಖ ಸ್ಥಾನವನ್ನು ಹೊಂದಿದೆ. 2011ರ ಅಂಕಿಅಂಶಗಳ ಪ್ರಕಾರ ಹಿಂದೂಗಳು ಸರಿಸುಮಾರು 48.5 ಪ್ರತಿಶತ ಜನಸಂಖ್ಯೆ ಹೊಂದಿದ್ದಾರೆ.

ಆಫ್ರಿಕಾ ಖಂಡದ ದೇಶಗಳ ಪೈಕಿ ಮಾರಿಷಸ್‌ನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಿಂದೂಗಳಿದ್ದಾರೆ. ಜಾಗತಿಕವಾಗಿ ಭಾರತ, ನೇಪಾಳದ ನಂತರ ಅತಿ ಹೆಚ್ಚು ಹಿಂದೂಗಳಿರುವ ಮೂರನೇ ರಾಷ್ಟ್ರ ಮಾರಿಷಸ್‌ ಆಗಿದೆ. ವಸಾಹತುಶಾಹಿ ಯುಗದಲ್ಲಿ ಭಾರತೀಯರನ್ನು ಫ್ರೆಂಚ್ ಮತ್ತು ಬ್ರಿಟಿಷ್ ತೋಟಗಳಿಗೆ ಒಪ್ಪಂದದ ಕಾರ್ಮಿಕರಾಗಿ ಕರೆತರಲಾಗಿತ್ತು. ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ಜಾರ್ಖಂಡ್, ಮಹಾರಾಷ್ಟ್ರ, ತಮಿಳುನಾಡು, ತೆಲಂಗಾಣ ಮತ್ತು ಆಂಧ್ರಪ್ರದೇಶದಂತಹ ಭಾರತೀಯ ರಾಜ್ಯಗಳಿಂದ ವಲಸೆ ಬಂದ ಪರಿಣಾಮ ಮಾರಿಷಸ್‌ನಲ್ಲಿ ಹಿಂದೂಗಳ ಸಂಖ್ಯೆ ಹೆಚ್ಚಿದೆ.

Source : Mint

The Government of Mauritius (Govt) has announced that it will give 2 hours of special time to Hindu religious employees on January 22 to watch Rama's Prana Pratishta program in Ayodhya. The Mauritius government has agreed to the request of Hindu socio-cultural organizations to give a two-hour break on January 22.

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |
June 4, 2025
11:06 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು
June 4, 2025
7:27 AM
by: The Rural Mirror ಸುದ್ದಿಜಾಲ
ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……
June 4, 2025
7:21 AM
by: ವಿವೇಕಾನಂದ ಎಚ್‌ ಕೆ
ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?
June 4, 2025
6:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group