Advertisement
MIRROR FOCUS

ಅಯೋಧ್ಯೆ ರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮ | ರಾಮ ಪ್ರತಿಷ್ಠಾಪನೆ ಲೈವ್‌ ವೀಕ್ಷಣೆಗೆ ಮಾರಿಷಸ್ ಉದ್ಯೋಗಿಗಳಿಗೆ 2 ಗಂಟೆ ವಿಶೇಷ ಬ್ರೇಕ್ |

Share

ಕೇವಲ ಭಾರತ(India) ಮಾತ್ರವಲ್ಲ. ಇಡೀ ವಿಶ್ವವೇ(World) ರಾಮನ ಪ್ರಾಣ ಪ್ರತಿಷ್ಠಾಪನೆಯಲ್ಲಿ(Ram Prana Prathista) ಪಾಲ್ಗೊಳ್ಳಲು ಕಾತುರವಾಗಿದೆ. ಅಯೋಧ್ಯೆಯಲ್ಲಿ (Ayodhya) ರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ವೀಕ್ಷಿಸಲು ಮಾರಿಷಸ್ (Mauritius) ಸರ್ಕಾರವು(Govt) ಜ.22 ರಂದು ಹಿಂದೂ (Hindu) ಧರ್ಮೀಯ ಉದ್ಯೋಗಿಗಳಿಗೆ 2 ಗಂಟೆಗಳ ವಿಶೇಷ ಸಮಯಾವಕಾಶ ನೀಡುವುದಾಗಿ ಪ್ರಕಟಿಸಿದೆ. ಜ.22 ರಂದು ಎರಡು ಗಂಟೆಗಳ ವಿರಾಮ ನೀಡಬೇಕೆಂದು ಹಿಂದೂ ಸಾಮಾಜಿಕ-ಸಾಂಸ್ಕೃತಿಕ ಸಂಸ್ಥೆಗಳ ಮನವಿಗೆ ಮಾರಿಷಸ್ ಸರ್ಕಾರ ಒಪ್ಪಿಗೆ ನೀಡಿದೆ.

Advertisement
Advertisement

ಪ್ರಧಾನ ಮಂತ್ರಿ ಪ್ರವಿಂದ್ ಜುಗ್ನಾಥ್ ನೇತೃತ್ವದ ಮಂತ್ರಿ ಮಂಡಳಿಯು ಶುಕ್ರವಾರ ಸಭೆ ಸೇರಿ ರಾಮಮಂದಿರ ಧಾರ್ಮಿಕ ಕಾರ್ಯಕ್ರಮವು ಸಾಂಸ್ಕೃತಿಕ ಮಹತ್ವವನ್ನು ಗುರುತಿಸಿದೆ ಮತ್ತು ಆಚರಣೆಯಲ್ಲಿ ಭಕ್ತರು ಭಾಗವಹಿಸಲು ಅನುಕೂಲ ಮಾಡಿಕೊಡಲು 2 ಗಂಟೆಗಳ ವಿರಾಮ ನೀಡುವುದಾಗಿ ಪ್ರಕಟಿಸಿತು. ಮಾರಿಷಸ್‌ನನಲ್ಲಿ ಹಿಂದೂ ಧರ್ಮವು ಪ್ರಮುಖ ಸ್ಥಾನವನ್ನು ಹೊಂದಿದೆ. 2011ರ ಅಂಕಿಅಂಶಗಳ ಪ್ರಕಾರ ಹಿಂದೂಗಳು ಸರಿಸುಮಾರು 48.5 ಪ್ರತಿಶತ ಜನಸಂಖ್ಯೆ ಹೊಂದಿದ್ದಾರೆ.

Advertisement

ಆಫ್ರಿಕಾ ಖಂಡದ ದೇಶಗಳ ಪೈಕಿ ಮಾರಿಷಸ್‌ನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಿಂದೂಗಳಿದ್ದಾರೆ. ಜಾಗತಿಕವಾಗಿ ಭಾರತ, ನೇಪಾಳದ ನಂತರ ಅತಿ ಹೆಚ್ಚು ಹಿಂದೂಗಳಿರುವ ಮೂರನೇ ರಾಷ್ಟ್ರ ಮಾರಿಷಸ್‌ ಆಗಿದೆ. ವಸಾಹತುಶಾಹಿ ಯುಗದಲ್ಲಿ ಭಾರತೀಯರನ್ನು ಫ್ರೆಂಚ್ ಮತ್ತು ಬ್ರಿಟಿಷ್ ತೋಟಗಳಿಗೆ ಒಪ್ಪಂದದ ಕಾರ್ಮಿಕರಾಗಿ ಕರೆತರಲಾಗಿತ್ತು. ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ಜಾರ್ಖಂಡ್, ಮಹಾರಾಷ್ಟ್ರ, ತಮಿಳುನಾಡು, ತೆಲಂಗಾಣ ಮತ್ತು ಆಂಧ್ರಪ್ರದೇಶದಂತಹ ಭಾರತೀಯ ರಾಜ್ಯಗಳಿಂದ ವಲಸೆ ಬಂದ ಪರಿಣಾಮ ಮಾರಿಷಸ್‌ನಲ್ಲಿ ಹಿಂದೂಗಳ ಸಂಖ್ಯೆ ಹೆಚ್ಚಿದೆ.

Source : Mint

Advertisement
The Government of Mauritius (Govt) has announced that it will give 2 hours of special time to Hindu religious employees on January 22 to watch Rama's Prana Pratishta program in Ayodhya. The Mauritius government has agreed to the request of Hindu socio-cultural organizations to give a two-hour break on January 22.
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎರಡನೇ ವರ್ಷದ ಆನೆ ಗಣತಿಗೆ ದಕ್ಷಿಣ ಭಾರತದ 4 ರಾಜ್ಯಗಳು ಸಜ್ಜು – ಈ ಬಾರಿ ಆನೆಗಳ ಸಂಖ್ಯೆ ಏರಲಿದೆಯಾ..?

ಈ ಪ್ರಕೃತಿಯಲ್ಲಿ(Nature) ಮನುಷ್ಯರಿಗಿಂತಲೂ(Human Being) ಪ್ರಾಣಿಗಳಿಗೇ(Animal) ಹೆಚ್ಚು ಬದುಕುವ ಹಕ್ಕಿದೆ. ಅವುಗಳ ಉಳಿವಿವಿಗಾಗಿ…

3 hours ago

Karnataka Weather |16-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಮೇ 17 ರಿಂದ ಉತ್ತಮ ಮಳೆ ಸಾಧ್ಯತೆ |

ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…

3 hours ago

ಮಳೆ ಸುರಿಯುತ್ತಿದ್ದಂತೆ ರಾಜ್ಯದಲ್ಲಿ ಡೆಂಘೀ ಭೀತಿ : ಮುಂಜಾಗ್ರತಾ ಕ್ರಮಕ್ಕೆ ಮುಂದಾದ ರಾಜ್ಯ ಆರೋಗ್ಯ ಇಲಾಖೆ

ಮುಂಗಾರು ಮಳೆ(Manson) ಆರಂಭವಾಗುತ್ತಿದ್ದಂತೆ ಸಾಂಕ್ರಮಿಕ ರೋಗಗಳು(Infectious disease) ಆರಂಭವಾಗುವುದು ಮಾಮೂಲು. ಅದರಲ್ಲೂ ಮಳೆ(Rain)…

17 hours ago

ನಮ್ಮ ಪ್ರಧಾನಿಯ ಆಸ್ತಿ ಎಷ್ಟು ಗೊತ್ತಾ..? ಅವರಿಗೆ ಜಮೀನಿಲ್ಲ, ಕಾರಿಲ್ಲ, ಸ್ವಂತ ಮನೆಯೂ ಇಲ್ಲ : ಬರೀ 3.02ಕೋಟಿ ಚರಾಸ್ತಿ

ಪ್ರಧಾನಿ ಮೋದಿ(PM Modi) ಬೇರೆ ಬೇರೆ ವಿಚಾರದಲ್ಲಿ ಉಳಿದ ರಾಜಕಾರಣಿಗಳಿಗಿಂತ(Politician) ಭಿನ್ನ. ಈ…

17 hours ago

ಇಂದು ಅಂತಾರಾಷ್ಟ್ರೀಯ ಕುಟುಂಬ ದಿನ : ಅಂದಿನ ಕೂಡು ಕುಟುಂಬ ಇಂದಿನ ವಿಭಕ್ತ ಕುಟುಂಬ

ನಮ್ಮ ದೇಶದಲ್ಲಿ ವಸುದೈವ ಕುಟುಂಬಕಂ ಎಂಬ ನುಡಿಯಿದೆ. ಇದರ ಅರ್ಥ ಇಡೀ ವಿಶ್ವವೇ(World)…

18 hours ago

ಸಿಎಎ ಅಡಿಯಲ್ಲಿ 14 ಜನರಿಗೆ ಮೊದಲ ಬಾರಿಗೆ ಪೌರತ್ವ : 14 ಮಂದಿಗೆ ಭಾರತೀಯ ಪೌರತ್ವ ಪ್ರಮಾಣ ಪತ್ರ ನೀಡಿದ ಕೇಂದ್ರ ಸರ್ಕಾರ

ಕೇಂದ್ರ ಗೃಹ ಸಚಿವಾಲಯವು(Union Home Ministry) ಸಿಎಎ(CAA) ಅಡಿಯಲ್ಲಿ ಪೌರತ್ವ ಪ್ರಮಾಣಪತ್ರಗಳ ಮೊದಲ…

18 hours ago