Advertisement
MIRROR FOCUS

ಅಯೋಧ್ಯೆ ರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮ | ರಾಮ ಪ್ರತಿಷ್ಠಾಪನೆ ಲೈವ್‌ ವೀಕ್ಷಣೆಗೆ ಮಾರಿಷಸ್ ಉದ್ಯೋಗಿಗಳಿಗೆ 2 ಗಂಟೆ ವಿಶೇಷ ಬ್ರೇಕ್ |

Share

ಕೇವಲ ಭಾರತ(India) ಮಾತ್ರವಲ್ಲ. ಇಡೀ ವಿಶ್ವವೇ(World) ರಾಮನ ಪ್ರಾಣ ಪ್ರತಿಷ್ಠಾಪನೆಯಲ್ಲಿ(Ram Prana Prathista) ಪಾಲ್ಗೊಳ್ಳಲು ಕಾತುರವಾಗಿದೆ. ಅಯೋಧ್ಯೆಯಲ್ಲಿ (Ayodhya) ರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ವೀಕ್ಷಿಸಲು ಮಾರಿಷಸ್ (Mauritius) ಸರ್ಕಾರವು(Govt) ಜ.22 ರಂದು ಹಿಂದೂ (Hindu) ಧರ್ಮೀಯ ಉದ್ಯೋಗಿಗಳಿಗೆ 2 ಗಂಟೆಗಳ ವಿಶೇಷ ಸಮಯಾವಕಾಶ ನೀಡುವುದಾಗಿ ಪ್ರಕಟಿಸಿದೆ. ಜ.22 ರಂದು ಎರಡು ಗಂಟೆಗಳ ವಿರಾಮ ನೀಡಬೇಕೆಂದು ಹಿಂದೂ ಸಾಮಾಜಿಕ-ಸಾಂಸ್ಕೃತಿಕ ಸಂಸ್ಥೆಗಳ ಮನವಿಗೆ ಮಾರಿಷಸ್ ಸರ್ಕಾರ ಒಪ್ಪಿಗೆ ನೀಡಿದೆ.

ಪ್ರಧಾನ ಮಂತ್ರಿ ಪ್ರವಿಂದ್ ಜುಗ್ನಾಥ್ ನೇತೃತ್ವದ ಮಂತ್ರಿ ಮಂಡಳಿಯು ಶುಕ್ರವಾರ ಸಭೆ ಸೇರಿ ರಾಮಮಂದಿರ ಧಾರ್ಮಿಕ ಕಾರ್ಯಕ್ರಮವು ಸಾಂಸ್ಕೃತಿಕ ಮಹತ್ವವನ್ನು ಗುರುತಿಸಿದೆ ಮತ್ತು ಆಚರಣೆಯಲ್ಲಿ ಭಕ್ತರು ಭಾಗವಹಿಸಲು ಅನುಕೂಲ ಮಾಡಿಕೊಡಲು 2 ಗಂಟೆಗಳ ವಿರಾಮ ನೀಡುವುದಾಗಿ ಪ್ರಕಟಿಸಿತು. ಮಾರಿಷಸ್‌ನನಲ್ಲಿ ಹಿಂದೂ ಧರ್ಮವು ಪ್ರಮುಖ ಸ್ಥಾನವನ್ನು ಹೊಂದಿದೆ. 2011ರ ಅಂಕಿಅಂಶಗಳ ಪ್ರಕಾರ ಹಿಂದೂಗಳು ಸರಿಸುಮಾರು 48.5 ಪ್ರತಿಶತ ಜನಸಂಖ್ಯೆ ಹೊಂದಿದ್ದಾರೆ.

ಆಫ್ರಿಕಾ ಖಂಡದ ದೇಶಗಳ ಪೈಕಿ ಮಾರಿಷಸ್‌ನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಿಂದೂಗಳಿದ್ದಾರೆ. ಜಾಗತಿಕವಾಗಿ ಭಾರತ, ನೇಪಾಳದ ನಂತರ ಅತಿ ಹೆಚ್ಚು ಹಿಂದೂಗಳಿರುವ ಮೂರನೇ ರಾಷ್ಟ್ರ ಮಾರಿಷಸ್‌ ಆಗಿದೆ. ವಸಾಹತುಶಾಹಿ ಯುಗದಲ್ಲಿ ಭಾರತೀಯರನ್ನು ಫ್ರೆಂಚ್ ಮತ್ತು ಬ್ರಿಟಿಷ್ ತೋಟಗಳಿಗೆ ಒಪ್ಪಂದದ ಕಾರ್ಮಿಕರಾಗಿ ಕರೆತರಲಾಗಿತ್ತು. ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ಜಾರ್ಖಂಡ್, ಮಹಾರಾಷ್ಟ್ರ, ತಮಿಳುನಾಡು, ತೆಲಂಗಾಣ ಮತ್ತು ಆಂಧ್ರಪ್ರದೇಶದಂತಹ ಭಾರತೀಯ ರಾಜ್ಯಗಳಿಂದ ವಲಸೆ ಬಂದ ಪರಿಣಾಮ ಮಾರಿಷಸ್‌ನಲ್ಲಿ ಹಿಂದೂಗಳ ಸಂಖ್ಯೆ ಹೆಚ್ಚಿದೆ.

Source : Mint

The Government of Mauritius (Govt) has announced that it will give 2 hours of special time to Hindu religious employees on January 22 to watch Rama's Prana Pratishta program in Ayodhya. The Mauritius government has agreed to the request of Hindu socio-cultural organizations to give a two-hour break on January 22.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

8 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

15 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

15 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

16 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

1 day ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

1 day ago