Advertisement
MIRROR FOCUS

ಅಯೋಧ್ಯೆ ರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮ | ರಾಮ ಪ್ರತಿಷ್ಠಾಪನೆ ಲೈವ್‌ ವೀಕ್ಷಣೆಗೆ ಮಾರಿಷಸ್ ಉದ್ಯೋಗಿಗಳಿಗೆ 2 ಗಂಟೆ ವಿಶೇಷ ಬ್ರೇಕ್ |

Share

ಕೇವಲ ಭಾರತ(India) ಮಾತ್ರವಲ್ಲ. ಇಡೀ ವಿಶ್ವವೇ(World) ರಾಮನ ಪ್ರಾಣ ಪ್ರತಿಷ್ಠಾಪನೆಯಲ್ಲಿ(Ram Prana Prathista) ಪಾಲ್ಗೊಳ್ಳಲು ಕಾತುರವಾಗಿದೆ. ಅಯೋಧ್ಯೆಯಲ್ಲಿ (Ayodhya) ರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ವೀಕ್ಷಿಸಲು ಮಾರಿಷಸ್ (Mauritius) ಸರ್ಕಾರವು(Govt) ಜ.22 ರಂದು ಹಿಂದೂ (Hindu) ಧರ್ಮೀಯ ಉದ್ಯೋಗಿಗಳಿಗೆ 2 ಗಂಟೆಗಳ ವಿಶೇಷ ಸಮಯಾವಕಾಶ ನೀಡುವುದಾಗಿ ಪ್ರಕಟಿಸಿದೆ. ಜ.22 ರಂದು ಎರಡು ಗಂಟೆಗಳ ವಿರಾಮ ನೀಡಬೇಕೆಂದು ಹಿಂದೂ ಸಾಮಾಜಿಕ-ಸಾಂಸ್ಕೃತಿಕ ಸಂಸ್ಥೆಗಳ ಮನವಿಗೆ ಮಾರಿಷಸ್ ಸರ್ಕಾರ ಒಪ್ಪಿಗೆ ನೀಡಿದೆ.

ಪ್ರಧಾನ ಮಂತ್ರಿ ಪ್ರವಿಂದ್ ಜುಗ್ನಾಥ್ ನೇತೃತ್ವದ ಮಂತ್ರಿ ಮಂಡಳಿಯು ಶುಕ್ರವಾರ ಸಭೆ ಸೇರಿ ರಾಮಮಂದಿರ ಧಾರ್ಮಿಕ ಕಾರ್ಯಕ್ರಮವು ಸಾಂಸ್ಕೃತಿಕ ಮಹತ್ವವನ್ನು ಗುರುತಿಸಿದೆ ಮತ್ತು ಆಚರಣೆಯಲ್ಲಿ ಭಕ್ತರು ಭಾಗವಹಿಸಲು ಅನುಕೂಲ ಮಾಡಿಕೊಡಲು 2 ಗಂಟೆಗಳ ವಿರಾಮ ನೀಡುವುದಾಗಿ ಪ್ರಕಟಿಸಿತು. ಮಾರಿಷಸ್‌ನನಲ್ಲಿ ಹಿಂದೂ ಧರ್ಮವು ಪ್ರಮುಖ ಸ್ಥಾನವನ್ನು ಹೊಂದಿದೆ. 2011ರ ಅಂಕಿಅಂಶಗಳ ಪ್ರಕಾರ ಹಿಂದೂಗಳು ಸರಿಸುಮಾರು 48.5 ಪ್ರತಿಶತ ಜನಸಂಖ್ಯೆ ಹೊಂದಿದ್ದಾರೆ.

ಆಫ್ರಿಕಾ ಖಂಡದ ದೇಶಗಳ ಪೈಕಿ ಮಾರಿಷಸ್‌ನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಿಂದೂಗಳಿದ್ದಾರೆ. ಜಾಗತಿಕವಾಗಿ ಭಾರತ, ನೇಪಾಳದ ನಂತರ ಅತಿ ಹೆಚ್ಚು ಹಿಂದೂಗಳಿರುವ ಮೂರನೇ ರಾಷ್ಟ್ರ ಮಾರಿಷಸ್‌ ಆಗಿದೆ. ವಸಾಹತುಶಾಹಿ ಯುಗದಲ್ಲಿ ಭಾರತೀಯರನ್ನು ಫ್ರೆಂಚ್ ಮತ್ತು ಬ್ರಿಟಿಷ್ ತೋಟಗಳಿಗೆ ಒಪ್ಪಂದದ ಕಾರ್ಮಿಕರಾಗಿ ಕರೆತರಲಾಗಿತ್ತು. ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ಜಾರ್ಖಂಡ್, ಮಹಾರಾಷ್ಟ್ರ, ತಮಿಳುನಾಡು, ತೆಲಂಗಾಣ ಮತ್ತು ಆಂಧ್ರಪ್ರದೇಶದಂತಹ ಭಾರತೀಯ ರಾಜ್ಯಗಳಿಂದ ವಲಸೆ ಬಂದ ಪರಿಣಾಮ ಮಾರಿಷಸ್‌ನಲ್ಲಿ ಹಿಂದೂಗಳ ಸಂಖ್ಯೆ ಹೆಚ್ಚಿದೆ.

Source : Mint

The Government of Mauritius (Govt) has announced that it will give 2 hours of special time to Hindu religious employees on January 22 to watch Rama's Prana Pratishta program in Ayodhya. The Mauritius government has agreed to the request of Hindu socio-cultural organizations to give a two-hour break on January 22.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

7 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

2 days ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 days ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

3 days ago