ಮನೆ ಮನೆಯ ಹೃದಯ ಮಂದಿರಕೆ ಅಯೋಧ್ಯೆ ಮಂದಿರ | ಅಕ್ಷತೆ-ಮಂತ್ರಾಕ್ಷತೆಗಿಂತ ಸಂಕಲ್ಪವೇ ಮುಖ್ಯ | ಮಂತ್ರಾಕ್ಷತೆ ಏನು ಮಾಡಬಹುದು..? |

January 9, 2024
1:19 PM

ಅಯೋಧ್ಯೆಯ(Ayodya) ರಾಮಮಂದಿರ  ಮನೆ ಮನೆಗೂ ತಲಪುತ್ತಿದೆ. ಅಕ್ಷತೆ-ಮಂತ್ರಾಕ್ಷತೆಯ ರೂಪದಲ್ಲಿ ಅಯೋಧ್ಯೆಯ ಸಂಕಲ್ಪ ಮನಮುಟ್ಟುತ್ತಿದೆ. ದೇಶದ ಪ್ರತಿಯೊಂದು ಹಿಂದೂವಿನ(Hindu) ಮನೆ ಮನೆಗೆ ತಲುಪುತ್ತಿದೆ ಅಕ್ಷತೆ-ಮಂತ್ರಾಕ್ಷತೆ. ಇನ್ನು ಕೆಲವು ಮನೆಗೆ ತಲುಪಬೇಕಿದೆ. ಮಂತ್ರಾಕ್ಷತೆ ಸಿಕ್ಕಿದ ಬಳಿಕ ಅದನ್ನು ನಾವು ಈಗಲೇ ಉಪಯೋಗ ಮಾಡಬೇಕಿಲ್ಲ. ಜನವರಿ 22ನೇ ತಾರಿಕಿನ ವರೆಗೆ ತಮ್ಮತಮ್ಮ ದೇವರ ಸ್ಟಾಂಡ್ ಲ್ಲಿ ಅಥವಾ ದೇವರಕೋಣೆಯಲ್ಲಿ(Pooja Room) ಇರಿಸಿಕೊಂಡು ದಿನನಿತ್ಯ ದೇವರಿಗೆ ಪೂಜೆ ಮಾಡುವಾಗ ಆ ಮಂತ್ರಾಕ್ಷತೆಗೂ ಪೂಜೆ ಸಲ್ಲಿಸುವ ಶ್ರದ್ಧೆಯ ಅಕ್ಷತೆ.

Advertisement

ಜನವರಿ 22 ಸೋಮವಾರ ಮಧ್ಯಾಹ್ನ 12 ಘಂಟೆ 29 ನಿಮಿಷ 08 ಸೆಕೆಂಡು, ಮೇಷಲಗ್ನದಲ್ಲಿ ಅಯೋಧ್ಯೆಯ ರಾಮಮಂದಿರದಲ್ಲಿ ಹಿಂದೂಗಳ ಆರಾಧ್ಯಮೂರ್ತಿ ಶ್ರೀ ರಾಮಚಂದ್ರನ ಭವ್ಯ ಮೂರ್ತಿಯ ಪ್ರಾಣಪ್ರತಿಷ್ಠೆ ನಡೆಯುತ್ತದೆ. ಆ ಬಳಿಕ ಆ ಅಕ್ಷತೆಯೂ ಮಂತ್ರಾಕ್ಷತೆಯಾಗಿ ದಿವ್ಯ ಶಕ್ತಿಯಾಗುತ್ತದೆ ಎಂದು ಸಂಕಲ್ಪಿಸಿಕೊಂಡು ಪ್ರಸಾದದ ರೂಪದಲ್ಲಿ ಸೇವಿಸಬಹುದು.

ಏನು ಮಾಡಬಹುದು ಈ ಅಕ್ಷತೆ-ಮಂತ್ರಾಕ್ಷತೆಯನ್ನು :

1. ಬೆಯ್ಯುತ್ತಿರುವ ಅಕ್ಕಿಯೊಡನೆ ಈ ಮಂತ್ರಾಕ್ಷತೆಯನ್ನು ಹಾಕಿ ಅದನ್ನು ಅನ್ನವಾಗಿ ಪರಿವರ್ತಿಸಿ ಸೇವಿಸಬಹುದು.

2  ಮಂತ್ರಾಕ್ಷತೆಯನ್ನು ಮನೆಯವರೆಲ್ಲಾ ಹಂಚಿಕೊಂಡು ಶ್ರದ್ಧೆಯಿಂದ ತಲೆಗೆ ಹಾಕಿಕೊಳ್ಳಬಹುದು.

Advertisement

3. ಪಾಯಸ ಮಾಡಿ ಸೇವಿಸಬಹುದು.

4. ನಮ್ಮ ಹಣ, ಚಿನ್ನ ಇಡುವ ಡ್ರಾಯರಲ್ಲಿ ಅಥವಾ ಕಾಪಾಟಿನಲ್ಲಿ ಅದನ್ನು ಭದ್ರವಾಗಿ ಇಡಬಹುದು.

5. ಮನೆಯ ಎದುರಿನ ಬಾಗಿಲಿನ ಮೇಲೆ ಬಟ್ಟೆಯಲ್ಲಿ ಸುತ್ತಿ ಅತ್ಯಂತ ಭದ್ರವಾಗಿ ಕಟ್ಟಿ ಇಡಬಹುದು.

6. ದೇವರ ಕೋಣೆಯಲ್ಲಿ ಕೂಡ ಭದ್ರವಾಗಿ ಶ್ರದ್ಧೆಯಿಂದ ಇಟ್ಟುಕೊಳ್ಳಬಹುದು.

ಶ್ರೀರಾಮ ಆದರ್ಶ. ರಾಮ ಮಂದಿರದಲ್ಲಿ  ಪ್ರತಿಷ್ಠಾಪನೆಯ ಜೊತೆ ಜೊತೆಗೇ ಆದರ್ಶಗಳು ಪ್ರತೀ ವ್ಯಕ್ತಿಯ ಬದುಕಿನಲ್ಲಿ ಪ್ರತಿಷ್ಠಾಪನೆಯನ್ನೂ ಮಾಡಿಕೊಂಡಿದರೆ ದೇಶವೂ ರಾಮರಾಜ್ಯವಾಗಬಲ್ಲುದು. ಅದಕ್ಕಾಗಿಯೇ ಅಯೋಧ್ಯೆಯ ಶ್ರೀರಾಮ ಮಂದಿರ ಬಹಳಷ್ಟು ಮಹತ್ವ ಪಡೆದಿದೆ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಕ್ಕಿಗಳಿಗೆ ಗೂಡುಕಟ್ಟುವ ಪರಿಸರ ಪ್ರೇಮಿ..
July 8, 2025
10:18 AM
by: The Rural Mirror ಸುದ್ದಿಜಾಲ
ಮಹಾರಾಷ್ಟ್ರ ಸರ್ಕಾರ ಕೃಷಿ ಕ್ಷೇತ್ರದಲ್ಲಿ 25,000 ಕೋಟಿ ರೂ. ಹೂಡಿಕೆ ಮಾಡಲಿದೆ
July 8, 2025
7:11 AM
by: The Rural Mirror ಸುದ್ದಿಜಾಲ
ಆಶ್ಲೇಷ ನಕ್ಷತ್ರದಲ್ಲಿ ಬುಧ: ಈ 4 ರಾಶಿಗೆ ಹೆಜ್ಜೆ ಹೆಜ್ಜೆಗೂ ಕಂಟಕ..!
July 8, 2025
7:04 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ದರ್ಶಿತ್‌ ಕೆ ಎಸ್
July 7, 2025
11:04 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group