ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮಮಂದಿರ ನಿರ್ಮಾಣದ ದೃಷ್ಟಿಯಿಂದ ಬಾಂಬ್ ನಿಷ್ಕ್ರಿಯ ಮತ್ತು ಪತ್ತೆ ದಳದ(ಬಿಡಿಡಿಎಸ್) ಎರಡು ತಂಡಗಳನ್ನು ಭದ್ರತೆಗಾಗಿ ಪ್ರತ್ಯೇಕವಾಗಿ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಅಲಹಾಬಾದ್ ಹೈಕೋರ್ಟ್, ಲಖನೌ ಬೆಂಚ್ನ ಹೈಕೋರ್ಟ್, ವಾರಣಾಸಿ ಕಮಿಷನರೇಟ್, ಪಿಎಸಿ ಗೊಂಡಾ ಮತ್ತು ಲಖನೌದ ಸೆಕ್ರೆಟರಿಯೇಟ್ ಕಾಂಪ್ಲೆಕ್ಸ್ನಲ್ಲಿ ಐದು ಹೊಸ ಬಿಡಿಡಿಎಸ್ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಅಯೋಧ್ಯೆಯ ರಾಮ ಜನ್ಮಭೂಮಿ ಸಂಕೀರ್ಣದ ಭದ್ರತೆಗಾಗಿ ಬಿಡಿಡಿಎಸ್ನ ಎರಡು ತಂಡಗಳನ್ನು ಪ್ರತ್ಯೇಕವಾಗಿ ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.ಬಿಡಿಡಿಎಸ್ ಜೊತೆಗೆ, ಅಯೋಧ್ಯೆಯಲ್ಲಿ ಎರಡು ಹೊಸ ವಿಧ್ವಂಸಕ ವಿರೋಧಿ ತಪಾಸಣೆ ತಂಡಗಳನ್ನು ಸಹ ನಿಯೋಜಿಸಲಾಗಿದೆ ಎಂದು ಅವರು ಹೇಳಿದ್ದಾರೆ.
13 ವರ್ಷಗಳ ನಂತರ, ಉತ್ತರ ಪ್ರದೇಶ ಪೊಲೀಸರ ಭದ್ರತಾ ವಿಭಾಗದ ಬಿಡಿಡಿಎಸ್ ತಂಡಗಳನ್ನು ರಾಜ್ಯ ಮಟ್ಟದಲ್ಲಿ ಹೆಚ್ಚಿಸಲಾಗಿದೆ.ಈಗ ರಾಜ್ಯಾದ್ಯಂತ ಬಿಡಿಡಿಎಸ್ನ 31 ತಂಡಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…