ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮಮಂದಿರ ನಿರ್ಮಾಣದ ದೃಷ್ಟಿಯಿಂದ ಬಾಂಬ್ ನಿಷ್ಕ್ರಿಯ ಮತ್ತು ಪತ್ತೆ ದಳದ(ಬಿಡಿಡಿಎಸ್) ಎರಡು ತಂಡಗಳನ್ನು ಭದ್ರತೆಗಾಗಿ ಪ್ರತ್ಯೇಕವಾಗಿ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಅಲಹಾಬಾದ್ ಹೈಕೋರ್ಟ್, ಲಖನೌ ಬೆಂಚ್ನ ಹೈಕೋರ್ಟ್, ವಾರಣಾಸಿ ಕಮಿಷನರೇಟ್, ಪಿಎಸಿ ಗೊಂಡಾ ಮತ್ತು ಲಖನೌದ ಸೆಕ್ರೆಟರಿಯೇಟ್ ಕಾಂಪ್ಲೆಕ್ಸ್ನಲ್ಲಿ ಐದು ಹೊಸ ಬಿಡಿಡಿಎಸ್ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಅಯೋಧ್ಯೆಯ ರಾಮ ಜನ್ಮಭೂಮಿ ಸಂಕೀರ್ಣದ ಭದ್ರತೆಗಾಗಿ ಬಿಡಿಡಿಎಸ್ನ ಎರಡು ತಂಡಗಳನ್ನು ಪ್ರತ್ಯೇಕವಾಗಿ ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.ಬಿಡಿಡಿಎಸ್ ಜೊತೆಗೆ, ಅಯೋಧ್ಯೆಯಲ್ಲಿ ಎರಡು ಹೊಸ ವಿಧ್ವಂಸಕ ವಿರೋಧಿ ತಪಾಸಣೆ ತಂಡಗಳನ್ನು ಸಹ ನಿಯೋಜಿಸಲಾಗಿದೆ ಎಂದು ಅವರು ಹೇಳಿದ್ದಾರೆ.
13 ವರ್ಷಗಳ ನಂತರ, ಉತ್ತರ ಪ್ರದೇಶ ಪೊಲೀಸರ ಭದ್ರತಾ ವಿಭಾಗದ ಬಿಡಿಡಿಎಸ್ ತಂಡಗಳನ್ನು ರಾಜ್ಯ ಮಟ್ಟದಲ್ಲಿ ಹೆಚ್ಚಿಸಲಾಗಿದೆ.ಈಗ ರಾಜ್ಯಾದ್ಯಂತ ಬಿಡಿಡಿಎಸ್ನ 31 ತಂಡಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…