ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮಮಂದಿರ ನಿರ್ಮಾಣದ ದೃಷ್ಟಿಯಿಂದ ಬಾಂಬ್ ನಿಷ್ಕ್ರಿಯ ಮತ್ತು ಪತ್ತೆ ದಳದ(ಬಿಡಿಡಿಎಸ್) ಎರಡು ತಂಡಗಳನ್ನು ಭದ್ರತೆಗಾಗಿ ಪ್ರತ್ಯೇಕವಾಗಿ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಅಲಹಾಬಾದ್ ಹೈಕೋರ್ಟ್, ಲಖನೌ ಬೆಂಚ್ನ ಹೈಕೋರ್ಟ್, ವಾರಣಾಸಿ ಕಮಿಷನರೇಟ್, ಪಿಎಸಿ ಗೊಂಡಾ ಮತ್ತು ಲಖನೌದ ಸೆಕ್ರೆಟರಿಯೇಟ್ ಕಾಂಪ್ಲೆಕ್ಸ್ನಲ್ಲಿ ಐದು ಹೊಸ ಬಿಡಿಡಿಎಸ್ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಅಯೋಧ್ಯೆಯ ರಾಮ ಜನ್ಮಭೂಮಿ ಸಂಕೀರ್ಣದ ಭದ್ರತೆಗಾಗಿ ಬಿಡಿಡಿಎಸ್ನ ಎರಡು ತಂಡಗಳನ್ನು ಪ್ರತ್ಯೇಕವಾಗಿ ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.ಬಿಡಿಡಿಎಸ್ ಜೊತೆಗೆ, ಅಯೋಧ್ಯೆಯಲ್ಲಿ ಎರಡು ಹೊಸ ವಿಧ್ವಂಸಕ ವಿರೋಧಿ ತಪಾಸಣೆ ತಂಡಗಳನ್ನು ಸಹ ನಿಯೋಜಿಸಲಾಗಿದೆ ಎಂದು ಅವರು ಹೇಳಿದ್ದಾರೆ.
13 ವರ್ಷಗಳ ನಂತರ, ಉತ್ತರ ಪ್ರದೇಶ ಪೊಲೀಸರ ಭದ್ರತಾ ವಿಭಾಗದ ಬಿಡಿಡಿಎಸ್ ತಂಡಗಳನ್ನು ರಾಜ್ಯ ಮಟ್ಟದಲ್ಲಿ ಹೆಚ್ಚಿಸಲಾಗಿದೆ.ಈಗ ರಾಜ್ಯಾದ್ಯಂತ ಬಿಡಿಡಿಎಸ್ನ 31 ತಂಡಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…