ಬಹಳ ಹಿಂದೆ ನಮ್ಮ ಹಿರಿಯರು ಸ್ವಚ್ಛತೆಗಾಗಿ ಸೋಪುಗಳ(Soap) ಬದಲು ಅಂಟುವಾಳ ಕಾಯಿಯನ್ನೇ(Soap nut) ಅವಲಂಬಿಸಿದ್ದರು. ಇಂದಿಗೂ ಚಿನ್ನಾಭರಣಗಳನ್ನು(Gold Ornaments) ಸ್ವಚ್ಛಗೊಳಿಸಲು ಅಂಟುವಾಳ ಕಾಯಿಯನ್ನೇ ನೆಚ್ಚಿಕೊಂಡಿದ್ದವರಿದ್ದಾರೆ. ಏಕೆಂದರೆ ಇದೊಂದು ನೈಸರ್ಗಿಕ ಮಾರ್ಜಕವಾಗಿದ್ದು(Natural Detergent) ಯಾವುದೇ ಅಡ್ಡ ಪರಿಣಾಮಗಳಿಲ್ಲದಿರುವುದು, ಯಾವುದೇ ಹಾನಿಕಾರಕ ರಾಸಾಯನಿಕವಿಲ್ಲದಿರುವುದು(Harmful chemical), ಚರ್ಮಕ್ಕೆ(Skin) ಸುರಕ್ಷಿತವಾಗಿರುವುದು ಮೊದಲಾದವು ಹೆಚ್ಚಿನ ಜನಪ್ರಿಯತೆಗೆ ಕಾರಣವಾಗಿತ್ತು.
ಆದರೆ ಇದನ್ನು ಸಂಗ್ರಹಿಸುವುದು ಮತ್ತು ಉಪಯೋಗಿಸುವ ಮುನ್ನ ಕೊಂಚ ಜಜ್ಜಿ ರಸ ತೆಗೆಯುವುದು ಮೊದಲಾದ ಶ್ರಮದ ಕೆಲಸಗಳಿರುವುದರಿಂದ ಇಂದಿನ ಧಾವಂತದ ಯುಗದಲ್ಲಿ ಅಂಟುವಾಳ ಯಾರಿಗೂ ಬೇಡವಾಗಿದೆ. ಆದರೆ ಇಂದಿಗೂ ಹಸಿಯಾಗಿ ಸಿಗದಿದ್ದರೂ ಒಣಫಲಗಳ ರೂಪದಲ್ಲಿ ಅಂಟುವಾಳ ಕಾಯಿ ಗ್ರಂಥಿಗೆ ಅಂಗಡಿಗಳಲ್ಲಿ ದೊರಕುತ್ತದೆ. ನೀರನ್ನು ಸಿಂಪಡಿಸಬಲ್ಲ ವ್ಯವಸ್ಥೆಯಿರುವ ಬಾಟಲಿಯೊಂದರಲ್ಲಿ ಕಾಲು ಲೀಟರ್ ನೀರು, ತಲಾ ಹದಿನೈದು ಮಿಲಿಲೀಟರ್ ನಷ್ಟು ಅಂಟುವಾಳ ರಸ ಸೇರಿಸಿ ಮಿಶ್ರಣ ಮಾಡಿ. ಈ ನೀರನ್ನು ಗಾಜಿನ ಮೇಲೆ ಸಿಂಪಡಿಸಿ ಒಣಗಿರುವ ಸ್ವಚ್ಛವಾದ ಬಟ್ಟೆಯಿಂದ ಒರೆಸಿ. ಗಾಜುಗಳು ಸ್ಪಟಿಕದಂತೆ ಹೊಳೆಯುತ್ತವೆ.
ಅಂಟುವಾಳ ಕಾಯಿಯನ್ನು ನೀರಿನಲ್ಲಿ ನೆನೆಸಿ ಆ ನೀರಿನಲ್ಲಿ ವಿಗ್ರಹಗಳನ್ನು ಮುಳುಗಿಸಿಡಿ. ಸುಮಾರು ಅರ್ಧ ಗಂಟೆ ಅಥವಾ ಒಂದು ಗಂಟೆಯ ಬಳಿಕ ವಿಗ್ರಹವನ್ನು ಹೊರತೆಗೆದು ಇದೇ ನೀರಿನಲ್ಲಿ ಅದ್ದಿದ ಹತ್ತಿಯ ಒರಟು ಬಟ್ಟೆಯಿಂದ ಕೊಂಚ ಒತ್ತಡ ನೀಡಿ ಒರೆಸಿ. ತುಕ್ಕು ಸುಲಭವಾಗಿ ನಿವಾರಣೆಯಾಗಿ ವಿಗ್ರಹಗಳು ತಮ್ಮ ಮೂಲಬಣ್ಣದಲ್ಲಿ ಹೊಳೆಯುತ್ತವೆ. ಚಿನ್ನಾಭರಣಗಳನ್ನು ಅಂಟುವಾಳ ಕಾಯಿಯ ಪುಡಿ ಬೆರೆಸಿದ ನೀರಿನಲ್ಲಿ ನೆನೆಸಿ ಸುಮಾರು ಐದು ನಿಮಿಷಗಳ ಬಳಿಕ ಹಳೆಯ ಮೃದುವಾದ ಹಲ್ಲುಜ್ಜುವ ಬ್ರಶ್ ತೆಗೆದುಕೊಂಡು ನಯವಾಗಿ ಉಜ್ಜಿ ಕೊಳೆಯನ್ನು ತೆಗೆಯಿಸಿ. ಬಳಿಕ ಸ್ವಚ್ಛವಾದ ನೀರಿನಿಂದ ತೊಳೆದು ಒಣ ಬಟ್ಟೆಯಿಂದ ಒರೆಸಿ. ನಿಮ್ಮ ಚಿನ್ನಾಭರಣಗಳು ಹೊಸತರಂತೆ ಹೊಳೆಯುತ್ತವೆ.
ಮನೆಯ ಅಂದ ಹೆಚ್ಚಿಸುವ ರತ್ನಗಂಬಳಿಯ ಸ್ವಚ್ಛತೆಯೇ ದೊಡ್ಡ ಸಮಸ್ಯೆ. ಏಕೆಂದರೆ ನೀರು ಕುಡಿದ ಬಳಿಕ ಈ ಕಂಬಳಿ ಹೆಣಭಾರವಾಗುತ್ತದೆ. ಇದನ್ನು ಹೊರಲು ಹತ್ತಾರು ಜನರ ಸಹಾಯ ಬೇಕಾಗುತ್ತದೆ. ಬದಲಿಗೆ ಅಂಟುವಾಳ ರಸ ಬೆರೆತ ನೀರನ್ನು ರತ್ನಗಂಬಳಿಯ ಎಲ್ಲೆಡೆ ನವಿರಾಗಿ ಸಿಂಪಡಿಸಿ ಕೊಂಚ ಹೊತ್ತಿನ ಬಳಿಕ ಬ್ರಶ್ ಮೂಲಕ ಅಥವಾ ವ್ಯಾಕ್ಯೂಮ್ ಕ್ಲೀನರ್ ಮೂಲಕ ಸ್ವಚ್ಛಗೊಳಿಸಿ. ಇದರಿಂದ ಕಂಬಳಿಯನ್ನು ಅದರ ಸ್ಥಾನದಿಂದ ತೆಗೆಯದೆಯೇ ಸ್ವಚ್ಛಗೊಳಿಸಬಹುದು. ಇದು ಒಣಗಲೂ ಅತಿ ಕಡಿಮೆ ಸಮಯ ತೆಗೆದುಕೊಳ್ಳುತ್ತದೆ. ಹೆಚ್ಚೂ ಕಡಿಮೆ ಸ್ವಚ್ಛಗೊಳಿಸಿದ ಮರುಕ್ಷಣವೇ ಇದನ್ನು ಬಳಸಲು ಪ್ರಾರಂಭಿಸಬಹುದು.
ಇನ್ನು ಚರ್ಮ ಹಾಗೂ ಕೂದಲಿಗೆ ಅಂಟುವಾಳ ಕಾಯಿ ಹೇಳಿ ಮಾಡಿಸಿದಂತಾಗಿದೆ. ರಾಸಾಯಿನಕ ವಸ್ತುಗಳನ್ನು ಬಳಸಿದ ಸೋಪು ಅಥವಾ ಶಾಂಪು ಬದಲು ಅಂಟುವಾಳ ಕಾಯಿ ಪುಡಿ ಬಳಸಿದರೆ ಉತ್ತಮ. ಇದಲ್ಲದೆ ಆರೋಗ್ಯ ಸುಧಾರಣೆಗೂ ಅಂಟುವಾಳ ಕಾಯಿ ಬಹಳ ಉಪಯೋಗಿ
ಸಂಗ್ರಹ : ಡಾ. ಜಿತೇಂದ್ರ ಜೋಕಿ
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…