Advertisement
Opinion

ನವರಾತ್ರಿ ಎನ್ನುವ ಆಯುರ್ವೇದ ಹಬ್ಬ | ನವರಾತ್ರಿಯ ಒಂಭತ್ತು ದಿನಗಳಲ್ಲಿ ಸೇವಿಸಬೇಕಾದ ಔಷಧಿಗಳು |

Share

ನವರಾತ್ರಿಯು ನವದುರ್ಗೆಯರೊಂದಿಗೆ ಆಯುರ್ವೇದದ ಔಷಧಿಯ ಸೇವನೆಯ ಪರ್ವವೂ ಹೌದು. ನಮ್ಮ ಋಷಿ ಮುನಿಗಳು ಈ ಋತು(ಕಾಲ)ವಿನಲ್ಲಿ ಸೇವಿಸಬೇಕಾದ ಕೆಲವು ಔಷಧಿಗಳನ್ನು ಉಲ್ಲೇಖಿಸಿದ್ದಾರೆ. ಇವುಗಳನ್ನು ಪ್ರತ್ಯೇಕ ದಿನಗಳಲ್ಲಿ ಸೇವಿಸುವುದರಿಂದ ನಮ್ಮ ಶಾರೀರಕ, ಮಾನಸಿಕ ಕ್ಷಮತೆಯು ಹೆಚ್ಚಾಗಿ ನಾವು ನಮ್ಮ ಶಕ್ತಿ-ತೇಜಸ್ಸು-ಬಲ-ಬುದ್ಧಿಗಳನ್ನು ಸದೃಢಗೊಳಿಸಬಹುದು.

Advertisement
Advertisement

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ, ನಿರೋಗಿಗಳನ್ನಾಗಿಸಿ ದೀರ್ಘಕಾಲ ಸ್ವಸ್ಥ ಜೀವನ ನಡೆಸಲು ನೆರವಾಗುವ
ಒಂಬತ್ತು ತರದ ಈ ದಿವ್ಯ ಮಹೌಷಧಿಗಳು ನಿಸ್ಸಂದೇಹವಾಗಿ ಪ್ರಭಾವಶಾಲಿಗಳಾಗಿವೆ. ಔಷಧ ರೂಪದಲ್ಲಿರುವ ನವದುರ್ಗೆಗಳ ಸೇವನೆಯನ್ನು ಇನ್ನು ಬರುವ ಚಳಿಗಾಲಕ್ಕೆ ಮುನ್ನುಡಿಯೆಂಬಂತೆ ಸ್ವೀಕರಿಸಬಹುದು.

Advertisement
ಈ ಔಷಧಗಳು- 1.ಹರಿದ್ರಾ, 2. ಬ್ರಾಹ್ಮೀ, 3. ಚಂದಸೂರ, 4. ಕೂಷ್ಮಾಂಡ, 5. ಅಲಸೀ, 6. ಮಾಚಿಕಾ, 7. ನಾಗದಾನ, 8. ತುಲಸೀ, 
9. ಶತಾವರೀ.

1. ಪ್ರಥಮ :- ಶೈಲಪುತ್ರೀ ಯಾ ಹರಿದ್ರಾ - ಅನೇಕ ಪ್ರಕಾರಗಳ ಸಮಸ್ಯೆಗಳನ್ನು ನಿವಾರಿಸುವ ಶಕ್ತಿಯಿರುವ ಮದ್ದಿನ ಗಣಿ. ಆಯುರ್ವೇದದ ಪ್ರಧಾನ ಔಷಧ. ಇದರಲ್ಲಿ ಏಳು ವಿಧಗಳಿವೆ.

2. ದ್ವಿತೀಯ :- ಬ್ರಹ್ಮಚಾರಿಣೀ ಯಾ ಬ್ರಾಹ್ಮೀ(ಸರಸ್ವತೀ): ಇದು ಆಯುಸ್ಸು ಮತ್ತು ನೆನಪಿನ ಶಕ್ತಿಯನ್ನು ಹೆಚ್ಚಿಸುವುದು. ರಕ್ತವಿಕಾರಗಳನ್ನು ನಾಶ ಮಾಡುತ್ತದೆ. ಸ್ವರ ಶುದ್ಧಿಗೆ ದಿವ್ಯೌಷಧ. ಮನಸ್ಸಿನ ಮೇಲೂ ಧನಾತ್ಮಕ ಪರಿಣಾಮವನ್ನು ಬೀರುತ್ತದೆ.
ವಾಯು,ಮೂತ್ರಸಂಬಂಧದ ರೋಗಗಳಿಗೆ ಮುಖ್ಯೌಷಧ.
3. ಚಂದ್ರಘಂಟಾ ಯಾ ಚಂದ್ರಸೂರ:- ಇದನ್ನು ಚಮಸೂರ ಎಂದೂ ಕರೆಯುತ್ತಾರೆ. ಇದು ಕೊತ್ತಂಬರಿಯ ರೀತಿಯಲ್ಲಿರುವ ಗಿಡ. ಇದರ ಎಲೆಗಳನ್ನು ಬಳಸಿ ಪಲ್ಯಗಳನ್ನು ಮಾಡುತ್ತಾರೆ. ಸ್ಥೂಲಕಾಯವನ್ನು ಕರಗಿಸಲು ಸಹಕಾರಿ. ಇದರಿಂದ ಇದಕ್ಕೆ ಚರ್ಮಹಂತೀ ಎಂಬ ಹೆಸರೂ ಇದೆ. ಶಕ್ತಿವರ್ಧಕ, ಹೃದ್ರೋಗ ನಿವಾರಕವಾದ ಚಂದ್ರಿಕಾ ಉಪಯುಕ್ತ ಗಿಡ.
4. ಕೂಷ್ಮಾಂಡ:- ಕುಂಬಳ. ಇದು ಪುಷ್ಟಿಕಾರಕ, ವೀರ್ಯವರ್ಧಕ, ರಕ್ತಸಂಬಂಧೀ ಸಮಸ್ಯೆಗಳ ಪರಿಹಾರಕ ಮತ್ತು ಉದರ ಶುದ್ಧಿಗೆ ಸಹಾಯಕ. ಮಾನಸಿಕವಾಗಿ ಅಬಲರಾದವರಿಗೆ ಇದು ದಿವ್ಯೌಷಧ.ಶರೀರದ ವೀಶೇಷವಾಗಿ ಹೃದಯ ಸಂಬಂಧೀ ಕಾಯಿಲೆಗಳಿಗೆ ರಾಮಬಾಣದಂತಿದೆ.
5. ಸ್ಕಂದಮಾತಾ ಯಾ ಅಲಸೀ :- ಅಗಸೆ ಬೀಜ. ವಾತ, ಪಿತ್ತ, ಕಫಗಳ ನಿಯಂತ್ರಣದಲ್ಲಿ ಸಹಾಯಕ. 
"ಅಲಸೀ ನೀಲಪುಷ್ಪೀ ಪಾವರ್ತತೀ ಸ್ಯಾದುಮಾ ಕ್ಷುಮಾ| 
ಅಲಸೀ ಮಧುರಾ ತಿಕ್ತಾ ಸ್ತ್ರಿಗ್ಧಪಾಕೇ ಕದರ್ಗರುಃ|| 
ಉಷ್ಣಾ ದೃಷ ಶುಕವಾತಂಧೀ ಕಫ ಪಿತ್ತ ವಿನಾಶಿನೀ||

6. ಷಷ್ಠಮ ಕಾತ್ಯಾಯನೀ ಯಾ ಮೋಯಿಯಾ:- ಅಂಬಾ,ಅಂಬಾಲಿಕಾ,ಅಂಬಿಕಾ,ಮಾಚಿಕಾ ಇತರ ಹೆಸರುಗಳು.ಇದು ಕಫ,ಪಿತ್ತ ಮತ್ತು ಕಂಠ ಸಂಬಂಧೀ ಕಾಯಿಲೆಗಳ ನಿವಾರಣೆಗೆ ಸಹಾಯಕ. 
7. ಸಪ್ತಮ ಕಾಲರಾತ್ರೀ ಯಾ ನಾಗದೌನ್:- ಸರ್ವರೋಗ ನಿವಾರಕ.ಮಸ್ತಿಷ್ಕದ ಎಲ್ಲಾ ವಿಕಾರಗಳನ್ನು ನಿವಾರಿಸಿ ವಿಜಯಶಾಲಿಗಳನ್ನಾಗಿಸುವುದು. ವಿಷ ನಿವಾರಕವೂ ಹೌದು.
8. ತುಲಸೀ:- ಏಳು ವಿಧಗಳಿವೆ. ರಕ್ತಶುದ್ಧಿ,ಹೃದ್ರೋಗ ನಿವಾರಣೆಗೆ ಸಹಾಯಕ. 
ತುಲಸೀ ಸುರಸಾ ಗ್ರಾಮ್ಯಾ ಸುಲಭಾ ಬಹುಮಂಜರೀ|
ಅಪೇತರಾಕ್ಷಸೀ ಮಹಾಗೌರೀ ಶೂಲಘ್ನೀ ದೇವದುಂದುಭಿಃ||
ತುಲಸೀ ಕಟುಕಾ ತಿಕ್ತಾಹುಧ ಉಷ್ಣಾಹಾಹಪಿಪಿತ್ತಕೃತ್|
ಮರುದನಿಪ್ರದೋ ಹಧ ತೀಕ್ಷ್ಣಾಷ್ಣಃ ಪಿತ್ತಲೋ ಲಘುಃ||
9. ನವಮ ಶತಾವರೀ:- ನಾರಾಯಣೀ ಎಂದೂ ಕರೆಯುತ್ತಾರೆ. ಬುದ್ಧಿ-ವೀರ್ಯಬಲಗಳನ್ನು ಹೆಚ್ಚಿಸುವುದು.ಹೃದ್ಬಲ ವರ್ಧಕ. ರಕ್ತವಿಕಾರ ನಾಶಕ. ಸಿದ್ಧಿದಾತ್ರಿಯಾದ ಇದನ್ನು ನಿಯಮಾನುಸಾರ ಸೇವಿಸಿದರೆ ಸರ್ವಕಷ್ಟಗಳು ನಿವಾರಣೆಯಾಗುತ್ತವೆ.

- ಹಿಂದಿ ಭಾಷಾ ಲೇಖನದಿಂದ ಕನ್ನಡಕ್ಕೆಅನುವಾದಿಸಿದ ವಿಶ್ವೇಶ್ವರ ಭಟ್, ಉಂಡೆಮನೆ

Navratri, the nine auspicious days, is one of the most anticipated occasions. It represents the triumph of good over evil in religious terms. It is celebrated in various forms throughout India and is very important. The nine auspicious days of Navratri are one of the most anticipated times in Ayurveda. The festival of Navratri marks a change in season and weather. According to Ayurveda, our bodies prepare for the upcoming seasonal shift by balancing our doshas during the nine days of the Navratri festival.
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ : ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ :

ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…

3 hours ago

ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? ಪರಿಸರಿದಿಂದ ನಮಗಾಗುವ ಪ್ರಯೋಜನವೇನು..?

ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…

4 hours ago

ಸಮುದ್ರದ ಉಪ್ಪು, ಅಯೋಡಿಕರಿಸಿದ ಟೇಬಲ್ ಉಪ್ಪು, ಸೈಂಧವ ಉಪ್ಪು, ಕಪ್ಪು ಉಪ್ಪು : ಯಾವ ಉಪ್ಪು ಆರೋಗ್ಯಕ್ಕೆ ಒಳ್ಳೆಯದು?

ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…

4 hours ago

ಕೆಲ ಜಿಲ್ಲೆಯ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ : ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ

ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…

4 hours ago

ವರುಣ ಕೃಪೆ ತೋರದಿದ್ರೆ ಭಾರಿ ಸಂಕಷ್ಟ : ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ!

ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…

7 hours ago

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

9 hours ago