ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಯುಷ್ಮಾನ್ ಭಾರತ್ ಯೋಜನೆಯಡಿ ನೋಂದಣಿಯಾದ ಯಾವುದೇ ಆಸ್ಪತ್ರೆಗಳು ರೋಗಿಗಳಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ ಖಡಕ್ ಸೂಚನೆ ನೀಡಿದ್ದಾರೆ.
ಈ ಕುರಿತು ಜಿಲ್ಲೆಯ ಎಲ್ಲಾ ಸಂಬಂಧಿತ ಆಸ್ಪತ್ರೆಗಳಿಗೆ ಅಧಿಕೃತ ಪತ್ರವನ್ನು ರವಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಹೆಚ್ಒ, ಆಸ್ಪತ್ರೆಗೆ ತೆರಳುವ ಸಂದರ್ಭದಲ್ಲಿ ಆಯುಷ್ಮಾನ್ ಕಾರ್ಡ್ ಕಡ್ಡಾಯವಲ್ಲ. ಪಡಿತರ ಚೀಟಿ, ಆಧಾರ್ ಕಾರ್ಡ್ ಅಥವಾ ಆಧಾರ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯು ಇದ್ದರೆ ಸಾಕು ಎಂದು ಮಾಹಿತಿ ನೀಡಿದ್ದಾರೆ.
ಇದಲ್ಲದೆ, ಜಿಲ್ಲೆಯಲ್ಲಿ ಎನ್ಎಚ್ಎಂ (NHM) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ನೌಕರರ ಮೂರು ತಿಂಗಳ ಬಾಕಿ ವೇತನವಾಗಿ ಒಟ್ಟು ₹9.67 ಕೋಟಿ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…