ರಕ್ತದಾನದ ಮೂಲಕ ಆಜಾದಿ ಕಾ ಅಮೃತ್ ಮಹೋತ್ಸವ ಆಚರಣೆಗೆ ಗುತ್ತಿಗಾರಿನ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಸಿದ್ಧತೆ ನಡೆಸಿದೆ. ಇದೇ ವೇಳೆ ರಕ್ತ ದಾನಿಗಳನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಆಯೋಜಿಸಿದೆ.
ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರು, ಅಮರ ಸೇನಾ ರಕ್ತ ದಾನಿಗಳ ತಂಡ , ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದ. ಕ. ಜಿಲ್ಲೆ, ಪ್ರಾಥಮಿಕ ಆರೋಗ್ಯ ಕೇಂದ್ರ ಗುತ್ತಿಗಾರು, ಗ್ರಾಮ ಪಂಚಾಯತ್ ಗುತ್ತಿಗಾರು ಇವುಗಳ ಸಹಯೋಗದಲ್ಲಿ ಆ.14 ರಂದು ಆಜಾದಿ ಕಾ ಅಮೃತ ಮಹೋತ್ಸವವನ್ನು ರಕ್ತದಾನ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ರಕ್ತದಾನ ಮಾಡುವವರನ್ನು ಗೌರವಿಸಿ ಸನ್ಮಾನಿಸುವ ಕಾರ್ಯಕ್ರಮ ಮಾಡಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ. ರಕ್ತದಾನ ಕಾರ್ಯಕ್ರಮವು ಗುತ್ತಿಗಾರಿನ ಪ. ಪಂಗಡ ಸಭಾ ಭವನದಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ. ಇದೇ ವೇಳೆ ಟಸ್ಟ್ ವತಿಯಿಂದ ಆಂಬುಲೆನ್ಸ್ ಖರೀದಿಗೆ ಸಂಗ್ರಹ ಮಾಡಿದ ದೇಣಿಗೆಯ ಖರ್ಚು ವೆಚ್ಚಗಳ ಲೆಕ್ಕಪತ್ರ ವನ್ನು ಸಾರ್ವಜನಿಕರಿಗೆ ತಿಳಿಸಲಾಗುತ್ತದೆ. ರಕ್ತದಾನ ಮಾಡಲು ಆಸಕ್ತಿಯುಳ್ಳ ರಕ್ತದಾನಿಗಳು ಸಂಘಟಕರನ್ನು ಸಂಪರ್ಕ ಮಾಡಲು ಈ ಮೂಲಕ ವಿನಂತಿಸಲಾಗಿದೆ. ಸಂಪರ್ಕ: 9480199711
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…