ರಕ್ತದಾನದ ಮೂಲಕ ಆಜಾದಿ ಕಾ ಅಮೃತ್ ಮಹೋತ್ಸವ ಆಚರಣೆಗೆ ಗುತ್ತಿಗಾರಿನ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಸಿದ್ಧತೆ ನಡೆಸಿದೆ. ಇದೇ ವೇಳೆ ರಕ್ತ ದಾನಿಗಳನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಆಯೋಜಿಸಿದೆ.
ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರು, ಅಮರ ಸೇನಾ ರಕ್ತ ದಾನಿಗಳ ತಂಡ , ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದ. ಕ. ಜಿಲ್ಲೆ, ಪ್ರಾಥಮಿಕ ಆರೋಗ್ಯ ಕೇಂದ್ರ ಗುತ್ತಿಗಾರು, ಗ್ರಾಮ ಪಂಚಾಯತ್ ಗುತ್ತಿಗಾರು ಇವುಗಳ ಸಹಯೋಗದಲ್ಲಿ ಆ.14 ರಂದು ಆಜಾದಿ ಕಾ ಅಮೃತ ಮಹೋತ್ಸವವನ್ನು ರಕ್ತದಾನ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ರಕ್ತದಾನ ಮಾಡುವವರನ್ನು ಗೌರವಿಸಿ ಸನ್ಮಾನಿಸುವ ಕಾರ್ಯಕ್ರಮ ಮಾಡಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ. ರಕ್ತದಾನ ಕಾರ್ಯಕ್ರಮವು ಗುತ್ತಿಗಾರಿನ ಪ. ಪಂಗಡ ಸಭಾ ಭವನದಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ. ಇದೇ ವೇಳೆ ಟಸ್ಟ್ ವತಿಯಿಂದ ಆಂಬುಲೆನ್ಸ್ ಖರೀದಿಗೆ ಸಂಗ್ರಹ ಮಾಡಿದ ದೇಣಿಗೆಯ ಖರ್ಚು ವೆಚ್ಚಗಳ ಲೆಕ್ಕಪತ್ರ ವನ್ನು ಸಾರ್ವಜನಿಕರಿಗೆ ತಿಳಿಸಲಾಗುತ್ತದೆ. ರಕ್ತದಾನ ಮಾಡಲು ಆಸಕ್ತಿಯುಳ್ಳ ರಕ್ತದಾನಿಗಳು ಸಂಘಟಕರನ್ನು ಸಂಪರ್ಕ ಮಾಡಲು ಈ ಮೂಲಕ ವಿನಂತಿಸಲಾಗಿದೆ. ಸಂಪರ್ಕ: 9480199711
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.