Advertisement
MIRROR FOCUS

ಬೆಟ್ಟದಲ್ಲಿ ಹಾರಿದ ತಿರಂಗಾ | ಸಮುದ್ರ ಮಟ್ಟದಿಂದ 2250 ಅಡಿ ಎತ್ತರದಲ್ಲಿ ಹಾರಾಡಿದ ರಾಷ್ಟ್ರಧ್ವಜ | ಪರಿಸರದ ನಡುವೆ ಕೇಳಿತು ಜನಗಣಮನ… |

Share

ಇಡೀ ದೇಶದಲ್ಲಿ ಅಮೃತ ಮಹೋತ್ಸವದ ಸ್ವಾತಂತ್ರ್ಯ ಸಂಭ್ರಮ ಮುಗಿಯಿತು. ಇಡೀ ವರ್ಷ ಈ ಆಚರಣೆ ನಡೆಯುತ್ತದೆ. ವಿವಿಧ ಕಡೆ ಹೆಮ್ಮೆಯಿಂದ, ಸಡಗರದಿಂದ ಈ ಆಚರಣೆ ನಡೆಯಿತು. ಸುಳ್ಯದ ಸಂಪಾಜೆಯ ನಾಟೆಕಲ್ಲು ಗುಡ್ಡದ ಮೇಲೆಯೂ ರಾಷ್ಟ್ರಧ್ವಜ ಹಾರಾಡಿತು. ಸಮುದ್ರ ಮಟ್ಟದಿಂದ 2250 ಅಡಿ ಎತ್ತರ ಇರುವ ಈ ಬೆಟ್ಟದಲ್ಲಿ ಜನಗಣಮನ ಕೇಳಿತು.ಸುಂದರ ಪರಿಸರದಲ್ಲಿ ಕೇಳಿದ ರಾಷ್ಟ್ರಗೀತೆ ಎಲ್ಲೆಡೆಯೂ ಮಾರ್ಧನಿಸಿತು. 

Advertisement
Advertisement

Advertisement

ಸುಳ್ಯದ ಸಂಪಾಜೆ ಬಳಿಯ ಲೈನ್ಕಜೆಯ ಹತ್ತಿರದ ನಾಟೆಕಲ್ಲು ಗುಡ್ಡದ ಮೇಲೆ ಅಂದರೆ ಸಮುದ್ರ ಮಟ್ಟದಿಂದ 2250 ಅಡಿ ಎತ್ತರದಲ್ಲಿ ಚಾರಣದ ಮೂಲಕ ತೆರಳಿದ ತಂಡ ಸ್ವಾತಂತ್ರೋತ್ಸವವನ್ನು ಆಚರಣೆ ಮಾಡಿತು. ಸುತ್ತಲೂ ಸುಂದರ ಪರಿಸರ, ಈ ಪರಿಸರದ ನಡುವೆ ರಾಷ್ಟ್ರಧ್ವಜ ಹಾರಾಡಿದ್ದು ಹೆಮ್ಮೆಯಾಗಿ ಕಂಡಿತು. ಈ ಸುಂದರ ಪರಿಸರದಲ್ಲಿ ಹಕ್ಕಿ ಕಲರವ, ಜೀರುಂಡೆಗಳ ಸದ್ದು, ಗಾಳಿಯ ಸದ್ದಿನ ನಡುವೆ ಕೇಳಿದ ರಾಷ್ಟ್ರಗೀತೆ ಬೆಟ್ಟಗಳ ನಡುವೆ ಮಾರ್ಧನಿಸಿತು.

Advertisement

ಸಂಪಾಜೆಯ ಲೈನ್ಕಜೆ ಮನೆಯವರು ಹಾಗೂ ಯುವಕರ ತಂಡ ಈ ಸಾಹಸ ಯಾತ್ರೆ ಮಾಡಿದೆ. ಸಂಪಾಜೆಯಿಂದ ಮುಂದೆ ಅತ್ಯಂತ ಪ್ರಸಿದ್ಧವಾ ಅರೆಕಲ್ಲು ಮೂಲಕವಾಗಿ ಈ ನಾಟೆಕಲ್ಲು ಬೆಟ್ಟಕ್ಕೆ ತೆರಳಬೇಕಾಗುತ್ತದೆ. ಹರಿದ್ವರ್ಣ ಕಾಡಿನ ನಡುವೆ ಈ ಜಾಗ ಇದೆ.  ಅತ್ಯಂತ ಸುಂದರವಾದ ಜಾಗ ಇದಾಗಿದ್ದು ಬೆಟ್ಟ ಕೆಳಭಾಗ ಕೆಲವು ಮನೆಗಳೂ ಇದೆ. ಬೆಟ್ಟದಲ್ಲಿ ಕಡವೆ, ಕಾಡಕೋಣ, ಹುಲಿ, ಚಿರತೆ, ಆನೆಗಳು ಆಗಾಗ ಓಡಾಡುತ್ತವೆ. ಬೆಟ್ಟದ ಮೇಲ್ಭಾಗದಲ್ಲೂ ವರ್ಷದ ಎಲ್ಲಾ ದಿನವೂ ನೀರು ಇರುತ್ತದೆ. ಏರುವ ದಾರಿ ಅತ್ಯಂತ ಕಠಿಣವಾಗಿದೆ. ಜಿಗಣೆ ಕಾಟ ಇದೆ. ಬೆಟ್ಟ ಏರುವುದೇ ತ್ರಾಸದಾಯಕ. ಚಾರಣದ ಪ್ರದೇಶ ಇದು. ಲೈನ್ಕಜೆಯಿಂದ ಸುಮಾರು ಎರಡು ಗಂಟೆಯ ನಡಿಗೆ ಇದೆ. ಕಲ್ಲುಗಳು, ಮರಗಳ ನಡುವೆ ಏರುತ್ತಾ ಸಾಗಬೇಕಿದೆ. ಬೆಟ್ಟದ ತುದಿ ತಲುಪಿದ ಬಳಿಕ ಮನೋಹರವಾದ ಜಾಗ ಕಾಣುತ್ತದೆ. ಸುತ್ತಲೂ ಹಸಿರಿನಿಂದ ಕೂಡಿದ ಪ್ರದೇಶ. ಹೀಗಾಗಿ ಮನಸ್ಸು ಉಲ್ಲಾಸವಾಗುತ್ತದೆ.  ಸುಂದರವಾದ ಈ ಬೆಟ್ಟಕ್ಕೆ ಪ್ರತೀ ಸಲ ಚಾರಣಕ್ಕೆ ಲೈನ್ಕಜೆ ರಾಮಚಂದ್ರ ಹಾಗೂ ಮನೆಯವರು ಹೋಗುತ್ತಾರೆ. ಲೈನ್ಕಜೆ ಮನೆಯವರು ಈ ಬಾರು ಬೆಟ್ಟ ಹತ್ತಿ ಸ್ವಾತಂತ್ರ್ಯ ದಿನಾಚರಣೆ ಮಾಡಿದ್ದಾರೆ. ಈ ತಂಡದಲ್ಲಿ ಆದಿತ್ಯ ಲೈನ್ಕಜೆ, ಅರ್ಜುನ ಲೈನ್ಕಜೆ, ಅವಿನಾಶ್ ಲೈನ್ಕಜೆ, ರವಿ ಎಲಿಕ್ಕಳ, ಸಂದೀಪ್ ಎಲಿಕ್ಕಳ, ವಿಜೇತ ಪೆರುಂಬಾರು, ವಿಷ್ಣು ಕಾರ್ಮಾರು ಇದ್ದರು. ಲೈನ್ಕಜೆ ರಾಮಚಂದ್ರ ಅವರ ಪುತ್ರ ಭಾರತೀಯ ಸೇನೆಯಲ್ಲಿ ಮೇಜರ್‌ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

Advertisement
ಎಚ್ಚರಿಕೆ ಇದೆ...
ಈ ಬೆಟ್ಟ ಸುಂದರವಾಗಿರುವುದರಿಂದ ಹಾಗೂ ಕೆಲವರು ಚಾರಣಕ್ಕೆ ಆಗಮಿಸುತ್ತಾರೆ. ಆದರೆ ಪ್ಲಾಸ್ಟಿಕ್‌ ಬಳಕೆ, ಪ್ಲಾಸ್ಟಿಕ್‌ ಬಾಟಲಿ ಎಸೆಯುವುದು ಇತ್ಯಾದಿಗಳು ಕಂಡರೆ ಸ್ಥಳೀಯರೇ ಗಮನಿಸಿ ಎಚ್ಚರಿಸುತ್ತಾರೆ. ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್‌, ತ್ಯಾಜ್ಯಗಳು ಬೆಟ್ಟದ ಮೇಲೆ ಹೋಗದಂತೆ ತಡೆಯನ್ನೂ ಮಾಡುತ್ತಾರೆ. ಮಳೆಗಾಲ ಈ ಬೆಟ್ಟದ ಕಡೆಗೆ ಪಯಣ ಕಷ್ಟವಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ(Loksabha Elections 2024) ತೆರೆ ಬಿದ್ದಿದೆ. ಇನ್ನು ಫಲಿತಾಂಶಕ್ಕಾಗಿ ಕಾಯೋದೊಂದೇ …

5 hours ago

ಕೊಕ್ಕೋ ಧಾರಣೆ ಇಳಿಕೆ | ವಾರದಲ್ಲಿ 100 ರೂಪಾಯಿ ಕುಸಿತ ಕಂಡ ಕೊಕ್ಕೋ ಧಾರಣೆ |

ಕೊಕ್ಕೋ ಧಾರಣೆ ವಾರದಲ್ಲಿ 100 ರೂಪಾಯಿ ಇಳಿಕೆಯಾಗಿದೆ.

13 hours ago

Karnataka Weather | 08-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

ಮೇ 9 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆ ಆರಂಭವಾಗುವ ಮುನ್ಸೂಚೆನೆ…

16 hours ago

ಛಾತಿ ಇಲ್ಲದ ನಾಗರಿಕರನ್ನು ರೂಪಿಸುತ್ತಿರುವ ಶಿಕ್ಷಣ

ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…

1 day ago

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌…

1 day ago

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

2 days ago