Advertisement
Political mirror

ರಾಜ್ಯದಲ್ಲಿ ಸೀಎಂ ಬದಲಾವಣೆ ‌ಚರ್ಚೆ | ಬಿ ಎಸ್‌ ವೈ ರಾಜೀನಾಮೆಗೆ ಸೂಚಿಸುವವರು ಯಾರು ? |

Share

ರಾಜ್ಯ ರಾಜಕಾರಣದಲ್ಲಿ ಭಾನುವಾರ ಸಂಚಲನ. ಇಡೀ ರಾಜ್ಯದಲ್ಲಿ ಕುತೂಹಲ ಸೀಎಂ ಬಿ ಎಸ್‌ ಯಡಿಯೂರಪ್ಪ ಮುಂದುವರಿಯುತ್ತಾರಾ ? ರಾಜೀನಾಮೆ ನೀಡ್ತಾರಾ ? ಯಾರಾಗ್ತಾರೆ ಸೀಎಂ ? ಹೀಗೇ ಕುತೂಹಲಗಳು. ಹಾಗಿದ್ದರೆ ಬಿ ಎಸ್‌ ಯಡಿಯೂರಪ್ಪ ಅವರಿಗೆ  ರಾಜೀನಾಮೆ ನೀಡಲು ಸೂಚನೆ ಕೊಡುವವರು  ಯಾರು ? ಈಗಾಗಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಬಿ ಎಸ್‌ ವೈ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಸೂಚ್ಯವಾಗಿ ಹೇಳಿದ್ದಾರೆ. ಈ ಹಿಂದೆ ರಾಜ್ಯದ ಬಿಜೆಪಿಯಲ್ಲಿನ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯುತ್ತಿದ್ದ ಬಿ ಎಲ್‌ ಸಂತೋಷ್‌ ಅವರ ಹೆಸರು ಈಗ ಸೀಎಂ ಸ್ಥಾನದತ್ತ ಕೇಳಿಬರುತ್ತಿದೆ. ಈಗ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಅವರದು ಎಂದು ಹೇಳಲಾಗುವ ಆಡಿಯೋ ಕೂಡಾ ಚರ್ಚೆಯಾಗುತ್ತದೆ. ದೆಹಲಿಯಿಂದ ಬರುವ ಸೀಎಂ ವ್ಯಕ್ತಿ ಯಾರು ?

ಸೀಎಂ ಬದಲಾವಣೆಯ ಚರ್ಚೆ ನಡೆಯುತ್ತಿರುವ ವೇಳೆಯೇ, ರಾಜೀನಾಮೆ ಕುರಿತು ಹೈಕಮಾಂಡ್ ಸೂಚನೆ ಇನ್ನೂ ಬಂದಿಲ್ಲ. ರಾತ್ರಿವರೆಗೂ ಕಾಯುತ್ತೇನೆ. ನೀವು ನಾಳೆ ಬೆಳಿಗ್ಗೆವರೆಗೂ ಕಾಯಿರಿ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಪ್ರವಾಹ ಪೀಡಿತ ಉತ್ತರ ಕರ್ನಾಟಕದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ ಭಾನುವಾರ ಸಂಜೆ ಬೆಂಗಳೂರಿಗೆ ಮರಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ಕೊಡು ಅಂದರೆ ಕೊಡಲು ಸಿದ್ಧ ಎಂದರು. ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ತಮ್ಮ ಕಾರ್ಯವೈಖರಿಗೆ ಮೆಚ್ಚುಗೆ ಮಾತುಗಳನ್ನಾಡಿರುವುದಕ್ಕೂ ಹೈಕಮಾಂಡ್ ನಿಂದ ಬರುವ ಸಂದೇಶಕ್ಕೆ ಸಂಬಂಧವಿಲ್ಲ. ನಾಳೆ ನಿಗದಿತ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಇದರ ಜೊತೆಗೇ ಉತ್ತರ ಕನ್ನಡ ಜಿಲ್ಲೆಗೆ ಪ್ರವಾಸ ಕೈಗೊಳ್ಳಲು ಬಿ ಎಸ್‌ ಯಡಿಯೂರಪ್ಪ ನಿರ್ಧರಿಸಿದ್ದಾರೆ. ಮಧ್ಯಾಹ್ನದವರೆಗೂ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದರು. ಬೆಳಗಾವಿ ಪ್ರವಾಸದಲ್ಲಿದ್ದ ಸಂದರ್ಭದಲ್ಲಿಯೇ ಅವರು ಸೋಮವಾರ ಕಾರವಾರ ಜಿಲ್ಲೆಯ ಭೇಟಿ ಬಗ್ಗೆ ಹೇಳಿದ್ದಾರೆ.

ಈ ನಡುವೆ ಜು.25 ರಂದು ರಾತ್ರಿ ದೆಹಲಿಯಲ್ಲಿ ಮಹತ್ವದ ಸಭೆ ನಡೆಯುತ್ತದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈವರೆಗೂ ಸೀಎಂ ಆಗಿ ಬೇರೆ ಬೇರೆ ಹೆಸರುಗಳು ಕೇಳಿಬಂದರೂ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್‌ ಸಂತೋಷ್‌ ಹೆಸರು ಕೇಳಿಬರುತ್ತಿದೆ.  ಭಾನುವಾರ ರಾತ್ರಿ ಬಿಜೆಪಿ ನಾಯಕ  ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ, ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್, ಜೆಪಿ ನಡ್ಡಾ ಅವರು ಸಭೆ ನಡೆಸಲಿದ್ದು, ರಾತ್ರಿಯೇ ಅಂತಿಮ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

17 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago