ಬಾಬ್ರಿ ಮಸೀದಿ ಪ್ರಕರಣ |ಎಲ್.ಕೆ. ಅಡ್ವಾಣಿ ಸೇರಿ ಎಲ್ಲಾ ಆರೋಪಿಗಳು ದೋಷಮುಕ್ತ

September 30, 2020
12:40 PM

1992ರಲ್ಲಿ ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಸಿಬಿಐ ವಿಶೇಷ ನ್ಯಾಯಾಲಯ ಅಂತಿಮ ತೀರ್ಪು ಪ್ರಕಟಿಸಿದ್ದು, ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಎಲ್ಲಾ ಆರೋಪಿಗಳು ದೋಷ ಮುಕ್ತ ಎಂದು ಮಹತ್ವದ ತೀರ್ಪು ನೀಡಿದೆ.

ಲಖ್ನೋ ಸಿಬಿಐ ವಿಶೇಷ ನ್ಯಾಯಾಲಯ ಸುದೀರ್ಘ 28 ವರ್ಷಗಳ ಕಾಲ ವಿಚಾರಣೆ ನಡೆಸಿ ಅಂತಿಮ ತೀರ್ಪನ್ನು ಪ್ರಕಟಿಸಿದೆ. ವಿಶೇಷ ಕೋರ್ಟ್ ನ್ಯಾಯಾಧೀಶ ಎಸ್.ಕೆ. ಯಾದವ್ ನೇತೃತ್ವದ ನ್ಯಾಯಾಪೀಠವು ತೀರ್ಪು ಪ್ರಕಟಿಸಿ ಬಾಬ್ರಿ ಮಸೀದಿ ಧ್ವಂಸ ಘಟನೆ ಪೂರ್ವ ನಿಯೋಜಿತ ಕೃತ್ಯ ಅಲ್ಲ, ಆಕಸ್ಮಿಕವಾಗಿ ನಡೆದಿರುವಂತದ್ದು, ಆರೋಪ ಸಾಬೀತು ಪಡಿಸಲು ಪ್ರಬಲ ಸಾಕ್ಷ್ಯಗಳು ಇಲ್ಲ. ಎಲ್ಲಾ ಆರೋಪಿಗಳು ನಿರ್ದೋಷಿಗಳು ಎಂದು ಆದೇಶ ಪ್ರಕಟಿಸಿದ್ದಾರೆ.

1992 ರ ಡಿಸೆಂಬರ್ 6 ರಂದು ಕರಸೇವಕರು ಬಾಬ್ರಿ ಮಸೀದಿಯನ್ನು ಕೆಡವಿದರು.ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ ಜೋಶಿ, ಕಲ್ಯಾಣ್ ಸಿಂಗ್, ಉಮಾ ಭಾರತಿ ಮತ್ತಿತರ 49 ಮಂದಿ ಆರೋಪ ಪಟ್ಟಿಯಲ್ಲಿದ್ದರು.

ಪ್ರಕರಣದಲ್ಲಿ ಆರೋಪಿತರಾದ ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ ಜೋಶಿ, ಉಮಾಭಾರತಿ, ಕಲ್ಯಾಣ್ ಸಿಂಗ್ ಕೋರ್ಟ್ ಗೆ ಖುದ್ದು ಹಾಜರಾಗಿರಲಿಲ್ಲ.. ವಿಡಿಯೋ ಕಾನ್ಫರೆನ್ಸ್ ಮೂಲಕ ಇವರು ಕೋರ್ಟ್ ಕಲಾಪಕ್ಕೆ ಹಾಜರಾಗಿದ್ದರು. 26 ಮಂದಿ ಕೋರ್ಟ್ ಮುಂದೆ ಹಾಜರಾಗಿದ್ದರು. ಈ ಪ್ರಕರಣದಲ್ಲಿ 49 ಮಂದಿ ಆರೋಪಿತರಿದ್ದು, ವಿಚಾರಣೆ ಹಂತದಲ್ಲಿ 17 ಮಂದಿ ಮೃತಪಟ್ಟಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ
July 24, 2026
5:01 PM
by: ದ ರೂರಲ್ ಮಿರರ್.ಕಾಂ
ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ
July 13, 2026
10:46 PM
by: ದ ರೂರಲ್ ಮಿರರ್.ಕಾಂ
ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?
July 13, 2026
7:17 AM
by: ದ ರೂರಲ್ ಮಿರರ್.ಕಾಂ
16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ
July 12, 2026
9:03 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror