ಇಂದಿನ ಮಕ್ಕಳೇ(Children) ಮುಂದಿನ ಪ್ರಜೆಗಳು. ಹಾಗಾಗಿ ನಮ್ಮ ದೇಶದ ಇತಿಹಾಸದ(Country History) ಬಗ್ಗೆ ನಮ್ಮ ಮಕ್ಕಳಿಗೆ ಗೊತ್ತಿರಬೇಕು ಅನ್ನೋದು ಕೆಲವು ಶಿಕ್ಷಣ ತಜ್ಞರ(Educational experts) ವಾದವಾದರೆ ದ್ವೇಷ ಮತ್ತು ಹಿಂಸಾಚಾರ ಶಿಕ್ಷಣದ ವಿಷಯಗಳಲ್ಲ, ಶಾಲಾ ಪಠ್ಯಪುಸ್ತಕಗಳಲ್ಲಿ(Text book) ಅವುಗಳ ಬಗ್ಗೆ ಏಕೆ ಕಲಿಸಬೇಕು ಎಂದು ಎನ್ಸಿಇಆರ್ಟಿಯ(NCERT) ನಿರ್ದೇಶಕ ದಿನೇಶ್ ಪ್ರಸಾದ್ ಸಕ್ಲಾನಿ ಪ್ರಶ್ನಿಸಿದ್ದಾರೆ.
ಇತ್ತೀಚೆಗೆ ದೇಶದ ಉನ್ನತ ಶಿಕ್ಷಣ ಸಂಸ್ಥೆ NCERT ಪಠ್ಯಪುಸ್ತಕಗಳಿಂದ ಬಾಬರಿ ಮಸೀದಿ(Babari mosque) ಧ್ವಂಸ ಮತ್ತು ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ(Lal Krishna Advani)ನೇತೃತ್ವದ ರಾಮ ರಥ ಯಾತ್ರೆಯ ಉಲ್ಲೇಖಗಳನ್ನು ತೆಗೆದುಹಾಕಲಾಗಿದೆ. ಈ ವಿಷಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿರುವ ಸಮಯದಲ್ಲೇ NCERT ಪ್ರಮುಖ್ಯಸ್ಥರು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.
ಏಕೆ ಇವುಗಳನ್ನು ಮಕ್ಕಳಿಗೆ ಕಲಿಸಬೇಕು? : ನಾವು ನಮ್ಮ ವಿದ್ಯಾರ್ಥಿಗಳನ್ನು ಆಕ್ರಮಣಕಾರಿಯಾಗುವಂತೆ ಕಲಿಸಬೇಕೇ, ಸಮಾಜದಲ್ಲಿ ದ್ವೇಷವನ್ನು ಸೃಷ್ಟಿಸಬೇಕೇ ಅಥವಾ ದ್ವೇಷಕ್ಕೆ ಬಲಿಯಾಗಬೇಕೇ? ಇದು ಶಿಕ್ಷಣದ ಉದ್ದೇಶವೇ? ಚಿಕ್ಕ ಮಕ್ಕಳಿಗೆ ನಾವು ಗಲಭೆಗಳ ಬಗ್ಗೆ ಕಲಿಸಬೇಕೇ? ಅವರು ಬೆಳೆದಾಗ, ಅವರು ಅದರ ಬಗ್ಗೆ ಕಲಿಯಬಹುದು. ಆದರೆ ಶಾಲೆಯ ಪಠ್ಯಪುಸ್ತಕಗಳು ಏಕೆ ಎಂದು ಪ್ರಶ್ನಿಸಿದ್ದಾರೆ. ಅವರು ಬೆಳೆದಾಗ ಏನಾಯಿತು ಮತ್ತು ಏಕೆ ಸಂಭವಿಸಿತು ಎಂಬುದನ್ನು ಅವರು ಅರ್ಥಮಾಡಿಕೊಳ್ಳಲಿ. ಬಾಲ್ಯದಲ್ಲಿ ಅವುಗಳ ಬಗ್ಗೆ ಕಲಿಕೆ ಅಪ್ರಸ್ತುತವಾಗಿದೆ ಎಂದು ಸಕ್ಲಾನಿ ಪ್ರತಿಪಾದಿಸಿದರು. ಹೊಸದಾಗಿ ಪರಿಷ್ಕೃತ ಪಠ್ಯಪುಸ್ತಕದಲ್ಲಿನ ಪಾಠವು ರಾಮ ಮಂದಿರ ನಿರ್ಮಾಣಕ್ಕೆ ದಾರಿಮಾಡಿಕೊಟ್ಟ ಸುಪ್ರೀಂ ಕೋರ್ಟ್ ತೀರ್ಪಿನ ಮೇಲೆ ಕೇಂದ್ರೀಕರಿಸುತ್ತದೆ.
– ಅಂತರ್ಜಾಲ ಮಾಹಿತಿ
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…