ಆರ್ಥಿಕ ನಷ್ಟದ ಹಿನ್ನೆಲೆ | ಮತ್ತೆ ನಂದಿನಿ ಹಾಲಿನ ಬೆಲೆ ಏರಿಕೆ ಸಾಧ್ಯತೆ | ಗ್ರಾಹಕರ ಮೇಲೆ ಹೆಚ್ಚುತ್ತಿದೆ ಹೊರೆ |

December 7, 2023
12:28 PM

ಹಳ್ಳಿಗಳಲ್ಲಿ ದನ(cattle) ಸಾಕುವವರ ಸಂಖ್ಯೆ ದಿನದಿಂದ ದಿನಕ್ಕ ಕುಸಿಯುತ್ತಿದೆ. ಅದರಲ್ಲೂ ಮಲೆನಾಡು ಗಿಡ್ಡ ತಳಿಗಳಂತೂ(small breeds ) ಯಾರಿಗೂ ಬೇಡ. ಹೈನುಗಾರಿಕೆ(dairy farmers) ಮಾಡುವವರು ಜಾಸ್ತಿ ಹಾಲು ಕೊಡುವ ಜರ್ಸಿ ದನಗಳನ್ನೇ(jersey cow) ಸಾಕುತ್ತಾರೆ. ಕೊನೆ ಪಕ್ಷ ಹಳ್ಳಿಗಳಲ್ಲಿ(villages ) ತಮ್ಮ ಮನೆ ಬಳಕೆಗಾದರು ದನ ಸಾಕಿ ಹಾಲು ಉಪಯೋಗಿಸಿಕೊಂಡರೆ ಒಳ್ಳೆಯದು. ಇತ್ತ ಹಳ್ಳಿ ಜನಕ್ಕೂ ನಂದಿನಿ ಪ್ಯಾಕೆಟ್‌ ಹಾಲೇ ಬೇಕು. ಇದರ ಪರಿಣಾಮ ಈಗ ಮತ್ತೆ ಹಾಲಿನ ದರ ಏರಿಕೆಗೆ(Nandini Milk Rate) ಚಿಂತನೆ ನಡೆದಿದೆ.

Advertisement
Advertisement

ಮತ್ತೆ ನಂದಿನಿ ಹಾಲಿನ ದರ  ಏರಿಕೆಯಾಗುವ ಸಾಧ್ಯತೆಯಿದೆ. ನಂದಿನಿ ಹಾಲಿನ ದರ ಪರಿಷ್ಕರಣೆಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF) ಚಿಂತನೆ ನಡೆಸಿದೆ. ಕೆಎಂಎಫ್ ಅಧಿಕಾರಿಗಳ ಮಟ್ಟದಲ್ಲಿ ದರ ಏರಿಕೆ ಕುರಿತು ಸದ್ಯ ಚಿಂತನೆ ನಡೆದಿದ್ದು, ಸರ್ಕಾರ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದರೆ ಹೊಸ ವರ್ಷದ ಆರಂಭದಲ್ಲೇ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆಯಿದೆ.

Advertisement

ಬೆಲೆ ಏರಿಕೆ ಯಾಕೆ? : ಆರ್ಥಿಕ ನಷ್ಟದ (Economic Loss) ಹಿನ್ನೆಲೆ ಈ ಹಿಂದೆ 5 ರೂ. ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಕೆಎಂಎಫ್‌ ಮನವಿ ಮಾಡಿತ್ತು. ಆದರೆ ಸರ್ಕಾರ ಅಕ್ಟೋಬರ್‌ನಲ್ಲಿ ಕೇವಲ 3 ರೂಪಾಯಿ ಮಾತ್ರ ಏರಿಕೆ ಮಾಡಿತ್ತು. ಈಗ 14 ಹಾಲು ಒಕ್ಕೂಟ ಗಳಿಂದ ಮನವಿ ಬಂದಲ್ಲಿ ಕೂಡಲೇ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲು ಕೆಎಂಎಫ್ ತಯಾರಿ ನಡೆಸುತ್ತಿದೆ.  ಕಳೆದ ಬಾರಿ 3 ರೂ. ನೇರವಾಗಿ ರೈತರಿಗೆ ನೀಡಿದ ಹಿನ್ನೆಲೆ ಒಕ್ಕೂಟಗಳಿಗೆ ನಷ್ಟದ ಸರಿದೂಗಿಸಲು ದರ ಪರಿಷ್ಕರಣೆ ಅನಿವಾರ್ಯ ಎನ್ನುತ್ತಿದ್ದಾರೆ ಕೆಎಂಎಫ್ ಅಧಿಕಾರಿಗಳು. ಸದ್ಯ ಜನವರಿಯಲ್ಲಿ ಒಕ್ಕೂಟಗಳ ಸಭೆ ಕರೆದು ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲು ಕೆಎಂಎಫ್ ಚಿಂತನೆ ನಡೆಸಿದೆ.

The number of cattle keepers in the villages is decreasing day by day. Especially, no one wants the small breeds of the highlands. The dairy farmers keep only the jersey cows that give more milk. Finally, it would be good if the people in the villages used the milk of the cows at home. Nandini Milk Rate has been considered for price increase.

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

20 ಕೃಷಿ ಉತ್ಪನ್ನಗಳ ರಫ್ತುಗಳಿಗೆ ಉತ್ತೇಜನ ನೀಡುವ ಯೋಜನೆ |
April 27, 2024
9:05 PM
by: ದ ರೂರಲ್ ಮಿರರ್.ಕಾಂ
Karnataka Weather | 27-04-2024 | ಮೋಡ- ಬಿಸಿಗಾಳಿ | ಮಳೆ ಸಾಧ್ಯತೆ ಕಡಿಮೆ |
April 27, 2024
3:21 PM
by: ಸಾಯಿಶೇಖರ್ ಕರಿಕಳ
ಕೋವಿ ಠೇವಣಾತಿ ಪ್ರಕರಣ | ಬೆಳ್ಳಾರೆ ಜಯಪ್ರಸಾದ್ ಜೋಶಿ ಹಾಗೂ ಇತರ 4 ರಿಟ್ ಅರ್ಜಿದಾರರ ಪರ ಹೈಕೋರ್ಟ್ ಆದೇಶ‌ |
April 27, 2024
2:15 PM
by: ದ ರೂರಲ್ ಮಿರರ್.ಕಾಂ
ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ | ಯಾಕೆ ಗೊತ್ತಾ…?
April 25, 2024
11:48 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror