Advertisement
MIRROR FOCUS

ಆರ್ಥಿಕ ನಷ್ಟದ ಹಿನ್ನೆಲೆ | ಮತ್ತೆ ನಂದಿನಿ ಹಾಲಿನ ಬೆಲೆ ಏರಿಕೆ ಸಾಧ್ಯತೆ | ಗ್ರಾಹಕರ ಮೇಲೆ ಹೆಚ್ಚುತ್ತಿದೆ ಹೊರೆ |

Share

ಹಳ್ಳಿಗಳಲ್ಲಿ ದನ(cattle) ಸಾಕುವವರ ಸಂಖ್ಯೆ ದಿನದಿಂದ ದಿನಕ್ಕ ಕುಸಿಯುತ್ತಿದೆ. ಅದರಲ್ಲೂ ಮಲೆನಾಡು ಗಿಡ್ಡ ತಳಿಗಳಂತೂ(small breeds ) ಯಾರಿಗೂ ಬೇಡ. ಹೈನುಗಾರಿಕೆ(dairy farmers) ಮಾಡುವವರು ಜಾಸ್ತಿ ಹಾಲು ಕೊಡುವ ಜರ್ಸಿ ದನಗಳನ್ನೇ(jersey cow) ಸಾಕುತ್ತಾರೆ. ಕೊನೆ ಪಕ್ಷ ಹಳ್ಳಿಗಳಲ್ಲಿ(villages ) ತಮ್ಮ ಮನೆ ಬಳಕೆಗಾದರು ದನ ಸಾಕಿ ಹಾಲು ಉಪಯೋಗಿಸಿಕೊಂಡರೆ ಒಳ್ಳೆಯದು. ಇತ್ತ ಹಳ್ಳಿ ಜನಕ್ಕೂ ನಂದಿನಿ ಪ್ಯಾಕೆಟ್‌ ಹಾಲೇ ಬೇಕು. ಇದರ ಪರಿಣಾಮ ಈಗ ಮತ್ತೆ ಹಾಲಿನ ದರ ಏರಿಕೆಗೆ(Nandini Milk Rate) ಚಿಂತನೆ ನಡೆದಿದೆ.

Advertisement

ಮತ್ತೆ ನಂದಿನಿ ಹಾಲಿನ ದರ  ಏರಿಕೆಯಾಗುವ ಸಾಧ್ಯತೆಯಿದೆ. ನಂದಿನಿ ಹಾಲಿನ ದರ ಪರಿಷ್ಕರಣೆಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF) ಚಿಂತನೆ ನಡೆಸಿದೆ. ಕೆಎಂಎಫ್ ಅಧಿಕಾರಿಗಳ ಮಟ್ಟದಲ್ಲಿ ದರ ಏರಿಕೆ ಕುರಿತು ಸದ್ಯ ಚಿಂತನೆ ನಡೆದಿದ್ದು, ಸರ್ಕಾರ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದರೆ ಹೊಸ ವರ್ಷದ ಆರಂಭದಲ್ಲೇ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆಯಿದೆ.

ಬೆಲೆ ಏರಿಕೆ ಯಾಕೆ? : ಆರ್ಥಿಕ ನಷ್ಟದ (Economic Loss) ಹಿನ್ನೆಲೆ ಈ ಹಿಂದೆ 5 ರೂ. ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಕೆಎಂಎಫ್‌ ಮನವಿ ಮಾಡಿತ್ತು. ಆದರೆ ಸರ್ಕಾರ ಅಕ್ಟೋಬರ್‌ನಲ್ಲಿ ಕೇವಲ 3 ರೂಪಾಯಿ ಮಾತ್ರ ಏರಿಕೆ ಮಾಡಿತ್ತು. ಈಗ 14 ಹಾಲು ಒಕ್ಕೂಟ ಗಳಿಂದ ಮನವಿ ಬಂದಲ್ಲಿ ಕೂಡಲೇ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲು ಕೆಎಂಎಫ್ ತಯಾರಿ ನಡೆಸುತ್ತಿದೆ.  ಕಳೆದ ಬಾರಿ 3 ರೂ. ನೇರವಾಗಿ ರೈತರಿಗೆ ನೀಡಿದ ಹಿನ್ನೆಲೆ ಒಕ್ಕೂಟಗಳಿಗೆ ನಷ್ಟದ ಸರಿದೂಗಿಸಲು ದರ ಪರಿಷ್ಕರಣೆ ಅನಿವಾರ್ಯ ಎನ್ನುತ್ತಿದ್ದಾರೆ ಕೆಎಂಎಫ್ ಅಧಿಕಾರಿಗಳು. ಸದ್ಯ ಜನವರಿಯಲ್ಲಿ ಒಕ್ಕೂಟಗಳ ಸಭೆ ಕರೆದು ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲು ಕೆಎಂಎಫ್ ಚಿಂತನೆ ನಡೆಸಿದೆ.

The number of cattle keepers in the villages is decreasing day by day. Especially, no one wants the small breeds of the highlands. The dairy farmers keep only the jersey cows that give more milk. Finally, it would be good if the people in the villages used the milk of the cows at home. Nandini Milk Rate has been considered for price increase.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

3 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

17 hours ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

18 hours ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

18 hours ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

18 hours ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

18 hours ago