Advertisement
MIRROR FOCUS

ಆರ್ಥಿಕ ನಷ್ಟದ ಹಿನ್ನೆಲೆ | ಮತ್ತೆ ನಂದಿನಿ ಹಾಲಿನ ಬೆಲೆ ಏರಿಕೆ ಸಾಧ್ಯತೆ | ಗ್ರಾಹಕರ ಮೇಲೆ ಹೆಚ್ಚುತ್ತಿದೆ ಹೊರೆ |

Share

ಹಳ್ಳಿಗಳಲ್ಲಿ ದನ(cattle) ಸಾಕುವವರ ಸಂಖ್ಯೆ ದಿನದಿಂದ ದಿನಕ್ಕ ಕುಸಿಯುತ್ತಿದೆ. ಅದರಲ್ಲೂ ಮಲೆನಾಡು ಗಿಡ್ಡ ತಳಿಗಳಂತೂ(small breeds ) ಯಾರಿಗೂ ಬೇಡ. ಹೈನುಗಾರಿಕೆ(dairy farmers) ಮಾಡುವವರು ಜಾಸ್ತಿ ಹಾಲು ಕೊಡುವ ಜರ್ಸಿ ದನಗಳನ್ನೇ(jersey cow) ಸಾಕುತ್ತಾರೆ. ಕೊನೆ ಪಕ್ಷ ಹಳ್ಳಿಗಳಲ್ಲಿ(villages ) ತಮ್ಮ ಮನೆ ಬಳಕೆಗಾದರು ದನ ಸಾಕಿ ಹಾಲು ಉಪಯೋಗಿಸಿಕೊಂಡರೆ ಒಳ್ಳೆಯದು. ಇತ್ತ ಹಳ್ಳಿ ಜನಕ್ಕೂ ನಂದಿನಿ ಪ್ಯಾಕೆಟ್‌ ಹಾಲೇ ಬೇಕು. ಇದರ ಪರಿಣಾಮ ಈಗ ಮತ್ತೆ ಹಾಲಿನ ದರ ಏರಿಕೆಗೆ(Nandini Milk Rate) ಚಿಂತನೆ ನಡೆದಿದೆ.

Advertisement
Advertisement

ಮತ್ತೆ ನಂದಿನಿ ಹಾಲಿನ ದರ  ಏರಿಕೆಯಾಗುವ ಸಾಧ್ಯತೆಯಿದೆ. ನಂದಿನಿ ಹಾಲಿನ ದರ ಪರಿಷ್ಕರಣೆಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF) ಚಿಂತನೆ ನಡೆಸಿದೆ. ಕೆಎಂಎಫ್ ಅಧಿಕಾರಿಗಳ ಮಟ್ಟದಲ್ಲಿ ದರ ಏರಿಕೆ ಕುರಿತು ಸದ್ಯ ಚಿಂತನೆ ನಡೆದಿದ್ದು, ಸರ್ಕಾರ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದರೆ ಹೊಸ ವರ್ಷದ ಆರಂಭದಲ್ಲೇ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆಯಿದೆ.

ಬೆಲೆ ಏರಿಕೆ ಯಾಕೆ? : ಆರ್ಥಿಕ ನಷ್ಟದ (Economic Loss) ಹಿನ್ನೆಲೆ ಈ ಹಿಂದೆ 5 ರೂ. ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಕೆಎಂಎಫ್‌ ಮನವಿ ಮಾಡಿತ್ತು. ಆದರೆ ಸರ್ಕಾರ ಅಕ್ಟೋಬರ್‌ನಲ್ಲಿ ಕೇವಲ 3 ರೂಪಾಯಿ ಮಾತ್ರ ಏರಿಕೆ ಮಾಡಿತ್ತು. ಈಗ 14 ಹಾಲು ಒಕ್ಕೂಟ ಗಳಿಂದ ಮನವಿ ಬಂದಲ್ಲಿ ಕೂಡಲೇ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲು ಕೆಎಂಎಫ್ ತಯಾರಿ ನಡೆಸುತ್ತಿದೆ.  ಕಳೆದ ಬಾರಿ 3 ರೂ. ನೇರವಾಗಿ ರೈತರಿಗೆ ನೀಡಿದ ಹಿನ್ನೆಲೆ ಒಕ್ಕೂಟಗಳಿಗೆ ನಷ್ಟದ ಸರಿದೂಗಿಸಲು ದರ ಪರಿಷ್ಕರಣೆ ಅನಿವಾರ್ಯ ಎನ್ನುತ್ತಿದ್ದಾರೆ ಕೆಎಂಎಫ್ ಅಧಿಕಾರಿಗಳು. ಸದ್ಯ ಜನವರಿಯಲ್ಲಿ ಒಕ್ಕೂಟಗಳ ಸಭೆ ಕರೆದು ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲು ಕೆಎಂಎಫ್ ಚಿಂತನೆ ನಡೆಸಿದೆ.

The number of cattle keepers in the villages is decreasing day by day. Especially, no one wants the small breeds of the highlands. The dairy farmers keep only the jersey cows that give more milk. Finally, it would be good if the people in the villages used the milk of the cows at home. Nandini Milk Rate has been considered for price increase.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ

ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?.  ಈ ಪ್ರಶ್ನೆಗೆ ಹಲವರದು ಹಲವು…

9 hours ago

ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…

16 hours ago

ಕೊಳೆ ರೋಗ ನಿಯಂತ್ರಣಕ್ಕೂ ತೆರಿಗೆ…? ಮೈಲುತುತ್ತಿಗೆ ಸುಂಕ – ಅಡಿಕೆ ರೈತನಿಗೆ ಮತ್ತೊಂದು ಹೊರೆ..!

ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…

23 hours ago

ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ

ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…

23 hours ago

ಯೂರಿಯಾ ಮಾರಾಟ 3.8% ಏರಿಕೆ | ದೇಶೀಯ ಉತ್ಪಾದನೆ ಕುಸಿತ, ಆಮದು 85% ಹೆಚ್ಚಳ

ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…

23 hours ago

ಶುದ್ಧ ಹಿಮಾಲಯವೂ ಸುರಕ್ಷಿತವಲ್ಲ..! ಮರುಭೂಮಿ ಧೂಳಿನೊಂದಿಗೆ ಹರಡುವ ರೋಗಕಾರಕಗಳು

ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…

24 hours ago