Advertisement
MIRROR FOCUS

ಆರ್ಥಿಕ ನಷ್ಟದ ಹಿನ್ನೆಲೆ | ಮತ್ತೆ ನಂದಿನಿ ಹಾಲಿನ ಬೆಲೆ ಏರಿಕೆ ಸಾಧ್ಯತೆ | ಗ್ರಾಹಕರ ಮೇಲೆ ಹೆಚ್ಚುತ್ತಿದೆ ಹೊರೆ |

Share

ಹಳ್ಳಿಗಳಲ್ಲಿ ದನ(cattle) ಸಾಕುವವರ ಸಂಖ್ಯೆ ದಿನದಿಂದ ದಿನಕ್ಕ ಕುಸಿಯುತ್ತಿದೆ. ಅದರಲ್ಲೂ ಮಲೆನಾಡು ಗಿಡ್ಡ ತಳಿಗಳಂತೂ(small breeds ) ಯಾರಿಗೂ ಬೇಡ. ಹೈನುಗಾರಿಕೆ(dairy farmers) ಮಾಡುವವರು ಜಾಸ್ತಿ ಹಾಲು ಕೊಡುವ ಜರ್ಸಿ ದನಗಳನ್ನೇ(jersey cow) ಸಾಕುತ್ತಾರೆ. ಕೊನೆ ಪಕ್ಷ ಹಳ್ಳಿಗಳಲ್ಲಿ(villages ) ತಮ್ಮ ಮನೆ ಬಳಕೆಗಾದರು ದನ ಸಾಕಿ ಹಾಲು ಉಪಯೋಗಿಸಿಕೊಂಡರೆ ಒಳ್ಳೆಯದು. ಇತ್ತ ಹಳ್ಳಿ ಜನಕ್ಕೂ ನಂದಿನಿ ಪ್ಯಾಕೆಟ್‌ ಹಾಲೇ ಬೇಕು. ಇದರ ಪರಿಣಾಮ ಈಗ ಮತ್ತೆ ಹಾಲಿನ ದರ ಏರಿಕೆಗೆ(Nandini Milk Rate) ಚಿಂತನೆ ನಡೆದಿದೆ.

ಮತ್ತೆ ನಂದಿನಿ ಹಾಲಿನ ದರ  ಏರಿಕೆಯಾಗುವ ಸಾಧ್ಯತೆಯಿದೆ. ನಂದಿನಿ ಹಾಲಿನ ದರ ಪರಿಷ್ಕರಣೆಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF) ಚಿಂತನೆ ನಡೆಸಿದೆ. ಕೆಎಂಎಫ್ ಅಧಿಕಾರಿಗಳ ಮಟ್ಟದಲ್ಲಿ ದರ ಏರಿಕೆ ಕುರಿತು ಸದ್ಯ ಚಿಂತನೆ ನಡೆದಿದ್ದು, ಸರ್ಕಾರ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದರೆ ಹೊಸ ವರ್ಷದ ಆರಂಭದಲ್ಲೇ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆಯಿದೆ.

ಬೆಲೆ ಏರಿಕೆ ಯಾಕೆ? : ಆರ್ಥಿಕ ನಷ್ಟದ (Economic Loss) ಹಿನ್ನೆಲೆ ಈ ಹಿಂದೆ 5 ರೂ. ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಕೆಎಂಎಫ್‌ ಮನವಿ ಮಾಡಿತ್ತು. ಆದರೆ ಸರ್ಕಾರ ಅಕ್ಟೋಬರ್‌ನಲ್ಲಿ ಕೇವಲ 3 ರೂಪಾಯಿ ಮಾತ್ರ ಏರಿಕೆ ಮಾಡಿತ್ತು. ಈಗ 14 ಹಾಲು ಒಕ್ಕೂಟ ಗಳಿಂದ ಮನವಿ ಬಂದಲ್ಲಿ ಕೂಡಲೇ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲು ಕೆಎಂಎಫ್ ತಯಾರಿ ನಡೆಸುತ್ತಿದೆ.  ಕಳೆದ ಬಾರಿ 3 ರೂ. ನೇರವಾಗಿ ರೈತರಿಗೆ ನೀಡಿದ ಹಿನ್ನೆಲೆ ಒಕ್ಕೂಟಗಳಿಗೆ ನಷ್ಟದ ಸರಿದೂಗಿಸಲು ದರ ಪರಿಷ್ಕರಣೆ ಅನಿವಾರ್ಯ ಎನ್ನುತ್ತಿದ್ದಾರೆ ಕೆಎಂಎಫ್ ಅಧಿಕಾರಿಗಳು. ಸದ್ಯ ಜನವರಿಯಲ್ಲಿ ಒಕ್ಕೂಟಗಳ ಸಭೆ ಕರೆದು ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲು ಕೆಎಂಎಫ್ ಚಿಂತನೆ ನಡೆಸಿದೆ.

The number of cattle keepers in the villages is decreasing day by day. Especially, no one wants the small breeds of the highlands. The dairy farmers keep only the jersey cows that give more milk. Finally, it would be good if the people in the villages used the milk of the cows at home. Nandini Milk Rate has been considered for price increase.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

4 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

4 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

8 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

9 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

9 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

1 day ago