Advertisement
MIRROR FOCUS

ಸರಕು ಸಾಗಣೆ ಹಡಗು ಅಪಹರಿಸಿದ ಹೌತಿ ಬಂಡುಕೋರರು | ಹೈಜಾಕ್‌ ವಿಡಿಯೋ ಬಿಡುಗಡೆ | ಇಸ್ರೇಲ್‌ನೊಂದಿಗಿನ ಭಾರತ ಸಂಪರ್ಕ ಹೊಂದಿರುವುದೇ ಕಾರಣ..!? |

Share

ಟರ್ಕಿಯಿಂದ(Turkey) ಭಾರತಕ್ಕೆ(India) ಬರುತ್ತಿದ್ದ ‘ಗ್ಯಾಲಕ್ಸಿ ಲೀಡರ್'(Galaxy Leader) ಹೆಸರಿನ ಸರಕು ಸಾಗಣೆ ಹಡಗನ್ನು(cargo ship) ಎಮೆನ್‌ ದೇಶದ ಹೌತಿ ಬಂಡುಕೋರರು(rebels of Yemen) ಇತ್ತೀಚೆಗೆ ಅಪಹರಿಸಿದ್ದರು(hijack). ಇಸ್ರೇಲ್‌ಗೆ(Israel) ಸೇರಿದ ಈ ಹಡಗನ್ನು ಕೆಂಪು ಸಮುದ್ರದಲ್ಲಿ(Red Sea) ಹೈಜಾಕ್ ಮಾಡಿ ಯೆಮನ್‌ನ ಕರಾವಳಿ ಪ್ರದೇಶಕ್ಕೆ ಸ್ಥಳಾಂತರಿಸಿದ್ದರು. ಹಡಗಿನ 25 ಸಿಬ್ಬಂದಿಯನ್ನು ಒತ್ತೆಯಾಳಾಗಿ ಇರಿಸಿಕೊಳ್ಳಲಾಗಿದೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ.

Advertisement
Advertisement

ಅಪಹರಣವನ್ನು ದೃಢೀಕರಿಸಿದ ಇಸ್ರೇಲಿ ರಕ್ಷಣಾ ಪಡೆಗಳು ಈ ಕುರಿತು ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, ದಕ್ಷಿಣ ಕೆಂಪು ಸಮುದ್ರದಲ್ಲಿ ಯೆಮೆನ್ ಬಳಿ ಹೌತಿಗಳು ಸರಕು ಹಡಗನ್ನು ಅಪಹರಿಸಿದ್ದಾರೆ. ಜಾಗತಿಕ ಪರಿಣಾಮದ ಅತ್ಯಂತ ಗಂಭೀರ ಘಟನೆಯಾಗಿದೆ. ಹಡಗು ಭಾರತಕ್ಕೆ ಟರ್ಕಿಯಿಂದ ಹೊರಟಿತ್ತು. ಹಡಗಿನಲ್ಲಿ ಇಸ್ರೇಲಿಗಳನ್ನು ಒಳಗೊಂಡಂತೆ ವಿವಿಧ ರಾಷ್ಟ್ರಗಳ ನಾಗರಿಕ ಸಿಬ್ಬಂದಿ ಇದ್ದಾರೆ. ಆದರೆ ಈ ಹಡುಗು ಇಸ್ರೇಲ್‌ಗೆ ಸೇರಿದ್ದಲ್ಲ ಎಂದು ಹೇಳಿದೆ.

Advertisement

ಇಸ್ರೇಲ್‌ನೊಂದಿಗಿನ ಭಾರತ ಸಂಪರ್ಕ ಹೊಂದಿದೆ ಎನ್ನುವ ಕಾರಣಕ್ಕೆ ಇರಾನ್ ಬೆಂಬಲಿತ ಹೌತಿ ಬಂಡುಕೋರರು ಹಡಗನ್ನು ವಶಪಡಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಗಾಜಾದ ಮೇಲೆ ಇಸ್ರೇಲ್‌ ನಡೆಸುತ್ತಿರುವ ದಾಳಿಯನ್ನು ನಿಲ್ಲಿಸುವವರೆಗೂ ಅಂತರರಾಷ್ಟ್ರೀಯ ನೀರಿನಲ್ಲಿ ಇಸ್ರೇಲಿಗಳಿಗೆ ಸಂಪರ್ಕ ಹೊಂದಿದ ಅಥವಾ ಒಡೆತನದ ಹಡಗುಗಳನ್ನು ಗುರಿಯಾಗಿಸುವುದನ್ನು ಮುಂದುವರಿಸುತ್ತೇವೆ ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಹೌತಿಗಳ ಮುಖ್ಯ ಸಮಾಲೋಚಕ ಮತ್ತು ವಕ್ತಾರ ಮೊಹಮ್ಮದ್ ಅಬ್ದುಲ್-ಸಲಾಮ್, ”ಇಸ್ರೇಲಿ ಹಡಗುಗಳನ್ನು ಅಪಹರಿಸುವ ಮೂಲಕ ಯಮನ್ ಸಶಸ್ತ್ರ ಪಡೆಗಳ ಗಂಭೀರತೆಯನ್ನು ಸಾಬೀತುಪಡಿಸುವ ಪ್ರಾಯೋಗಿಕ ಹೆಜ್ಜೆಯನ್ನು ಇಟ್ಟಿವೆ.. ಇದು ಆರಂಭ” ಎಂದು ಹೇಳಿದ್ದಾರೆ. ಇದೀಗ ಇದಕ್ಕೆ ಸಂಬಂಧಿಸಿದ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಸರಕು ಹಡಗನ್ನು ಹೇಗೆ ಅಪಹರಿಸಲಾಗಿತ್ತು ಎಂಬುದನ್ನು ವಿಡಿಯೋದಲ್ಲಿ ಸ್ಪಷ್ಟವಾಗಿ ನೋಡಬಹುದು.

ಹೌತಿಗಳು ಅಪಹರಿಸಿರುವ ಹಡಗು ಇಸ್ರೇಲ್‌ಗೆ ಸೇರಿದ್ದಲ್ಲ. ಬ್ರಿಟಿಷ್ ಕಂಪನಿಯ ಒಡೆತನದ ಮತ್ತು ಜಪಾನ್ ಸಂಸ್ಥೆಯ ನಿರ್ವಹಣೆ ಮಾಡುತ್ತಿರುವ ಹಡಗನ್ನು ಯೆಮೆನ್ ಹೌತಿ ಬಂಡುಕೋರರು ಇರಾನ್ ಮಾರ್ಗದರ್ಶನದಲ್ಲಿ ಅಪಹರಿಸಿದ್ದಾರೆ. ಇರಾನ್ ಮುಂದೆ ನಿಂತು ಅಂತಾರಾಷ್ಟ್ರೀಯ ಹಡಗು ಅಪರಹರಣಕ್ಕೆ ಸಹಕರಿಸಿರುವುದು ಖಂಡನಾರ್ಹವಾಗಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕಾರ್ಯಾಲಯವು ಟ್ವೀಟ್ ಮಾಡಿದೆ.

Advertisement

The cargo ship named ‘Galaxy Leader’, which was coming from Turkey to India, was recently hijacked by Houthi rebels of Yemen. This ship belonging to Israel was hijacked in the Red Sea and moved to the coast of Yemen. The Associated Press reported that 25 of the ship’s crew members were being held hostage.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ : ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ :

ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…

12 hours ago

ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? ಪರಿಸರಿದಿಂದ ನಮಗಾಗುವ ಪ್ರಯೋಜನವೇನು..?

ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…

12 hours ago

ಸಮುದ್ರದ ಉಪ್ಪು, ಅಯೋಡಿಕರಿಸಿದ ಟೇಬಲ್ ಉಪ್ಪು, ಸೈಂಧವ ಉಪ್ಪು, ಕಪ್ಪು ಉಪ್ಪು : ಯಾವ ಉಪ್ಪು ಆರೋಗ್ಯಕ್ಕೆ ಒಳ್ಳೆಯದು?

ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…

13 hours ago

ಕೆಲ ಜಿಲ್ಲೆಯ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ : ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ

ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…

13 hours ago

ವರುಣ ಕೃಪೆ ತೋರದಿದ್ರೆ ಭಾರಿ ಸಂಕಷ್ಟ : ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ!

ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…

16 hours ago

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

17 hours ago