Advertisement
MIRROR FOCUS

ಮಳೆ ಕೊರತೆ, ಬೆಳೆ ನಷ್ಟ ಹಿನ್ನೆಲೆ | ಅಕ್ಕಿ ರಫ್ತಿನ ಮೇಲೆ ಕೇಂದ್ರ ಸರ್ಕಾರದಿಂದ ನಿಷೇಧ ಹೇರಿಕೆ..? | ಇದರ ಪರಿಣಾಮಗಳೇನು..?

Share

ಈ ಬಾರಿ ದೇಶದಾದ್ಯಂತ ಮುಂಗಾರು ಮಳೆ(Mansoon Rain) ಕೈ ಕೊಟ್ಟಿದೆ. ಇದರಿಂದ ಸರಿಯಾಗಿ ಯಾವುದೆ ಬೆಳೆ ಬೆಳೆಯಲು ರೈತರಿಗೆ(Farmer) ಅನುಕೂಲವಾಗಿಲ್ಲ. ಹೀಗಾಗಿ ಭಾರತದಲ್ಲಿ (India) ಈ ಬಾರಿ ಅಕ್ಕಿ (Rice) ಉತ್ಪಾದನೆ ಭಾರಿ ಕುಂಠಿತಗೊಂಡಿದೆ. ಇದರಿಂದ ಕೇಂದ್ರದ ದಾಸ್ತಾನಿನಲ್ಲಿ ಕಡಿಮೆ ಪ್ರಮಾಣದಲ್ಲಿ ಅಕ್ಕಿ ಸಂಗ್ರಹವಾಗಿದೆ. ಇದೇ ಕಾರಣಕ್ಕೆ ದೇಶದಲ್ಲಿ ಆಹಾರ ಭದ್ರತೆಗೆ ಧಕ್ಕೆಯಾಗದಂತೆ ಹಾಗೂ ದೇಶದ ಒಳಗಡೆ ಬೆಲೆಯಲ್ಲಿ ಏರಿಕೆಯಾಗದಂತೆ ಎಚ್ಚರಿಕೆ ವಹಿಸುವ ಸಲುವಾಗಿ ಕೆಲವು ಅಕ್ಕಿ ತಳಿಗಳ ರಫ್ತಿನ ಮೇಲೆ ಕೇಂದ್ರ ಸರ್ಕಾರ(central Govt) ನಿಷೇಧ(Rice Exports Ban)  ಹೇರಿದೆ.

Advertisement
Advertisement

2023-24ರ ಖಾರಿಫ್ ಅಕ್ಕಿ ಉತ್ಪಾದನೆ 1063.13 ಲಕ್ಷ ಮೆಟ್ರಿಕ್ ಟನ್‍ಗಳಷ್ಟಿರುವ ಅಂದಾಜಿದೆ. ಕಳೆದ ವರ್ಷ ಇದೇ ಋತುವಿನಲ್ಲಿ ದಾಖಲಾದ 1105.12 ಲಕ್ಷ ಮೆಟ್ರಿಕ್ ಟನ್‍ಗಿಂತ ಇದು 3.7% ಕಡಿಮೆಯಾಗಿದೆ. ಈ ಪ್ರಮಾಣದ ಉತ್ಪಾದನೆಯ ಇಳಿಕೆ ಜಾಗತಿಕ ಮಟ್ಟದಲ್ಲಿ ಭಾರೀ ಸಂಚಲವನ್ನು ಸೃಷ್ಟಿಸಿದೆ. ಭಾರತ ಕೈಗೊಂಡ ಬಾಸ್ಮತಿ ಅಕ್ಕಿ ಹೊರತು ಪಡಿಸಿ ಬಿಳಿಯ ಅಕ್ಕಿ ರಫ್ತಿನ ಮೇಲಿನ ನಿರ್ಬಂಧದಿಂದ ದೇಶೀಯ ಮತ್ತು ಜಾಗತಿಕ ಮಾರುಕಟ್ಟೆಗಳಲ್ಲಿ ಪೂರೈಕೆ, ಲಭ್ಯತೆ ಮತ್ತು ಬೆಲೆಗಳ ಮೇಲೆ ಹೇಗೆ ಪ್ರಭಾವ ಬೀರಿದೆ ಎಂಬ ಮಾಹಿತಿ ಇಲ್ಲಿದೆ.

Advertisement

ಭಾರತದ ನಿರ್ಬಂಧ ಜಗತ್ತಿನಾದ್ಯಂತ ಅಕ್ಕಿಯ ಬೆಲೆಗಳನ್ನು ಹೆಚ್ಚಿಸಿವೆಯೇ? ಜುಲೈನಲ್ಲಿ ಭಾರತ ಬಿಳಿ ಅಕ್ಕಿಯ ರಫ್ತು ನಿಷೇಧಿಸಿದ ನಂತರ ಮಾರುಕಟ್ಟೆಯಾದ್ಯಂತ ಅಕ್ಕಿ ಬೆಲೆಯಲ್ಲಿ ತೀವ್ರ ಜಿಗಿತ ಕಂಡುಬಂದಿದೆ. ಇದು ಮುಖ್ಯವಾಗಿ ಅಮೆರಿಕದ ಭಾರತೀಯರ ಆತಂಕಕ್ಕೆ ಕಾರಣವಾಗಿದೆ. ಜೊತೆಗೆ ನಿಷೇಧದಿಂದ ಅತಿ ದೊಡ್ಡ ರಫ್ತು ಕೇಂದ್ರಗಳಾದ ಬಾಂಗ್ಲಾದೇಶ ಮತ್ತು ನೇಪಾಳಕ್ಕೆ ಹೆಚ್ಚಿನ ಹೊಡೆತ ಬೀಳಲಿದೆ. ಆಫ್ರಿಕಾದ ದೇಶಗಳೂ ಭಾರತದ ಅಕ್ಕಿಯನ್ನು ನೆಚ್ಚಿಕೊಂಡಿದ್ದವು. ಈಗ ಥೈಲ್ಯಾಂಡ್, ವಿಯೆಟ್ನಾಂನಂತಹ ಇತರೆ ಪರ್ಯಾಯ ದೇಶಗಳ ಕಡೆ ಮುಖ ಮಾಡಬೇಕಾಗಿದೆ. ಇದು ಅಕ್ಕಿಯ ಕೊರತೆ ಮಾತ್ರವಲ್ಲದೆ ಬೆಲೆ ಎರಿಕೆಗೂ ಕಾರಣವಾಗಿದೆ.

ಅಕ್ಕಿ ರಫ್ತಿನ ಪೈಪೋಟಿಯಲ್ಲಿ ಭಾರತಕ್ಕೆ ಮೊದಲ ಸ್ಥಾನ ಜಾಗತಿಕ ಅಕ್ಕಿ ರಫ್ತಿನಲ್ಲಿ ಭಾರತವು 40%ಕ್ಕಿಂತಲೂ ಹೆಚ್ಚಿನ ಪಾಲನ್ನು ಹೊಂದಿದೆ. 2022ರಲ್ಲಿ 5.9 ಕೋಟಿ ಮೆಟ್ರಿಕ್ ಟನ್‍ನಷ್ಟು ಅಕ್ಕಿ ರಫ್ತು ಮಾಡಲಾಗಿದೆ. ನಂತರದ ನಾಲ್ಕು ಅಕ್ಕಿ ಉತ್ಪಾದನಾ ದೇಶಗಳಾದ ಥೈಲ್ಯಾಂಡ್, ವಿಯೆಟ್ನಾಂ, ಪಾಕಿಸ್ತಾನ ಮತ್ತು ಅಮೆರಿಕದ ಒಟ್ಟಾರೆ ರಫ್ತಿಗಿಂತಲೂ ಭಾರತದ ರಫ್ತು ಹೆಚ್ಚಿತ್ತು. ಭಾರತವು 2022ರಲ್ಲಿ 2ಕೋಟಿ ಟನ್‍ನಷ್ಟು ಬಾಸ್ಮತಿ ಹೊರತುಪಡಿಸಿದ ಅಕ್ಕಿಯನ್ನು ರಫ್ತು ಮಾಡಿದೆ. ಇದರಲ್ಲಿ 1.3 ಕೋಟಿ ಟನ್‍ನಷ್ಟು ಬಾಸ್ಮತಿಯಲ್ಲದ ಬಿಳಿ ಅಕ್ಕಿ ಸೇರಿದೆ. 2022ರ ಸೆಪ್ಟೆಂಬರ್‍ನಲ್ಲಿ ಭಾರತವು ನುಚ್ಚಕ್ಕಿ ರಫ್ತು ನಿಷೇಧ ಮಾಡಿತ್ತು. ಹಾಗೆಯೇ ವಿವಿಧ ಶ್ರೇಣಿಯ ಅಕ್ಕಿ ಮೇಲೆ 20%ರಷ್ಟು ಟ್ಯಾಕ್ಸ್ ವಿಧಿಸಿತ್ತು. ಸರ್ಕಾರವು ಬಾಸ್ಮತಿ ಅಕ್ಕಿ ಹಾಗೂ ಕುಚ್ಚಲಕ್ಕಿ ರಫ್ತಿನ ಮೇಲೆ ಯಾವುದೇ ನಿಷೇಧ ವಿಧಿಸಿಲ್ಲ. 2022ರಲ್ಲಿ ಈ ಅಕ್ಕಿಗಳ ರಫ್ತು ಕ್ರಮವಾಗಿ 40 ಲಕ್ಷ ಟನ್ ಮತ್ತು 70 ಲಕ್ಷ ಟನ್ ಆಗಿತ್ತು.

Advertisement

ಭಾರತದಲ್ಲಿ ಹೆಚ್ಚಿನ ಭಾಗಗಳಲ್ಲಿ ವರ್ಷಕ್ಕೆ ಎರಡು ಬಾರಿ ಭತ್ತ ಬೆಳೆಯಲಾಗುತ್ತದೆ. ಜೂನ್‍ನಲ್ಲಿ ಬಿತ್ತುವ ಭತ್ತ ಉತ್ಪಾದನೆಯ 80%ನಷ್ಟು ಇಳುವರಿ ನೀಡುತ್ತದೆ. ಚಳಿಗಾಲದ ತಿಂಗಳುಗಳಲ್ಲಿ ದಕ್ಷಿಣ ರಾಜ್ಯಗಳಲ್ಲಿ ಹೆಚ್ಚಾಗಿ ಎರಡನೇ ಬೆಳೆಯಾಗಿ ಕೂಡ ಭತ್ತವನ್ನು ಬೆಳೆಯಲಾಗುತ್ತದೆ. ಪಶ್ಚಿಮ ಬಂಗಾಳ ಹೆಚ್ಚಿನ ಭತ್ತ ಬೆಳೆಯುವ ರಾಜ್ಯವಾಗಿದೆ. ನಂತರದ ಸ್ಥಾನದಲ್ಲಿ ಉತ್ತರ ಪ್ರದೇಶ, ಆಂಧ್ರಪ್ರದೇಶ, ಪಂಜಾಬ್, ಒಡಿಶಾ ಮತ್ತು ಛತ್ತೀಸಗಡ ದೇಶದಲ್ಲಿ ಪ್ರಮುಖವಾಗಿ ಅಕ್ಕಿ ಬೆಳೆಯುವ ರಾಜ್ಯಗಳಾಗಿವೆ. ಈ ರಾಜ್ಯಗಳು ಬೆಳೆಯುವ ಭತ್ತದಿಂದಾಗಿ ಭಾರತ ಅಕ್ಕಿ ಉತ್ಪಾದನೆಯಲ್ಲಿ ಎರಡನೇ ಸ್ಥಾನದಲ್ಲಿದೆ. ಚೀನಾ ಅಕ್ಕಿ ಉತ್ಪಾದನೆಯಲ್ಲಿ ಮೊದಲ ಸ್ಥಾನದಲ್ಲಿದೆ. ಭಾರತದಲ್ಲಿ ಭತ್ತ ಬೆಳೆಯುವ ಸಾಮರ್ಥ್ಯ ಹೆಚ್ಚಿಸುವ ಸಲುವಾಗಿ ಸರ್ಕಾರ ಪ್ರತಿ ಕ್ವಿಂಟಾಲ್‍ಗೆ 2,183 ರೂ. ಹೆಚ್ಚುವರಿ ಹಣವನ್ನು ನೀಡಿ ಖರೀದಿ ಮಾಡುತ್ತಿದೆ.

ರಫ್ತು ನಿಷೇಧ ಯಾಕೆ?: ಈ ಬಾರಿ ಮುಂಗಾರಿನ ಆಗಮನ ವಿಳಂಬವಾಗಿದೆ. ಅಲ್ಲದೇ ಕೆಲವೆಡೆ ಭಾರೀ ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ. ಭಾರತದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಅಕ್ಕಿ ಲಭ್ಯವಾಗುವಂತೆ ನೋಡಿಕೊಳ್ಳುವುದು ಹಾಗೂ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಗೆ ಕಡಿವಾಣ ಹಾಕುವುದು ಈ ರಫ್ತು ನಿಷೇಧದ ಹಿಂದಿನ ಉದ್ದೇಶವಾಗಿದೆ. ಇತರ ರಫ್ತು ರಾಷ್ಟ್ರಗಳ ಮೇಲೆ ಒತ್ತಡ ಭಾರತವು ಅಕ್ಕಿ ರಫ್ತಿನಿಂದ ಹೊರಗುಳಿದಿರುವುದರಿಂದ ಇತರ ಅಕ್ಕಿ ರಫ್ತು ಮಾಡುವ ದೇಶಗಳು ಜಾಗತಿಕ ಬೇಡಿಕೆಯನ್ನು ಪೂರೈಸಲು ಹೆಚ್ಚಿನ ಒತ್ತಡವನ್ನು ಎದುರಿಸಬೇಕಾಗಿದೆ. ಇದು ದೀರ್ಘಾವಧಿಯಲ್ಲಿ ಕೊರತೆಗೆ ಕಾರಣವಾಗಬಹುದು.

Advertisement

ಏನೇನು ಪರಿಣಾಮ ಆಗಬಹುದು?: ಹೆಚ್ಚುತ್ತಿರುವ ಆಹಾರದ ಬೆಲೆಗಳು, ಹಣದುಬ್ಬರಕ್ಕೆ ಕಾರಣವಾಗಬಹುದು. ಆಹಾರದ ಕೊರತೆ ಮತ್ತು ಬೆಲೆ ಏರಿಕೆಗಳು ಪ್ರತಿಭಟನೆಗಳು ರಾಜಕೀಯ ಅಸ್ಥಿರತೆಗೆ ಕಾರಣವಾಗಬಹುದು. ಅನೇಕ ಸಂಸ್ಥೆಗಳು ಆಹಾರ ನೆರವು ಕಾರ್ಯಕ್ರಮಗಳಲ್ಲಿ ಪ್ರಮುಖ ಅಕ್ಕಿಯನ್ನು ಅವಲಂಬಿಸಿವೆ. ಅಕ್ಕಿ ಪೂರೈಕೆಯಲ್ಲಿನ ಈ ವ್ಯತ್ಯಯ ಈ ಕಾರ್ಯಕ್ರಮಕ್ಕೆ ತೊಡಕಾಗಬಹುದು. ದೇಶಗಳ ನಡುವಿನ ವ್ಯಾಪಾರ ಸಂಬಂಧಗಳು ಸಂಕೀರ್ಣ ಮತ್ತು ಸೂಕ್ಷ್ಮವಾಗಿವೆ. ಅಕ್ಕಿ ನಿಷೇಧದಂತಹ ಹಠಾತ್ ನೀತಿ ಬದಲಾವಣೆಯು ರಾಜತಾಂತ್ರಿಕ ಮತ್ತು ಆರ್ಥಿಕ ಸಂಬಂಧಗಳನ್ನು ತಗ್ಗಿಸಬಹುದು.

– ಅಂತರ್ಜಾಲ ಮಾಹಿತಿ

Advertisement

This time Monsoon Rain has given hand all over the country. Due to this, it is not convenient for the farmer to grow any crop properly. Thus, the production of rice in India has slowed down a lot this time. Due to this less amount of rice is stored in the central stock. For the same reason, the central government has imposed a ban on the export of some varieties of rice in order to ensure that the food security in the country is not compromised and the price does not increase within the country.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ : ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ :

ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…

8 hours ago

ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? ಪರಿಸರಿದಿಂದ ನಮಗಾಗುವ ಪ್ರಯೋಜನವೇನು..?

ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…

9 hours ago

ಸಮುದ್ರದ ಉಪ್ಪು, ಅಯೋಡಿಕರಿಸಿದ ಟೇಬಲ್ ಉಪ್ಪು, ಸೈಂಧವ ಉಪ್ಪು, ಕಪ್ಪು ಉಪ್ಪು : ಯಾವ ಉಪ್ಪು ಆರೋಗ್ಯಕ್ಕೆ ಒಳ್ಳೆಯದು?

ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…

9 hours ago

ಕೆಲ ಜಿಲ್ಲೆಯ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ : ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ

ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…

10 hours ago

ವರುಣ ಕೃಪೆ ತೋರದಿದ್ರೆ ಭಾರಿ ಸಂಕಷ್ಟ : ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ!

ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…

12 hours ago

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

14 hours ago