ಮಂಗಳೂರು ಸ್ಫೋಟದ ಆರೋಪಿ ಶಾರಿಕ್ ​ ಸಾಮಾನ್ಯದವನಲ್ಲ | ಹೊರಬಂದ ಖತರ್‌ನಾಕ್‌ ಬುದ್ಧಿ |

November 21, 2022
9:24 PM

ಮಂಗಳೂರು ನಗರದ ನಾಗುರಿ ಬಳಿ ಚಲಿಸುತ್ತಿದ್ದ ಅಟೋ  ಆಟೋ ರಿಕ್ಷಾದಲ್ಲಿ ಶನಿವಾರ ಸಂಜೆ ಸ್ಫೋಟ ಸಂಭವಿಸಿದ ನಂತರ ಪೊಲೀಸರು ನಡೆಸಿದ ತನಿಖೆಯಲ್ಲಿ ಉಗ್ರರ ಜಾಲ ಸಿಕ್ಕಿತ್ತು. ಆರೋಪಿ ಶಾರಿಕ್‌ ವಶಕ್ಕೆ ಪಡೆದ ಬಳಿಕ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಆರೋಪಿ ಮೊಹಮ್ಮದ್ ಶಾರಿಕ್‌ನ ಮಾಹಿತಿ ಕಲೆಹಾಕಲು ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ತಂಡ ಸೋಮವಾರ ಮೈಸೂರಿಗೆ ಕೂಡಾ ತೆರಳಿದೆ.

Advertisement
Advertisement
Advertisement
Advertisement

ಬಾಂಬ್‌ ಸ್ಫೋಟದ ಆರೋಪಿ  ಶಾರೀಕ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದವನು. ಶಿವಮೊಗ್ಗದ ತೀರ್ಥಹಳ್ಳಿ ಸೊಪ್ಪಿನಗುಡ್ಡೆ ವಾಸಿ ತಂದೆ ಜೊತೆ ಬಟ್ಟೆ ಅಂಗಡಿ ನೋಡಿಕೊಳ್ಳುತ್ತಿದ್ದ ತಂದೆ ಸಾವಿನ ಬಳಿಕ ಮಲತಾಯಿ ಜೊತೆಗಿದ್ದ ಶಾರಿಕ್​​​​ ಬಳಿಕ ಕಣ್ಮರೆಯಾಗಿದ್ದ. ಆತ ಕೆಲವೊಂದು ಅಪರಾಧ ಕೃತ್ಯಗಳಲ್ಲಿ ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ. ಶಾರೀಕ್ ಆಗಸ್ಟ್ 15, 2022 ರ ಶಿವಮೊಗ್ಗ ಗಲಾಟೆ ಬಳಿಕ ಎಚ್ಚೆತ್ತುಕೊಂಡಿದ್ದ. ಆಗಸ್ಟ್ 23ರ ಬಳಿಕ ಅಲ್ಲಿಂದ ಪರಾರಿಯಾಗಿದ್ದ. ಮೊಹಮ್ಮದ್ ಶಾರಿಕ್ ತನ್ನ ಹೆಸರಿನಲ್ಲಿ ಎಂದಿಗೂ ಫೋನ್ ಬಳಸಿಲ್ಲ ಮತ್ತು  ಕೆಲವು ಗುರುತುಗಳನ್ನು ಬಳಸಿಕೊಂಡು  ನಕಲಿ ಐಡಿಗಳು ಮತ್ತು ಸಿಮ್‌ಗಳನ್ನು ಬಳಸುತ್ತಿದ್ದ ಎಂದು ತಿಳಿದುಬಂದಿದೆ.ಆರೋಪಿ ಮೊಹಮ್ಮದ್ ಶಾರಿಕ್ ತಂತ್ರಜ್ಞಾನದ ಬಳಕೆಯಲ್ಲಿ ಬಹಳ ಜಾಗರೂಕರಾಗಿದ್ದ ಎಂದು ಉನ್ನತ ಗುಪ್ತಚರ ಮೂಲಗಳು ಮಾದ್ಯಮಗಳಿಗೆ ತಿಳಿಸಿವೆ.

Advertisement

ಮಂಗಳೂರು ಸ್ಫೋಟದ ಪರಿಣಾಮ ಹಾಗೂ ಆರೋಪಿಗಳು ಮೈಸೂರಿನಲ್ಲಿ ವಾಸವಿದ್ದ ಕಾರಣ, ಅಲ್ಲೂ ತನಿಖೆ ನಡೆಯುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |
February 23, 2025
11:41 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror