MIRROR FOCUS

ರಾಜ್ಯಕ್ಕೆ ಕೇಂದ್ರದಿಂದ ಬರ ಪರಿಹಾರ ನೀಡದ ಹಿನ್ನೆಲೆ | ಕರ್ನಾಟಕ ಸರ್ಕಾರದಿಂದ NDRFಗೆ ಅರ್ಜಿ ಸಲ್ಲಿಕೆ | ಇಂದು ಸುಪ್ರೀಂನಲ್ಲಿ ವಿಚಾರಣೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯಾದ್ಯಂತ ಮಳೆ ಕೊರತೆಯಿಂದ(Rain Crisis) ಬರಗಾಲ(Drought) ತಾಂಡವಾಡುತ್ತಿದೆ. ರಾಜ್ಯದ ಬಹುತೇಕ ಜಿಲ್ಲೆಗಳು ಬರಗಾಲಕ್ಕೆ ತುತ್ತಾಗಿದೆ. ಕಷ್ಟಪಟ್ಟು ಬೆಳೆದ ಬೆಳೆ(Crop) ಮಳೆ ಇಲ್ಲದ ಕಾರಣ ಕೈಗೆ ಬಾರದೆ ರೈತರು(Farmer) ಕಂಗಾಲಾಗಿದ್ದಾರೆ. ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕಾದ ಸರ್ಕಾರಗಳು(Govt) ಕಣ್ಣು ಮುಚ್ಚಿ ಕುಳಿತಿವೆ. ರಾಜ್ಯ ಸರ್ಕಾರ(State Govt) ಕೇಂದ್ರದ(Central) ಮೇಲೆ ಬರ ಪರಿಹಾರ ನೀಡಿಲ್ಲ ಎಂದು ಆರೋಪ ಮಾಡಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (NDRF) ಅಡಿಯಲ್ಲಿ ರಾಜ್ಯಕ್ಕೆ 18,171 ಕೋಟಿ ರೂ. ಬರ ಪರಿಹಾರ ಕೋರಿ ಕರ್ನಾಟಕ ಸರ್ಕಾರ(Karnataka Govt) ಅರ್ಜಿ ಸಲ್ಲಿಸಿದ್ದು, ಇಂದು (ಸೋಮವಾರ) ಸುಪ್ರೀಂ ಕೋರ್ಟ್‌ನಲ್ಲಿ (Supreme Court) ವಿಚಾರಣೆ ನಡೆಯಲಿದೆ. ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ನೇತೃತ್ವದ ಪೀಠವು ಅರ್ಜಿ ವಿಚಾರಣೆ ನಡೆಸಲಿದೆ.

Advertisement

ಬರದ ಪ್ರಮಾಣ ಎಷ್ಟಿದೆ? : ರಾಜ್ಯವು ಕೇಂದ್ರ ಸರ್ಕಾರಕ್ಕೆ (Karnataka govt) ಸಲ್ಲಿಸಿದ ವರದಿ ಪ್ರಕಾರ, 236 ತಾಲೂಕುಗಳ ಪೈಕಿ 223 ತಾಲೂಕುಗಳು ಬರಪೀಡಿತ ಎಂದು ಘೋಷಿಸಲಾಗಿದೆ. ಬರ ಪರಿಣಾಮದಿಂದಾಗಿ 48 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಬೆಳೆ (ಕೃಷಿ ಹಾಗೂ ತೋಟಗಾರಿಕಾ ಬೆಳೆ) ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. 2023ರ ಅಕ್ಟೋಬರ್‌ನಲ್ಲಿ ನಷ್ಟ ಪರಿಶೀಲಿಸಲು ಅಂತರ-ಸಚಿವಾಲಯದ ಕೇಂದ್ರ ತಂಡ (ಐಎಂಸಿಟಿ) ಸಹ ರಾಜ್ಯಕ್ಕೆ ಭೇಟಿ ನೀಡಿತ್ತು. ಕಳೆದ ವರ್ಷ ಮುಂಗಾರು ಹಂಗಾಮಿನಲ್ಲಿ (ಜೂನ್) ಮಳೆಯ ಕೊರತೆ ಶೇ.56 ರಷ್ಟಿತ್ತು. ಅಂದರೆ 122 ವರ್ಷಗಳ ಬಳಿಕ ಈ ಪ್ರಮಾಣದ ಕೊರತೆ ಎದುರಾಗಿದೆ. ಜೊತೆಗೆ ಆಗಸ್ಟ್ ತಿಂಗಳಲ್ಲಿ ಶೇ.73 ಮಳೆ ಕೊರತೆ ಉಂಟಾಗಿದೆ.

ಅಷ್ಟೇ ಅಲ್ಲ ಕಳೆದ ವರ್ಷದ ಮಾನ್ಸೂನ್ ಸಮಯದಲ್ಲಿಯೂ ಕರ್ನಾಟಕದಲ್ಲಿ ಸಾಮಾನ್ಯಕ್ಕಿಂತ 18% ಕಡಿಮೆ ಮಳೆಯಾಗಿದೆ. 2015ರ ಬಳಿಕ ಈ ಪ್ರಮಾಣದಲ್ಲಿ ಕಡಿಮೆ ಮಳೆ ಬಿದ್ದಿದೆ. ಮುಂಗಾರು ನಂತರದ ಅವಧಿಯು ಸಹ ರಾಜ್ಯಕ್ಕೆ ಹೆಚ್ಚಿನ ಮಳೆಯನ್ನು ತರಲಿಲ್ಲ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಬರ ಪರಿಹಾರ ನೀಡುವಂತೆ ರಾಜ್ಯ ಸರ್ಕಾರದಿಂದ ಮೂರು ಬಾರಿ ಪತ್ರ ಬರೆದಿದ್ದರು, ಖುದ್ದು ಭೇಟಿ ಮಾಡಿ ಮನವಿ ಮಾಡಿದ್ದರೂ, ಕೇಂದ್ರ ಸರ್ಕಾರ ಪರಿಹಾರ ಬಿಡುಗೆ ಮಾಡುವ ಮನಸ್ಸು ಮಾಡಿಲ್ಲ. ಆದ್ದರಿಂದ ಪರಿಹಾರ ಬಿಡುಗಡೆಗೆ ಕಟ್ಟಿನಿಟ್ಟಿನ ಸೂಚನೆ ನೀಡುವಂತೆ ಕರ್ನಾಟಕ ಸರ್ಕಾರ ಅರ್ಜಿಯಲ್ಲಿ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ.

  • ಅಂತರ್ಜಾಲ ಮಾಹಿತಿ

18,171 crore to the state under the National Disaster Management Fund (NDRF). Karnataka Govt has filed an application seeking drought relief, today (Monday) hearing will be held in the Supreme Court. A bench headed by Justice BR Gavai will hear the petition.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೇತುವಿನಿಂದ 18 ತಿಂಗಳು ಈ ರಾಶಿಯವರಿಗೆಲ್ಲಾ ಉತ್ತಮವಾಗಲಿದೆ |

ಹೆಚ್ಚಿನ ವೈಯಕ್ತಿಕ ಸಲಹೆಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 hours ago

ಮುಂಗಾರು ಮೇ 27 ರಂದು ಆರಂಭ | ನಿಗದಿತ ಸಮಯಕ್ಕಿಂತ ಮೊದಲೇ ಮಳೆಗಾಲ ಆರಂಭ | ಕೇರಳದಲ್ಲಿ ಇಂದು ಮಳೆ ಸಾಧ್ಯತೆ |

ಭಾರತದ ಮೇಲೆ ನೈಋತ್ಯ ಮಾನ್ಸೂನ್‌ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…

1 day ago

ಈ ರಾಶಿಯವರಿಗೆ, ಮುಟ್ಟಿದ್ದೆಲ್ಲ ಚಿನ್ನ ಆ ರಾಶಿಗಳು ಯಾವುದು ತಿಳಿಯೋಣ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515649

1 day ago

ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ

ಭಾರತವು ಭಯೋತ್ಪಾದನೆಯನ್ನು ಸಹಿಸುವುದಿಲ್ಲ, ಪ್ರತಿಕ್ರಿಯಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

1 day ago

ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ

ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…

2 days ago

ಕೃಷಿ ಅಕಾಡೆಮಿ ರಚನೆ – ಮುಳಿಯ ಕೃಷಿ ಗೋಷ್ಟಿಯಲ್ಲಿ ಕೇಶವ ಪ್ರಸಾದ್ ಮುಳಿಯ |

ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…

2 days ago