Advertisement
ಕಾರ್ಯಕ್ರಮಗಳು

ಬದನಾಜೆ ಶಂಕರ್ ಭಟ್ | ಅಡಿಕೆ ಮೌಲ್ಯವರ್ಧನೆಯ ನೆಲ ವಿಜ್ಞಾನಿ | ಆ.18 ಕ್ಕೆ ನರೇಂದ್ರ ರೈ ದೇರ್ಲ ಅವರ ಪುಸ್ತಕ ಬಿಡುಗಡೆ |

Share

ಅಡಿಕೆಯ ಮೌಲ್ಯವರ್ಧನೆಯ ಬಗ್ಗೆ ಅಧ್ಯಯನ ಮಾಡಿ, ಸ್ವತ: ಪ್ರಯೋಗ ಮಾಡಿರುವ ಬದನಾಜೆಯ ಶಂಕರ ಭಟ್‌ ಅವರ ಜೀವನ ಚರಿತ್ರೆ ‘ಬದನಾಜೆ ಶಂಕರ್ ಭಟ್- ಅಡಿಕೆ ಮೌಲ್ಯವರ್ಧನೆಯ ನೆಲ ವಿಜ್ಞಾನಿ’ ಎಂಬ ನರೇಂದ್ರ ರೈ ದೇರ್ಲಅವರ ಪುಸ್ತಕವು ಆ. 18 ರಂದು ವಿಟ್ಲದ ಮಂಗಳಮಂಟಪದಲ್ಲಿ ಬೆಳಿಗ್ಗೆ 10.30 ಕ್ಕೆ ಬಿಡುಗಡೆಯಾಗಲಿದೆ.

Advertisement

ಜೀವನಪೂರ್ತಿ ಅಡಿಕೆಯ ಬಗ್ಗೆಯೇ ಅಧ್ಯಯನ, ಸಂಶೋಧನೆ ನಡೆಸಿರುವ ಬದನಾಜೆ ಶಂಕರ್ ಭಟ್ಅವರು ಮೂಲ ಆಯುರ್ವೇದ ಪರಂಪರೆಯ ಅಡಿಕೆಯ ಅನೇಕ ಉಪ ಉತ್ಪನ್ನಗಳನ್ನು ಸಂಶೋಧಿಸಿದವರು.

ಅಂಟು, ಸಾಬೂನು, ವೈನ್, ಲಘು ಪಾನೀಯ, ಚೊಗರಿನ ಸಾರ, ವಾರ್ನಿಸ್.. ಹೀಗೆ ತಿಂದು ಉಗುಳುವ ಅಡಿಕೆಯ ಬಹುರೂಪಿ ಬೆಳವಣಿಗೆಗೆ ಬುನಾದಿ ಹಾಕಿದವರು. ಈ ದೇಶದ ಕೃಷಿ ವಿಶ್ವವಿದ್ಯಾನಿಲಯ, ಸಂಶೋಧಕರು, ವಿಜ್ಞಾನಿಗಳು, ಕೃಷಿ ತಜ್ಞರು ಬೆರಗಾಗುವಷ್ಟು ಅಡಿಕೆಯ ಒಳಸುಳಿಗಳನ್ನು ತೆರೆದಿಟ್ಟವರು. ಇಷ್ಟೇ ಅಲ್ಲ ,ಅಡಿಕೆಯ ಮಾರಕ ಮಹಾಳಿ, ಹಳದಿಎಲೆ, ಬೇರುಹುಳಗಳಿಗೂ ಔಷಧಿ ಕಂಡು ಹಿಡಿಯಲು ಪ್ರಯತ್ನಿಸಿದವರು. ತಮ್ಮ ಮನೆಯನ್ನೇ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡು ಇಷ್ಟೆಲ್ಲಾ ಸಂಶೋಧನೆ ಮಾಡಿದ ಜನವಿಜ್ಞಾನಿ 81ರ ಹರೆಯದ ಶಂಕರ ಭಟ್ಟರ ಬಗ್ಗೆ ನರೇಂದ್ರ ರೈ ದೇರ್ಲ ಅವರು ತಮ್ಮ ‘ಕರ್ನಾಟಕ ಕೃಷಿ ಕಥನ ಮಾಲಿಕೆ’ಯ ಆರನೆಯ ಪುಸ್ತಕವನ್ನಾಗಿ ರಚಿಸಿದ್ದಾರೆ.

ಪುಸ್ತಕ ಬಿಡುಗಡೆಯು ವಿಟ್ಲದ ಮಂಗಳ ಮಂಟಪದಲ್ಲಿ ನಡೆಯಲಿದ್ದು ‘ಅಡಿಕೆ ಪತ್ರಿಕೆ’ಯ ಸಂಪಾದಕರಾದ ಶ್ರೀ ಪಡ್ರೆಯವರು ಬಿಡುಗಡೆ ಮಾಡಲಿದ್ದಾರೆ. ‘ಚೌಟರ ತೋಟ’ದ ಖ್ಯಾತಿಯ ಡಾ. ಚಂದ್ರಶೇಖರ್ ಚೌಟರು ಅಧ್ಯಕ್ಷತೆ ವಹಿಸಲಿದ್ದಾರೆ. ‘ಐಟಿಯಿಂದ ಮೇಟಿ’ ಖ್ಯಾತಿಯ ವಸಂತ ಕಜೆ ಅವರು ಪುಸ್ತಕ ಪರಿಚಯಿಸಲಿದ್ದಾರೆ. ವಿಜ್ಞಾನಿ ಡಾ. ಸರ್ಪಂಗಳ ಕೇಶವ ಭಟ್ ಮತ್ತು ಡಾ ಎಂ ಎಸ್ ಭಟ್ ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

3 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

17 hours ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

18 hours ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

18 hours ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

18 hours ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

18 hours ago