ಕಾರ್ಯಕ್ರಮಗಳು

ಬದನಾಜೆ ಶಂಕರ್ ಭಟ್ | ಅಡಿಕೆ ಮೌಲ್ಯವರ್ಧನೆಯ ನೆಲ ವಿಜ್ಞಾನಿ | ಆ.18 ಕ್ಕೆ ನರೇಂದ್ರ ರೈ ದೇರ್ಲ ಅವರ ಪುಸ್ತಕ ಬಿಡುಗಡೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಡಿಕೆಯ ಮೌಲ್ಯವರ್ಧನೆಯ ಬಗ್ಗೆ ಅಧ್ಯಯನ ಮಾಡಿ, ಸ್ವತ: ಪ್ರಯೋಗ ಮಾಡಿರುವ ಬದನಾಜೆಯ ಶಂಕರ ಭಟ್‌ ಅವರ ಜೀವನ ಚರಿತ್ರೆ ‘ಬದನಾಜೆ ಶಂಕರ್ ಭಟ್- ಅಡಿಕೆ ಮೌಲ್ಯವರ್ಧನೆಯ ನೆಲ ವಿಜ್ಞಾನಿ’ ಎಂಬ ನರೇಂದ್ರ ರೈ ದೇರ್ಲಅವರ ಪುಸ್ತಕವು ಆ. 18 ರಂದು ವಿಟ್ಲದ ಮಂಗಳಮಂಟಪದಲ್ಲಿ ಬೆಳಿಗ್ಗೆ 10.30 ಕ್ಕೆ ಬಿಡುಗಡೆಯಾಗಲಿದೆ.

Advertisement
Advertisement

ಜೀವನಪೂರ್ತಿ ಅಡಿಕೆಯ ಬಗ್ಗೆಯೇ ಅಧ್ಯಯನ, ಸಂಶೋಧನೆ ನಡೆಸಿರುವ ಬದನಾಜೆ ಶಂಕರ್ ಭಟ್ಅವರು ಮೂಲ ಆಯುರ್ವೇದ ಪರಂಪರೆಯ ಅಡಿಕೆಯ ಅನೇಕ ಉಪ ಉತ್ಪನ್ನಗಳನ್ನು ಸಂಶೋಧಿಸಿದವರು.

ಅಂಟು, ಸಾಬೂನು, ವೈನ್, ಲಘು ಪಾನೀಯ, ಚೊಗರಿನ ಸಾರ, ವಾರ್ನಿಸ್.. ಹೀಗೆ ತಿಂದು ಉಗುಳುವ ಅಡಿಕೆಯ ಬಹುರೂಪಿ ಬೆಳವಣಿಗೆಗೆ ಬುನಾದಿ ಹಾಕಿದವರು. ಈ ದೇಶದ ಕೃಷಿ ವಿಶ್ವವಿದ್ಯಾನಿಲಯ, ಸಂಶೋಧಕರು, ವಿಜ್ಞಾನಿಗಳು, ಕೃಷಿ ತಜ್ಞರು ಬೆರಗಾಗುವಷ್ಟು ಅಡಿಕೆಯ ಒಳಸುಳಿಗಳನ್ನು ತೆರೆದಿಟ್ಟವರು. ಇಷ್ಟೇ ಅಲ್ಲ ,ಅಡಿಕೆಯ ಮಾರಕ ಮಹಾಳಿ, ಹಳದಿಎಲೆ, ಬೇರುಹುಳಗಳಿಗೂ ಔಷಧಿ ಕಂಡು ಹಿಡಿಯಲು ಪ್ರಯತ್ನಿಸಿದವರು. ತಮ್ಮ ಮನೆಯನ್ನೇ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡು ಇಷ್ಟೆಲ್ಲಾ ಸಂಶೋಧನೆ ಮಾಡಿದ ಜನವಿಜ್ಞಾನಿ 81ರ ಹರೆಯದ ಶಂಕರ ಭಟ್ಟರ ಬಗ್ಗೆ ನರೇಂದ್ರ ರೈ ದೇರ್ಲ ಅವರು ತಮ್ಮ ‘ಕರ್ನಾಟಕ ಕೃಷಿ ಕಥನ ಮಾಲಿಕೆ’ಯ ಆರನೆಯ ಪುಸ್ತಕವನ್ನಾಗಿ ರಚಿಸಿದ್ದಾರೆ.

ಪುಸ್ತಕ ಬಿಡುಗಡೆಯು ವಿಟ್ಲದ ಮಂಗಳ ಮಂಟಪದಲ್ಲಿ ನಡೆಯಲಿದ್ದು ‘ಅಡಿಕೆ ಪತ್ರಿಕೆ’ಯ ಸಂಪಾದಕರಾದ ಶ್ರೀ ಪಡ್ರೆಯವರು ಬಿಡುಗಡೆ ಮಾಡಲಿದ್ದಾರೆ. ‘ಚೌಟರ ತೋಟ’ದ ಖ್ಯಾತಿಯ ಡಾ. ಚಂದ್ರಶೇಖರ್ ಚೌಟರು ಅಧ್ಯಕ್ಷತೆ ವಹಿಸಲಿದ್ದಾರೆ. ‘ಐಟಿಯಿಂದ ಮೇಟಿ’ ಖ್ಯಾತಿಯ ವಸಂತ ಕಜೆ ಅವರು ಪುಸ್ತಕ ಪರಿಚಯಿಸಲಿದ್ದಾರೆ. ವಿಜ್ಞಾನಿ ಡಾ. ಸರ್ಪಂಗಳ ಕೇಶವ ಭಟ್ ಮತ್ತು ಡಾ ಎಂ ಎಸ್ ಭಟ್ ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಸ್ಯ ಪರಿಚಯ | ಕರ್ಲೆಂಕಿ

ಅಚ್ಚ ಹಸುರಿನ ಉರುಟುರುಟಾದ ರೂಪಾಯಿ ನಾಣ್ಯದಷ್ಟು ಗಾತ್ರದ ಎಲೆಗಳ ದಂಟುಗಳನ್ನು ಹೊಂದಿರುವ ಗಿಡ…

7 hours ago

ಹವಾಮಾನ ಮಾಹಿತಿ | ಈಗ ಎಲ್ಲೆಲ್ಲಾ ಭರ್ಜರಿ ಮಳೆ..? ಎಲ್ಲಿ ಕುಸಿತ..?

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭರ್ಜರಿಯಾಗಿ ಸುರಿದ ಮಳೆ ಈಗ ಸ್ವಲ್ಪ ವಿರಾಮ…

8 hours ago

ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆ | ರಾಜ್ಯದ ನದಿಗಳಿಗೆ 79 ಸಾವಿರದ 44 ಕ್ಯೂಸೆಕ್ ನೀರು

ಮಹಾರಾಷ್ಟ್ರದಲ್ಲಿ  ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯದ ನದಿ ಪಾತ್ರಗಳಿಗೆ 79 ಸಾವಿರದ 44 ಕ್ಯೂಸೆಕ್…

9 hours ago

ವಾರದ ಅತಿಥಿ | ಮರ ಬಳಸದೆಯೇ ಮನೆ ನಿರ್ಮಾಣ, “ದ್ವಾರಕಾ”ದಿಂದ ಪರಿಸರಕ್ಕೊಂದು ಕೊಡುಗೆ

ಕಳೆದ ಸುಮಾರು 5-6 ವರ್ಷಗಳಿಂದ ಮನೆಗಳಿಗೆ ಮರ ಬಳಕೆ ಮಾಡುತ್ತಿಲ್ಲ. ಈಗಾಗಲೇ ಸುಮಾರು…

13 hours ago

ಶುಕ್ರವಾರ ಮಹಾಲಕ್ಷ್ಮಿಯ ಈ ಮಂತ್ರವನ್ನು ಭಕ್ತಿಯಿಂದ ಪಠಿಸಿದರೆ ಹಣದ ಸಮಸ್ಯೆ ನಿವಾರಣೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

23 hours ago

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ

ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ  ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಾಲಕಿ ಋತ್ವಿ ಯೋಗ…

1 day ago