Advertisement
ಕಾರ್ಯಕ್ರಮಗಳು

ಬದನಾಜೆ ಶಂಕರ್ ಭಟ್ | ಅಡಿಕೆ ಮೌಲ್ಯವರ್ಧನೆಯ ನೆಲ ವಿಜ್ಞಾನಿ | ಆ.18 ಕ್ಕೆ ನರೇಂದ್ರ ರೈ ದೇರ್ಲ ಅವರ ಪುಸ್ತಕ ಬಿಡುಗಡೆ |

Share

ಅಡಿಕೆಯ ಮೌಲ್ಯವರ್ಧನೆಯ ಬಗ್ಗೆ ಅಧ್ಯಯನ ಮಾಡಿ, ಸ್ವತ: ಪ್ರಯೋಗ ಮಾಡಿರುವ ಬದನಾಜೆಯ ಶಂಕರ ಭಟ್‌ ಅವರ ಜೀವನ ಚರಿತ್ರೆ ‘ಬದನಾಜೆ ಶಂಕರ್ ಭಟ್- ಅಡಿಕೆ ಮೌಲ್ಯವರ್ಧನೆಯ ನೆಲ ವಿಜ್ಞಾನಿ’ ಎಂಬ ನರೇಂದ್ರ ರೈ ದೇರ್ಲಅವರ ಪುಸ್ತಕವು ಆ. 18 ರಂದು ವಿಟ್ಲದ ಮಂಗಳಮಂಟಪದಲ್ಲಿ ಬೆಳಿಗ್ಗೆ 10.30 ಕ್ಕೆ ಬಿಡುಗಡೆಯಾಗಲಿದೆ.

ಜೀವನಪೂರ್ತಿ ಅಡಿಕೆಯ ಬಗ್ಗೆಯೇ ಅಧ್ಯಯನ, ಸಂಶೋಧನೆ ನಡೆಸಿರುವ ಬದನಾಜೆ ಶಂಕರ್ ಭಟ್ಅವರು ಮೂಲ ಆಯುರ್ವೇದ ಪರಂಪರೆಯ ಅಡಿಕೆಯ ಅನೇಕ ಉಪ ಉತ್ಪನ್ನಗಳನ್ನು ಸಂಶೋಧಿಸಿದವರು.

ಅಂಟು, ಸಾಬೂನು, ವೈನ್, ಲಘು ಪಾನೀಯ, ಚೊಗರಿನ ಸಾರ, ವಾರ್ನಿಸ್.. ಹೀಗೆ ತಿಂದು ಉಗುಳುವ ಅಡಿಕೆಯ ಬಹುರೂಪಿ ಬೆಳವಣಿಗೆಗೆ ಬುನಾದಿ ಹಾಕಿದವರು. ಈ ದೇಶದ ಕೃಷಿ ವಿಶ್ವವಿದ್ಯಾನಿಲಯ, ಸಂಶೋಧಕರು, ವಿಜ್ಞಾನಿಗಳು, ಕೃಷಿ ತಜ್ಞರು ಬೆರಗಾಗುವಷ್ಟು ಅಡಿಕೆಯ ಒಳಸುಳಿಗಳನ್ನು ತೆರೆದಿಟ್ಟವರು. ಇಷ್ಟೇ ಅಲ್ಲ ,ಅಡಿಕೆಯ ಮಾರಕ ಮಹಾಳಿ, ಹಳದಿಎಲೆ, ಬೇರುಹುಳಗಳಿಗೂ ಔಷಧಿ ಕಂಡು ಹಿಡಿಯಲು ಪ್ರಯತ್ನಿಸಿದವರು. ತಮ್ಮ ಮನೆಯನ್ನೇ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡು ಇಷ್ಟೆಲ್ಲಾ ಸಂಶೋಧನೆ ಮಾಡಿದ ಜನವಿಜ್ಞಾನಿ 81ರ ಹರೆಯದ ಶಂಕರ ಭಟ್ಟರ ಬಗ್ಗೆ ನರೇಂದ್ರ ರೈ ದೇರ್ಲ ಅವರು ತಮ್ಮ ‘ಕರ್ನಾಟಕ ಕೃಷಿ ಕಥನ ಮಾಲಿಕೆ’ಯ ಆರನೆಯ ಪುಸ್ತಕವನ್ನಾಗಿ ರಚಿಸಿದ್ದಾರೆ.

ಪುಸ್ತಕ ಬಿಡುಗಡೆಯು ವಿಟ್ಲದ ಮಂಗಳ ಮಂಟಪದಲ್ಲಿ ನಡೆಯಲಿದ್ದು ‘ಅಡಿಕೆ ಪತ್ರಿಕೆ’ಯ ಸಂಪಾದಕರಾದ ಶ್ರೀ ಪಡ್ರೆಯವರು ಬಿಡುಗಡೆ ಮಾಡಲಿದ್ದಾರೆ. ‘ಚೌಟರ ತೋಟ’ದ ಖ್ಯಾತಿಯ ಡಾ. ಚಂದ್ರಶೇಖರ್ ಚೌಟರು ಅಧ್ಯಕ್ಷತೆ ವಹಿಸಲಿದ್ದಾರೆ. ‘ಐಟಿಯಿಂದ ಮೇಟಿ’ ಖ್ಯಾತಿಯ ವಸಂತ ಕಜೆ ಅವರು ಪುಸ್ತಕ ಪರಿಚಯಿಸಲಿದ್ದಾರೆ. ವಿಜ್ಞಾನಿ ಡಾ. ಸರ್ಪಂಗಳ ಕೇಶವ ಭಟ್ ಮತ್ತು ಡಾ ಎಂ ಎಸ್ ಭಟ್ ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

8 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

9 hours ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

10 hours ago

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…

11 hours ago

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

24 hours ago