Advertisement
ಕಾರ್ಯಕ್ರಮಗಳು

ಬದನಾಜೆ ಶಂಕರ್ ಭಟ್ | ಅಡಿಕೆ ಮೌಲ್ಯವರ್ಧನೆಯ ನೆಲ ವಿಜ್ಞಾನಿ | ಆ.18 ಕ್ಕೆ ನರೇಂದ್ರ ರೈ ದೇರ್ಲ ಅವರ ಪುಸ್ತಕ ಬಿಡುಗಡೆ |

Share

ಅಡಿಕೆಯ ಮೌಲ್ಯವರ್ಧನೆಯ ಬಗ್ಗೆ ಅಧ್ಯಯನ ಮಾಡಿ, ಸ್ವತ: ಪ್ರಯೋಗ ಮಾಡಿರುವ ಬದನಾಜೆಯ ಶಂಕರ ಭಟ್‌ ಅವರ ಜೀವನ ಚರಿತ್ರೆ ‘ಬದನಾಜೆ ಶಂಕರ್ ಭಟ್- ಅಡಿಕೆ ಮೌಲ್ಯವರ್ಧನೆಯ ನೆಲ ವಿಜ್ಞಾನಿ’ ಎಂಬ ನರೇಂದ್ರ ರೈ ದೇರ್ಲಅವರ ಪುಸ್ತಕವು ಆ. 18 ರಂದು ವಿಟ್ಲದ ಮಂಗಳಮಂಟಪದಲ್ಲಿ ಬೆಳಿಗ್ಗೆ 10.30 ಕ್ಕೆ ಬಿಡುಗಡೆಯಾಗಲಿದೆ.

ಜೀವನಪೂರ್ತಿ ಅಡಿಕೆಯ ಬಗ್ಗೆಯೇ ಅಧ್ಯಯನ, ಸಂಶೋಧನೆ ನಡೆಸಿರುವ ಬದನಾಜೆ ಶಂಕರ್ ಭಟ್ಅವರು ಮೂಲ ಆಯುರ್ವೇದ ಪರಂಪರೆಯ ಅಡಿಕೆಯ ಅನೇಕ ಉಪ ಉತ್ಪನ್ನಗಳನ್ನು ಸಂಶೋಧಿಸಿದವರು.

ಅಂಟು, ಸಾಬೂನು, ವೈನ್, ಲಘು ಪಾನೀಯ, ಚೊಗರಿನ ಸಾರ, ವಾರ್ನಿಸ್.. ಹೀಗೆ ತಿಂದು ಉಗುಳುವ ಅಡಿಕೆಯ ಬಹುರೂಪಿ ಬೆಳವಣಿಗೆಗೆ ಬುನಾದಿ ಹಾಕಿದವರು. ಈ ದೇಶದ ಕೃಷಿ ವಿಶ್ವವಿದ್ಯಾನಿಲಯ, ಸಂಶೋಧಕರು, ವಿಜ್ಞಾನಿಗಳು, ಕೃಷಿ ತಜ್ಞರು ಬೆರಗಾಗುವಷ್ಟು ಅಡಿಕೆಯ ಒಳಸುಳಿಗಳನ್ನು ತೆರೆದಿಟ್ಟವರು. ಇಷ್ಟೇ ಅಲ್ಲ ,ಅಡಿಕೆಯ ಮಾರಕ ಮಹಾಳಿ, ಹಳದಿಎಲೆ, ಬೇರುಹುಳಗಳಿಗೂ ಔಷಧಿ ಕಂಡು ಹಿಡಿಯಲು ಪ್ರಯತ್ನಿಸಿದವರು. ತಮ್ಮ ಮನೆಯನ್ನೇ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡು ಇಷ್ಟೆಲ್ಲಾ ಸಂಶೋಧನೆ ಮಾಡಿದ ಜನವಿಜ್ಞಾನಿ 81ರ ಹರೆಯದ ಶಂಕರ ಭಟ್ಟರ ಬಗ್ಗೆ ನರೇಂದ್ರ ರೈ ದೇರ್ಲ ಅವರು ತಮ್ಮ ‘ಕರ್ನಾಟಕ ಕೃಷಿ ಕಥನ ಮಾಲಿಕೆ’ಯ ಆರನೆಯ ಪುಸ್ತಕವನ್ನಾಗಿ ರಚಿಸಿದ್ದಾರೆ.

ಪುಸ್ತಕ ಬಿಡುಗಡೆಯು ವಿಟ್ಲದ ಮಂಗಳ ಮಂಟಪದಲ್ಲಿ ನಡೆಯಲಿದ್ದು ‘ಅಡಿಕೆ ಪತ್ರಿಕೆ’ಯ ಸಂಪಾದಕರಾದ ಶ್ರೀ ಪಡ್ರೆಯವರು ಬಿಡುಗಡೆ ಮಾಡಲಿದ್ದಾರೆ. ‘ಚೌಟರ ತೋಟ’ದ ಖ್ಯಾತಿಯ ಡಾ. ಚಂದ್ರಶೇಖರ್ ಚೌಟರು ಅಧ್ಯಕ್ಷತೆ ವಹಿಸಲಿದ್ದಾರೆ. ‘ಐಟಿಯಿಂದ ಮೇಟಿ’ ಖ್ಯಾತಿಯ ವಸಂತ ಕಜೆ ಅವರು ಪುಸ್ತಕ ಪರಿಚಯಿಸಲಿದ್ದಾರೆ. ವಿಜ್ಞಾನಿ ಡಾ. ಸರ್ಪಂಗಳ ಕೇಶವ ಭಟ್ ಮತ್ತು ಡಾ ಎಂ ಎಸ್ ಭಟ್ ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

18 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

1 day ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

1 day ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago