Advertisement
ಕಾರ್ಯಕ್ರಮಗಳು

ಬದನಾಜೆ ಶಂಕರ್ ಭಟ್ | ಅಡಿಕೆ ಮೌಲ್ಯವರ್ಧನೆಯ ನೆಲ ವಿಜ್ಞಾನಿ | ಆ.18 ಕ್ಕೆ ನರೇಂದ್ರ ರೈ ದೇರ್ಲ ಅವರ ಪುಸ್ತಕ ಬಿಡುಗಡೆ |

Share

ಅಡಿಕೆಯ ಮೌಲ್ಯವರ್ಧನೆಯ ಬಗ್ಗೆ ಅಧ್ಯಯನ ಮಾಡಿ, ಸ್ವತ: ಪ್ರಯೋಗ ಮಾಡಿರುವ ಬದನಾಜೆಯ ಶಂಕರ ಭಟ್‌ ಅವರ ಜೀವನ ಚರಿತ್ರೆ ‘ಬದನಾಜೆ ಶಂಕರ್ ಭಟ್- ಅಡಿಕೆ ಮೌಲ್ಯವರ್ಧನೆಯ ನೆಲ ವಿಜ್ಞಾನಿ’ ಎಂಬ ನರೇಂದ್ರ ರೈ ದೇರ್ಲಅವರ ಪುಸ್ತಕವು ಆ. 18 ರಂದು ವಿಟ್ಲದ ಮಂಗಳಮಂಟಪದಲ್ಲಿ ಬೆಳಿಗ್ಗೆ 10.30 ಕ್ಕೆ ಬಿಡುಗಡೆಯಾಗಲಿದೆ.

ಜೀವನಪೂರ್ತಿ ಅಡಿಕೆಯ ಬಗ್ಗೆಯೇ ಅಧ್ಯಯನ, ಸಂಶೋಧನೆ ನಡೆಸಿರುವ ಬದನಾಜೆ ಶಂಕರ್ ಭಟ್ಅವರು ಮೂಲ ಆಯುರ್ವೇದ ಪರಂಪರೆಯ ಅಡಿಕೆಯ ಅನೇಕ ಉಪ ಉತ್ಪನ್ನಗಳನ್ನು ಸಂಶೋಧಿಸಿದವರು.

ಅಂಟು, ಸಾಬೂನು, ವೈನ್, ಲಘು ಪಾನೀಯ, ಚೊಗರಿನ ಸಾರ, ವಾರ್ನಿಸ್.. ಹೀಗೆ ತಿಂದು ಉಗುಳುವ ಅಡಿಕೆಯ ಬಹುರೂಪಿ ಬೆಳವಣಿಗೆಗೆ ಬುನಾದಿ ಹಾಕಿದವರು. ಈ ದೇಶದ ಕೃಷಿ ವಿಶ್ವವಿದ್ಯಾನಿಲಯ, ಸಂಶೋಧಕರು, ವಿಜ್ಞಾನಿಗಳು, ಕೃಷಿ ತಜ್ಞರು ಬೆರಗಾಗುವಷ್ಟು ಅಡಿಕೆಯ ಒಳಸುಳಿಗಳನ್ನು ತೆರೆದಿಟ್ಟವರು. ಇಷ್ಟೇ ಅಲ್ಲ ,ಅಡಿಕೆಯ ಮಾರಕ ಮಹಾಳಿ, ಹಳದಿಎಲೆ, ಬೇರುಹುಳಗಳಿಗೂ ಔಷಧಿ ಕಂಡು ಹಿಡಿಯಲು ಪ್ರಯತ್ನಿಸಿದವರು. ತಮ್ಮ ಮನೆಯನ್ನೇ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡು ಇಷ್ಟೆಲ್ಲಾ ಸಂಶೋಧನೆ ಮಾಡಿದ ಜನವಿಜ್ಞಾನಿ 81ರ ಹರೆಯದ ಶಂಕರ ಭಟ್ಟರ ಬಗ್ಗೆ ನರೇಂದ್ರ ರೈ ದೇರ್ಲ ಅವರು ತಮ್ಮ ‘ಕರ್ನಾಟಕ ಕೃಷಿ ಕಥನ ಮಾಲಿಕೆ’ಯ ಆರನೆಯ ಪುಸ್ತಕವನ್ನಾಗಿ ರಚಿಸಿದ್ದಾರೆ.

ಪುಸ್ತಕ ಬಿಡುಗಡೆಯು ವಿಟ್ಲದ ಮಂಗಳ ಮಂಟಪದಲ್ಲಿ ನಡೆಯಲಿದ್ದು ‘ಅಡಿಕೆ ಪತ್ರಿಕೆ’ಯ ಸಂಪಾದಕರಾದ ಶ್ರೀ ಪಡ್ರೆಯವರು ಬಿಡುಗಡೆ ಮಾಡಲಿದ್ದಾರೆ. ‘ಚೌಟರ ತೋಟ’ದ ಖ್ಯಾತಿಯ ಡಾ. ಚಂದ್ರಶೇಖರ್ ಚೌಟರು ಅಧ್ಯಕ್ಷತೆ ವಹಿಸಲಿದ್ದಾರೆ. ‘ಐಟಿಯಿಂದ ಮೇಟಿ’ ಖ್ಯಾತಿಯ ವಸಂತ ಕಜೆ ಅವರು ಪುಸ್ತಕ ಪರಿಚಯಿಸಲಿದ್ದಾರೆ. ವಿಜ್ಞಾನಿ ಡಾ. ಸರ್ಪಂಗಳ ಕೇಶವ ಭಟ್ ಮತ್ತು ಡಾ ಎಂ ಎಸ್ ಭಟ್ ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

1 hour ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

2 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

9 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

18 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

19 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago