ಬದಿಯಡ್ಕದ ದಂತ ವೈದ್ಯ ಡಾ.ಕೃಷ್ಣಮೂರ್ತಿ ಅವರ ನಿಗೂಡ ಸಾವಿನ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿ ಬದಿಯಡ್ಕದಲ್ಲಿ ವಿಶ್ವ ಹಿಂದು ಪರಿಷತ್ ಆಶ್ರಯದಲ್ಲಿ ಬದಿಯಡ್ಕ ಪೇಟೆಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.
ಘಟನೆಗೆ ಕಾರಣವಾದ ಎಲ್ಲಾ ಶಕ್ತಿಗಳನ್ನೂ ಬಂಧಿಸಬೇಕು ಎಂದು ಇದೇ ವೇಳೆ ಒತ್ತಾಯಿಸಲಾಯಿತು. ಡಾ.ಕೃಷ್ಣಮೂರ್ತಿ ಅವರ ಮನೆಯ ಪರಿಸರದಿಂದ ಹೊರಟ ಬೃಹತ್ ಮೆರವಣಿಗೆಯು ಬದಿಯಡ್ಕ ಪೇಟೆಯಲ್ಲಿ ಸಾಗಿತು. ಬಳಿಕ ನಡೆದ ಸಭೆಯಲ್ಲಿ ಸಂಘ ಪರಿವಾರ ನೇತಾರರಾದ ಶರಣ್ ಪಂಪ್ ವೆಲ್, ನ್ಯಾಯವಾದಿ ಕೆ.ಶ್ರೀಕಾಂತ್, ಪಿ.ರಮೇಶ್ ಕಾಸರಗೋಡು, ಸುಧಾಮ ಗೋಸಾಡ, ಹರೀಶ್ ನಾರಂಪಾಡಿ ಮೊದಲಾದವರು ಮಾತನಾಡಿದರು.
ವಿಶ್ವ ಹಿಂದು ಪರಿಷತ್ ಪ್ರಖಂಡ ಕಾರ್ಯದರ್ಶಿ ಮಂಜುನಾಥ ಮಾನ್ಯ ಸ್ವಾಗತಿಸಿದರು. ಹರೀಶ್ ಪುತ್ರಕಳ ವಂದಿಸಿದರು.
ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6…
ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ.…
ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…
ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…
ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…
ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…