ಬದಿಯಡ್ಕದ ದಂತ ವೈದ್ಯ ಡಾ.ಕೃಷ್ಣಮೂರ್ತಿ ಅವರ ನಿಗೂಡ ಸಾವಿನ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿ ಬದಿಯಡ್ಕದಲ್ಲಿ ವಿಶ್ವ ಹಿಂದು ಪರಿಷತ್ ಆಶ್ರಯದಲ್ಲಿ ಬದಿಯಡ್ಕ ಪೇಟೆಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.
ಘಟನೆಗೆ ಕಾರಣವಾದ ಎಲ್ಲಾ ಶಕ್ತಿಗಳನ್ನೂ ಬಂಧಿಸಬೇಕು ಎಂದು ಇದೇ ವೇಳೆ ಒತ್ತಾಯಿಸಲಾಯಿತು. ಡಾ.ಕೃಷ್ಣಮೂರ್ತಿ ಅವರ ಮನೆಯ ಪರಿಸರದಿಂದ ಹೊರಟ ಬೃಹತ್ ಮೆರವಣಿಗೆಯು ಬದಿಯಡ್ಕ ಪೇಟೆಯಲ್ಲಿ ಸಾಗಿತು. ಬಳಿಕ ನಡೆದ ಸಭೆಯಲ್ಲಿ ಸಂಘ ಪರಿವಾರ ನೇತಾರರಾದ ಶರಣ್ ಪಂಪ್ ವೆಲ್, ನ್ಯಾಯವಾದಿ ಕೆ.ಶ್ರೀಕಾಂತ್, ಪಿ.ರಮೇಶ್ ಕಾಸರಗೋಡು, ಸುಧಾಮ ಗೋಸಾಡ, ಹರೀಶ್ ನಾರಂಪಾಡಿ ಮೊದಲಾದವರು ಮಾತನಾಡಿದರು.
ವಿಶ್ವ ಹಿಂದು ಪರಿಷತ್ ಪ್ರಖಂಡ ಕಾರ್ಯದರ್ಶಿ ಮಂಜುನಾಥ ಮಾನ್ಯ ಸ್ವಾಗತಿಸಿದರು. ಹರೀಶ್ ಪುತ್ರಕಳ ವಂದಿಸಿದರು.
23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…
ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…
ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್ಗಳು ಮತ್ತು…
ಎತ್ತಿನ ಹೊಳೆ ಯೋಜನೆಯ ಮೂಲಕ ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…
ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490