ಬದಿಯಡ್ಕದ ದಂತ ವೈದ್ಯ ಡಾ.ಕೃಷ್ಣಮೂರ್ತಿ ಅವರ ನಿಗೂಡ ಸಾವಿನ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿ ಬದಿಯಡ್ಕದಲ್ಲಿ ವಿಶ್ವ ಹಿಂದು ಪರಿಷತ್ ಆಶ್ರಯದಲ್ಲಿ ಬದಿಯಡ್ಕ ಪೇಟೆಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.
ಘಟನೆಗೆ ಕಾರಣವಾದ ಎಲ್ಲಾ ಶಕ್ತಿಗಳನ್ನೂ ಬಂಧಿಸಬೇಕು ಎಂದು ಇದೇ ವೇಳೆ ಒತ್ತಾಯಿಸಲಾಯಿತು. ಡಾ.ಕೃಷ್ಣಮೂರ್ತಿ ಅವರ ಮನೆಯ ಪರಿಸರದಿಂದ ಹೊರಟ ಬೃಹತ್ ಮೆರವಣಿಗೆಯು ಬದಿಯಡ್ಕ ಪೇಟೆಯಲ್ಲಿ ಸಾಗಿತು. ಬಳಿಕ ನಡೆದ ಸಭೆಯಲ್ಲಿ ಸಂಘ ಪರಿವಾರ ನೇತಾರರಾದ ಶರಣ್ ಪಂಪ್ ವೆಲ್, ನ್ಯಾಯವಾದಿ ಕೆ.ಶ್ರೀಕಾಂತ್, ಪಿ.ರಮೇಶ್ ಕಾಸರಗೋಡು, ಸುಧಾಮ ಗೋಸಾಡ, ಹರೀಶ್ ನಾರಂಪಾಡಿ ಮೊದಲಾದವರು ಮಾತನಾಡಿದರು.
ವಿಶ್ವ ಹಿಂದು ಪರಿಷತ್ ಪ್ರಖಂಡ ಕಾರ್ಯದರ್ಶಿ ಮಂಜುನಾಥ ಮಾನ್ಯ ಸ್ವಾಗತಿಸಿದರು. ಹರೀಶ್ ಪುತ್ರಕಳ ವಂದಿಸಿದರು.
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…